ಶಿವಮೊಗ್ಗ | ಸಂವಿಧಾನದ ಓದು ಪ್ರಜಾಪ್ರಭುತ್ವದ ಅರಿವನ್ನು ವಿಸ್ತರಿಸುತ್ತದೆ ; ನ್ಯಾ. ಹೆಚ್.ಎನ್. ನಾಗಮೋಹನ್ ದಾಸ್

Date:

ಶಿವಮೊಗ್ಗದಲ್ಲಿ ಇಂದು ಸಂವಿಧಾನದ ಓದು ಪ್ರಜಾಪ್ರಭುತ್ವದ ಅರಿವನ್ನು ವಿಸ್ತರಿಸುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು.ಅವರು ಇಂದು ಸಂವಿಧಾನ ಓದು ಅಭಿಯಾನ ಕರ್ನಾಟಕ ಸಮಾನ ಮನಸ್ಕ ಸಂಘಟನೆಗಳು ಇವರ ಸಂಯುಕ್ತಾಶ್ರಯದಲ್ಲಿ ಸಾಗರ ರಸ್ತೆಯಲ್ಲಿರುವ ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ನವೀಕರಣ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶವನ್ನು ತಿಳಿಯದೇ ಭಾರತ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಸಂವಿಧಾನ ತಿಳಿಯದೇ ಅದರ ಮೂಲ ತತ್ವವನ್ನು ಅರಿಯಲು ಸಾಧ್ಯವಾಗುವುದಿಲ್ಲ. ಅಧಿಕಾರ, ನ್ಯಾಯಾಂಗ, ಕಾರ್ಯಾಂಗದ ವ್ಯಾಪ್ತಿಗಳು ಅದರ ಸ್ವೇಚ್ಛಾಚಾರ ಇವುಗಳನ್ನೆಲ್ಲಾ ಸಂವಿಧಾನದ ಮೂಲಕವೇ ನಾವು ಅರ್ಥಮಾಡಿಕೊಳ್ಳಬೇಕಾಗುತ್ತದೆ ಎಂದರು.

1001785846

ಸಂಸ್ಕೃತಿ, ಉಪಸಂಸ್ಕೃತಿ, ಧರ್ಮ, ಜಾತಿ, ಆರ್ಥಿಕ, ಸಾಮಾಜಿಕ ಸಂಬಂಧಗಳು ಇವೆಲ್ಲವೂ ಸಂವಿಧಾನದ ಓದುವಿನಿಂದ ಮನನವಾಗುತ್ತವೆ. ಸಂವಿಧಾನ ಅರ್ಥ ಮಾಡಿಕೊಳ್ಳುವುದರಿಂದ ಸಹಿಷ್ಣುತೆ ಹೆಚ್ಚುತ್ತದೆ ಎಂದರು.ಸಮ ಸಮಾಜದ ನಿರ್ಮಾಣ ಭಾರತೀಯತೆ, ಮಾನವೀಯತೆ ಈ ಮುಂತಾದ ಅಂಶಗಳನ್ನಿಟ್ಟುಕೊಂಡೇ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಆಶಯಗಳು ಕಟ್ಟಕಡೆಯ ಮನುಷ್ಯರನ್ನು ತಲುಪಬೇಕು ಎಂದರು. ಸಂವಿಧಾನ ಎಲ್ಲಾ ಮನುಷ್ಯರು ಸಮಾನರು ಎಂಬ ತತ್ವದ ಅಡಿಯಲ್ಲಿಯೇ ರೂಪುಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮುಖ್ಯ ಅತಿಥಿಯಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂತಹ ಕಾರ್ಯಕ್ರಮಗಳಲ್ಲಿ ರಾಜಕಾರಣಿಗಳು ಭಾಗವಹಿಸುವುದೇ ಒಂದು ಪುಣ್ಯದ ಕೆಲಸ. ಇದು ನಮ್ಮ ಕರ್ತವ್ಯವೂ ಹೌದು. ನೆಲ., ಜಲ, ಭಾಷೆ, ಧರ್ಮ. ಎಲ್ಲವೂ ಸೇರಿಯೇ ಭಾರತವಾಗಿದೆ. ಇದರ ರಕ್ಷಣೆಗೆ ಸಂವಿಧಾನೆ ನಿಂತುಕೊಂಡಿದೆ. ಸಂವಿಧಾನವನ್ನು ನಾವು ರಕ್ಷಿಸಬೇಕಾಗ ಸಂದರ್ಭ ಬಂದಿರುವುದು ವಿಷಾದನೀಯ. ಆದರೆ ಭಾರತೀಯರಿಗೆ ಸಂವಿಧಾನವೇ ಶ್ರೇಷ್ಟ ಗ್ರಂಥ ಎಂದರು.ಸಂವಿಧಾನದ ಅರಿವನ್ನು ಮೂಡಿಸುವ ಉದ್ದೇಶದಿಂದಲೇ 1 -10ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಓದುವುದನ್ನು ನಾನು ಶಿಕ್ಷಣ ಸಚಿವನಾದ ಮೇಲೆ ಕಡ್ಡಾಯವನ್ನಾಗಿ ಮಾಡಿದ್ದೇನೆ. ಶಿಕ್ಷಕರು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ಓದಿಸಬೇಕು. ಮತ್ತು ಕ್ರಮೇಣ ಅರ್ಥ ಮಾಡಿಸಬೇಕು. ಡಿಡಿಪಿಐ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಗಾಂಧೀಜಿಯನ್ನೇ ಮರೆತುಬಿಡುವ ಅಪಾಯವಿದೆ. ಮಕ್ಕಳು ಗಾಂಧೀಜಿಯವರನ್ನೂ ನೆನಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸುಮಾರು 10 ಕೋಟಿ ಪುಸ್ತಕಗಳಳ್ಳಿ ಗಾಂಧೀಜಿ ಮತ್ತು ಸಂವಿಧಾನದ ಬಗ್ಗೆ ಪ್ರಕಟಿಸಲಾಗುವುದು ಎಂದರು. ಸಂವಿಧಾನವನ್ನು ಓದುವುದರ ಮೂಲಕ ಅದರ ಮೌಲ್ಯ ಹೆಚ್ಚಾಗಬೇಕು. ಮತ್ತು ದೇಶದ ಒಗ್ಗಟ್ಟಿದೆ. ಸಂವಿಧಾನವೇ ಪ್ರೇರಣೆ ಎಂದರು.

1001785847

ಸಂಯೋಜಕ ಮತ್ತು ಕಾರ್ಯಕ್ರಮ ಆಯೋಜಕ ಕೆ.ಪಿ. ಶ್ರೀಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನ ಓದು ಅಧ್ಯಯನ ಶಿಬಿರದಿಂದ ಭಾರತ ಸಂವಿಧಾನದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಂವಿಧಾನ ಓದು ಇಂದು ಅನಿವಾರ್ಯವಾಗಿದೆ. ಇಂದು ಮತ್ತು ನಾಳೆ ಸಂವಿಧಾನ ಕುರಿತಂತೆ ಹಲವು ತಜ್ಞರು ಮಾಹಿತಿ ನೀಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಸನ್ನಿಧಿ ಪಾಲನಾ ನವೀಕರಣ ಕೇಂದ್ರದ ನಿರ್ದೇಶಕ ಫಾ. ಕ್ಲಿಫರ್ಡ್ ರೋಷನ್ ಪಿಂಟೋ. ಹಿರಿಯ ವಕೀಲ ಜಿ.ಎಸ್. ನಾಗರಾಜ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಒ ಹೇಮಂತಕುಮಾರ್, ಸಂಪನ್ಮೂಲ ವ್ಯಕ್ತಿ ಬಿ. ರಾಜಶೇಖರ್ ಮೂರ್ತಿ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಹಲವರಿದ್ದರು.ಪತ್ರಕರ್ತ ಆರ್.ಎಸ್. ಹಾಲಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...