ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆದ INDIAvsNDA ಹ್ಯಾಷ್‌ಟ್ಯಾಗ್

Date:

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ 26 ವಿರೋಧ ಪಕ್ಷಗಳು, ತಮ್ಮ ಒಕ್ಕೂಟಕ್ಕಿದ್ದ ಹಳೆಯ ‘ಯುಪಿಎ’ ಎಂಬ ಹೆಸರನ್ನು ಬದಲಿಸಿ, ‘ಇಂಡಿಯಾ (I.N.D.I.A)’ ಎಂಬ ಹೆಸರನ್ನಿಟ್ಟ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ INDIAvsNDA ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿಪಕ್ಷಗಳ ಸಭೆಯ ಬಳಿಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಇಂಡಿಯಾ (I.N.D.I.A)’ ಹೆಸರನ್ನು ಘೋಷಿಸಿದರು.

ಇಂಡಿಯಾ ಅಥವಾ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್ ಅಲಯನ್ಸ್ (ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟ) ಎಂಬ ಸಂಕ್ಷಿಪ್ತ ರೂಪವನ್ನು ಹೆಸರನ್ನಾಗಿ ಇಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಇದು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆಗಿದೆ. ಇದು ಹಲವರ ಕುತೂಹಲಕ್ಕೂ ಕಾರಣವಾಗಿದೆ.

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಿ, ಎಲ್ಲರನ್ನೂ ಒಳಗೊಂಡು, ದೇಶದ ಸಾರ್ವಭೌಮತ್ವವನ್ನು ಈ ಒಕ್ಕೂಟ ಕಾಪಾಡಲಿದೆ ಎಂಬ ಅಭಿಪ್ರಾಯಗಳನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.

ಅಧಿಕೃತವಾಗಿ ಈ ಹೆಸರು ಘೋಷಣೆಗೂ ಮುನ್ನವೇ ಟ್ವೀಟ್ ಮಾಡಿದ್ದ ಟಿಎಂಸಿ ಮುಖಂಡ ಡೆರೆಕ್ ಓಬ್ರಿಯಾನ್, ಚಕ್‌ದೇ ಇಂಡಿಯಾ ಎಂದು ತಿಳಿಸಿದ್ದರು.

ಸಭೆಯ ಬಳಿಕ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿಯವರು, ‘ಭಾರತ ಒಂದಾಗಲಿದೆ, INDIA ಗೆಲ್ಲಲಿದೆ’ ಎಂದಿದ್ದರು.

“ಭಾರತದ ಸಂವಿಧಾನದ 1 ನೇ ವಿಧಿ, ಅಂದರೆ ಭಾರತ. ಇದು ರಾಜ್ಯಗಳ ಒಕ್ಕೂಟ. ಇಂದು ಬೆಂಗಳೂರಿನಲ್ಲಿ 26 ರಾಜಕೀಯ ಪಕ್ಷಗಳು ಘೋಷಿಸಿದ ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟದ ಹಿಂದಿನ ಸ್ಫೂರ್ತಿ ಇದು” ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಹೊಸ ಹೆಸರನ್ನು ಸೂಚಿಸಿದವರು ಯಾರು ಎಂಬ ಬಗ್ಗೆ ಪ್ರಶ್ನಿಸಿ, ಹಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.

‘ಹೊಸ ಹೆಸರಿಗೆ ಅಂತಿಮವಾಗಿ ಸಂಕ್ಷಿಪ್ತ ರೂಪ ನೀಡಿದವರು ರಾಹುಲ್ ಗಾಂಧಿ’ ಎಂದು ಟ್ವೀಟ್ ಮಾಡಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಜಿತೇಂದ್ರ ಅಹ್ವಾದ್, “ಅವರ ಸೃಜನಶೀಲತೆಯನ್ನು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ವಿಪಕ್ಷಗಳ ಒಗ್ಗೂಡುವಿಕೆಯು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ. ಹಾಗಾಗಿ, ಇಷ್ಟರವರೆಗೆ ಮರೆತು ಹೋಗಿದ್ದ ಸ್ನೇಹಿತರನ್ನು ಮತ್ತೆ ಒಂದುಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹಲವು ವಿಪಕ್ಷಗಳ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...