ಉತ್ತರ ಪ್ರದೇಶ | ಮಥುರಾದಲ್ಲಿ ರೈಲು ಹಳಿಬಿಟ್ಟು ಪ್ಲಾಟ್​ಫಾರ್ಮ್​ ಏರಿದ್ದ ಘಟನೆಗೆ ಸಾಕ್ಷ್ಯ ಒದಗಿಸಿದ ಸಿಸಿಟಿವಿ!

Date:

  • ವಿಡಿಯೋ ಕಾಲ್‌ನಲ್ಲಿದ್ದ ರೈಲು ನಿರ್ವಾಹಕ; ಸಿಸಿಟಿವಿಯಲ್ಲಿ ದಾಖಲಾಗಿರುವ ವಿಡಿಯೋ ವೈರಲ್
  • ತನ್ನ ಬ್ಯಾಗ್ ಅನ್ನು ಥ್ರೋಟಲ್ ಮೇಲೆ ಇರಿಸಿ, ಮೊಬೈಲ್ ನೋಡುವುದರಲ್ಲಿ ಮಗ್ನನಾಗಿದ್ದ ನಿರ್ವಾಹಕ

ಉತ್ತರ ಪ್ರದೇಶದ ಮಥುರಾ ಜಂಕ್ಷನ್‌ ರೈಲು ನಿಲ್ದಾಣದಲ್ಲಿ ರೈಲೊಂದು ಪ್ಲಾಟ್‌ಫಾರ್ಮ್ ಏರಿದ ಘಟನೆ ಮಂಗಳವಾರ ನಡೆದಿತ್ತು. ಈ ಘಟನೆಗೆ ರೈಲು ನಿರ್ವಾಹಕನ ಬೇಜವಾಬ್ದಾರಿಯೇ ಕಾರಣ ಎಂಬ ಅಂಶ ಹಿರಿಯ ಅಧಿಕಾರಿಗಳ ತನಿಖೆಯಿಂದ ಬಯಲಿಗೆ ಬಂದಿದೆ. ಇದಕ್ಕೆ ಸಿಸಿಟಿವಿಯಲ್ಲಿ ದಾಖಲಾಗಿರುವ ದೃಶ್ಯವೇ ಈಗ ಸಾಕ್ಷ್ಯವಾಗಿ ಲಭ್ಯವಾಗಿದೆ.

ಎಲೆಕ್ಟ್ರಿಕ್ ಮಲ್ಟಿಪಲ್ ಘಟಕ (ಇಎಂಯು) ರೈಲು ಮಂಗಳವಾರ ಹಳಿ ತಪ್ಪಿ ಪ್ಲಾಟ್‌ಫಾರ್ಮ್ ಮೇಲೆ ಹತ್ತಿತ್ತು. ಎಂಜಿನ್ ಕ್ಯಾಬ್ ಪ್ರವೇಶಿಸಿದ ಬಳಿಕ ಆಪರೇಟರ್, ತನ್ನ ಬ್ಯಾಗ್ ಅನ್ನು ಥ್ರೋಟಲ್(ಕಂಟ್ರೋಲರ್) ಮೇಲೆ ಇರಿಸಿ, ಮೊಬೈಲ್‌ನಲ್ಲಿ ವಿಡಿಯೋ ಕಾಲ್‌ನಲ್ಲಿರುವ ದೃಶ್ಯ ಇಂಜಿನ್ ಒಳಗಿರುವ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅವಘಡಕ್ಕೆ ನಿರ್ಲಕ್ಷ್ಯವೇ ಕಾರಣ ಎಂದು ವರದಿಯಾಗಿದೆ.

ಕಳೆದ ಮಂಗಳವಾರ ರಾತ್ರಿ ಮಥುರಾ ಜಂಕ್ಷನ್‌ ರೈಲು ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಮೊದಲು ಕರ್ತವ್ಯದಲ್ಲಿ ಚಾಲಕ ತನ್ನ ಕರ್ತವ್ಯ ಮುಗಿಸಿ ಕ್ಯಾಬಿನ್‌ನಿಂದ ನಿರ್ಗಮಿಸಿದ್ದ. ಬಳಿಕ ಕ್ಯಾಬ್ ಒಳಗೆ ಪ್ರವೇಶಿಸಿದ ರೈಲ್ವೆ ಸಿಬ್ಬಂದಿ ಸಚಿನ್ ಎಂಬಾತ, ವಿಡಿಯೋ ಕಾಲ್‌ನಲ್ಲಿದ್ದುಕೊಂಡೇ ತನ್ನ ಬೆನ್ನಲ್ಲಿದ್ದ ಬ್ಯಾಗನ್ನು ಕಂಟ್ರೋಲರ್ ಮೇಲೆ ಇರಿಸಿ, ಆಸನದಲ್ಲಿ ಕುಳಿತಿದ್ದಾನೆ. ಆ ಬಳಿಕ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
mathura railway accident

ರಾತ್ರಿ ನಡೆದ ಈ ಅವಘಡದಲ್ಲಿ ಅದೃಷ್ಟವಶಾತ್ ಈ ಅವಘಡಕ್ಕಿಂತ ಸ್ವಲ್ಪವೇ ಮೊದಲು ಪ್ರಯಾಣಿಕರು ಇಳಿದು ತೆರಳಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಆದರೆ ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದರು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರೈಲ್ವೆ ಅಧಿಕಾರಿಗಳು, ಅವಘಡಕ್ಕೆ ಕಾರಣವಾದ ಲೋಕೋ ಪೈಲಟ್ ಹಾಗೂ ನಾಲ್ವರು ತಾಂತ್ರಿಕ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.

ಕರ್ತವ್ಯದ ವೇಳೆ ಮೊಬೈಲ್ ಫೋನ್‌ಗಳನ್ನು ಬಳಸಿದ್ದ ಹಾಗೂ ಮದ್ಯದ ಅಮಲಿನಲ್ಲಿ ಇರುವುದು ಪತ್ತೆಯಾಗಿದ್ದರಿಂದ ಲೋಕೋ ಪೈಲಟ್ ಸಹಿತ ಐದು ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಹಠಾತ್ತನೇ ವೇಗ ಪಡೆದುಕೊಂಡು ಪ್ಲಾಟ್​ಫಾರ್ಮ್​ಗೆ ಅಪ್ಪಳಿಸುತ್ತಿರುವುದು ಹಾಗೂ ಸಚಿನ್ ಮೊಬೈಲ್ ನೋಡುತ್ತಿರುವುದು ಮತ್ತು ರೈಲು ಅಪ್ಪಳಿಸಿದ ತಕ್ಷಣ ಗಾಬರಿಗೆ ಬೀಳುವುದೆಲ್ಲವೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಇದರ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...