ಹರ್ಯಾಣ ಗಲಭೆ | ಸುಳ್ಳು ಸುದ್ದಿ ಹರಡಿದ ಸುದರ್ಶನ್ ಟಿವಿಯ ಸುದ್ದಿ ಸಂಪಾದಕ ಬಂಧನ; ಬಿಡುಗಡೆ

Date:

  • ಸುದರ್ಶನ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್ ಬಂಧನ, ಬಿಡುಗಡೆ
    • ಹಿಂದೂಗಳನ್ನು ಬಂಧಿಸಲು ಪೊಲೀಸರ ಮೇಲೆ ಅಲ್ ಜಝೀರಾ ವಾಹಿನಿ ಒತ್ತಡ ಹಾಕಿದ್ದರು’ ಎಂದು ಟ್ವೀಟ್

ಹರ್ಯಾಣದ ನೂಹ್‌ನಲ್ಲಿ ಸಂಭವಿಸಿದ ಕೋಮು ಗಲಭೆಯ ವೇಳೆ ಪೊಲೀಸರ ವಿರುದ್ಧವೇ ಸುಳ್ಳು ಸುದ್ದಿ ಹರಡಿದ್ದ ಆರೋಪದ ಮೇಲೆ ಸುದರ್ಶನ್ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್‌ನನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆಗೊಳಿಸಲಾಗಿದೆ.

ಬಲಪಂಥೀಯ ವಿಚಾರಧಾರೆ ಹರಡುವ ಸುದ್ದಿವಾಹಿನಿಯಾಗಿ ಸುದರ್ಶನ ಟಿವಿ ಗುರುತಿಸಿಕೊಂಡಿದೆ. ನೂಹ್ ಗಲಭೆಯ ವೇಳೆ ಟ್ವೀಟ್ ಮಾಡಿದ್ದ ವಾಹಿನಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್‌, ‘ಅಲ್ ಜಝೀರಾ ಸುದ್ದಿ ವಾಹಿನಿಯು ಹರ್ಯಾಣ ಜಿಲ್ಲಾಧಿಕಾರಿಯ ಮೇಲೆ ಒತ್ತಡ ಹಾಕುತ್ತಿದೆ. ಅಲ್ಲದೇ, ಈ ಒತ್ತಡಕ್ಕೆ ಮಣಿದು ಗುರುಗ್ರಾಮ್ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸ್ ಮತ್ತು ಜಿಲ್ಲಾಡಳಿತದ ಮೇಲೆಯೇ ಆರೋಪ ಹೊರಿಸಿ, ಸುಳ್ಳು ಸುದ್ದಿ ಹರಡಿದ್ದಕ್ಕೆ ಮುಖೇಶ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಲಭೆ ಹೆಚ್ಚಿಸುವ ಉದ್ದೇಶದಿಂದ ಆಧಾರರಹಿತ, ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಮಾಹಿತಿ ಹಾಕಿದ್ದಕ್ಕೆ ಮುಖೇಶ್ ವಿರುದ್ಧ ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಆ ಬಳಿಕ ಬಂಧಿಸಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಗುರುಗ್ರಾಮ್ ಪೊಲೀಸರು ಸ್ಪಷ್ಟಪಡಿಸಿದ್ದರು.

ಈ ನಡುವೆ ಸುದರ್ಶನ ನ್ಯೂಸ್‌ನ ಪ್ರಧಾನ ಸಂಪಾದಕ ಸುರೇಶ್ ಚವ್ಹಾಂಕೆ, ಟ್ವಿಟರ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ, ಮುಖೇಶ್ ಕುಮಾರ್ ಬಂಧನವನ್ನು ಪ್ರಶ್ನಿಸಿದ್ದರು. ಅಲ್ಲದೇ, ಮುಖೇಶ್ ಕುಮಾರ್ ಅವರನ್ನು ಬಿಡುಗಡೆ ಮಾಡದಿದ್ದರೆ ಶನಿವಾರ ‘ದೊಡ್ಡ ಘೋಷಣೆ’ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಜೊತೆಗೆ, ‘ನಮ್ಮೊಂದಿಗೆ ಯಾವ ಹಿಂದೂ ಪುರುಷರು ಇದ್ದಾರೆ ಎಂದು ನೋಡೋಣ’ ಎಂದು ಬರೆದಿದ್ದರು.

ಈ ಎಲ್ಲ ಬೆಳವಣಿಗೆಗಳ ನಡುವೆ ಅವರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ ಎಂದು ಸುರೇಶ್ ಚವ್ಹಾಂಕೆ ಅವರೇ ಟ್ವೀಟ್ ಮಾಡಿ, ಮಾಹಿತಿ ಪ್ರಕಟಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...