ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

Date:

  • ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ
  • ಸುಪ್ರೀಂ ಕೋರ್ಟ್‌ನಲ್ಲಿ ಯೋಗ ಗುರು ಬಾಬಾ ರಾಮ್‌ದೇವ್‌ಗೆ ಹಿನ್ನಡೆ

ಯೋಗ ಗುರು ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ದಾರಿ ತಪ್ಪಿಸುವ ಹಾಗೂ ಸುಳ್ಳು ಜಾಹೀರಾತಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಕಿಡಿಕಾರಿದ್ದು, ತಪ್ಪುದಾರಿಗೆಳೆಯುವ ಮಾಹಿತಿ ನೀಡುವ ಔಷಧಗಳ ಎಲ್ಲ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಜಾಹೀರಾತುಗಳನ್ನು ತಕ್ಷಣವೇ ಜಾರಿಗೆ ಬರುವಂತೆ ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ.

ಅಲೋಪತಿ ಮತ್ತು ವೈದ್ಯರನ್ನು ಕಳಪೆ ಎನ್ನುವ ರೀತಿಯಲ್ಲಿ ಬಿಂಬಿಸುವ ಹಲವಾರು ಜಾಹೀರಾತುಗಳನ್ನು ಬಾಬಾ ರಾಮ್‌ದೇವ್‌ರ ಪತಂಜಲಿ ಸಂಸ್ಥೆ ಪ್ರಕಟಿಸಿತ್ತು. ಇದರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯ ಬಳಿಕ ಈ ತಾತ್ಕಾಲಿಕ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪತಂಜಲಿ ಕಂಪನಿಯು ತಮ್ಮ ಜಾಹೀರಾತುಗಳಿಂದ ಇಡೀ ದೇಶವನ್ನೇ ದಾರಿ ತಪ್ಪಿಸುತ್ತಿದೆ” ಎಂದು ಗರಂ ಆಗಿರುವ ಸುಪ್ರೀಂ ಕೋರ್ಟ್‌, “ಇದು ನಿಜಕ್ಕೂ ದುರದೃಷ್ಟದ ಸಂಗತಿ. ಕೇಂದ್ರ ಸರ್ಕಾರ ಏನು ಮಾಡುತ್ತಿದೆ. ಕಣ್ಮುಚ್ಚಿ ಕುಳಿತಿದೆಯೇ? ಸರ್ಕಾರ ಈ ಕುರಿತಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ” ಎಂದು ಪೀಠ ಹೇಳಿದೆ.

ತಪ್ಪುದಾರಿಗೆಳೆಯುವ ಮಾಹಿತಿ ನೀಡುವ ಔಷಧಗಳ ಎಲ್ಲ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಜಾಹೀರಾತುಗಳನ್ನು ತಕ್ಷಣವೇ ಜಾರಿಗೆ ಬರುವಂತೆ ನಿಲ್ಲಿಸುವಂತೆ ಪೀಠವು ಕಂಪನಿಗೆ ನಿರ್ದೇಶನ ನೀಡಿದೆ.

“ಇಂಥ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡದೇ ಇರುವಂತೆ ಕಾಯ್ದೆಗಳೇ ಇರುವಾಗಲೂ ನೀವು ಎರಡು ವರ್ಷ ಕಣ್ಮುಚ್ಚಿಕೊಂಡು ಕುಳಿತಿದ್ದೀರಿ. ಸರ್ಕಾರ ಕಣ್ಣು ಮುಚ್ಚಿದೆ ಎನ್ನುವುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಪೀಠದ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ, ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆಎಂ ನಟರಾಜ್‌ ಅವರಿಗೆ ಹೇಳಿದರು.

ಈ ವೇಳೆ ಮಾತನಾಡಿದ ಕೇಂದ್ರದ ಕಾನೂನು ಅಧಿಕಾರಿ, “ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಸ್ವೀಕರಿಸಲಾಗುವುದಿಲ್ಲ. ಆದರೆ, ನೀವು ಹೇಳಿದ ಕಾಯಿದೆಯಡಿಯಲ್ಲಿ ಕ್ರಮ ಕೈಗೊಳ್ಳುವುದು ಸಂಬಂಧಪಟ್ಟ ರಾಜ್ಯಗಳಿಗೆ ಬಿಟ್ಟದ್ದು” ಎಂದು ಹೇಳಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ ತನ್ನ ಔಷಧಿಗಳ ಬಗ್ಗೆ ಜಾಹೀರಾತುಗಳಲ್ಲಿ “ಸುಳ್ಳು” ಮತ್ತು “ದಾರಿ ತಪ್ಪಿಸುವ” ಮಾಹಿತಿಗಳನ್ನು ನೀಡುವುದರ ವಿರುದ್ಧ ಎಚ್ಚರಿಕೆ ನೀಡಿತ್ತು. ಆದರೂ ಮರುದಿನವೇ ಪತ್ರಿಕಾಗೋಷ್ಠಿ ನಡೆಸಿದ್ದ ಬಾಬಾ ರಾಮ್‌ದೇವ್ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇದರ ವಿರುದ್ಧವೇ ಮಾತನಾಡಿದ್ದರು.

ಈ ಬಗ್ಗೆ ಇಂದು ವಿಚಾರಣೆಯ ವೇಳೆ ಗರಂ ಆದ ಸುಪ್ರೀಂ ಕೋರ್ಟ್‌, ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ಏಕೆ ದಾಖಲಿಸಬಾರದು ಎಂದು ಕೇಳಿ, ನೋಟಿಸ್ ಜಾರಿ ಮಾಡಿದೆ.

ಪತಂಜಲಿ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ಕೋರ್ಟ್‌, ”ಈ ನ್ಯಾಯಾಲಯದ ಆದೇಶದ ನಂತರವೂ ಇಂಥ ಜಾಹೀರಾತು ನೀಡಲು ನಿಮಗೆ ಧೈರ್ಯ ಹೇಗೆ ಬಂತು. ಕೋರ್ಟ್‌ನ ಆದೇಶವಿದ್ದರೂ ತಪ್ಪು ಜಾಹೀರಾತು ನೀಡಿದ್ದೀರಿ. ಶಾಶ್ವತ ಪರಿಹಾರ ಎನ್ನುತ್ತೀರಿ. ಶಾಶ್ವತ ಪರಿಹಾರ ಎಂದರೆ ಏನು? ಇದು ಚಿಕಿತ್ಸೆಯೇ? ಇಂದು ನಾವು ಕಠಿಣ ಆದೇಶವನ್ನು ನೀಡಲಿದ್ದೇನೆ. ನೀವು ನ್ಯಾಯಾಲಯವನ್ನೇ ಕೆಣಕುವ ಕೆಲಸ ಮಾಡುತ್ತಿದ್ದೀರಿ” ಎಂದು ನ್ಯಾಯಮೂರ್ತಿ ತಿಳಿಸಿದರು.

ಇದನ್ನು ಓದಿದ್ದೀರಾ? ರಾಜ್ಯಸಭಾ ಚುನಾವಣೆ | ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್‌ ಅಡ್ಡ ಮತದಾನ

ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆ 1954 ರಲ್ಲಿ ನಿರ್ದಿಷ್ಟಪಡಿಸಿದ ರೋಗಗಳು/ಅಸ್ವಸ್ಥತೆಗಳಿಗೆ ಸಂಬಂಧಿಸಿದ ತನ್ನ ಉತ್ಪನ್ನಗಳನ್ನು ಜಾಹೀರಾತು ನೀಡದಂತೆ ನ್ಯಾಯಾಲಯವು ಪತಂಜಲಿ ಆಯುರ್ವೇದವನ್ನು ಈ ಕ್ಷಣದಿಂದಲೇ ನಿರ್ಬಂಧಿಸಿದೆ. ಅದರೊಂದಿಗೆ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಮತ್ತು ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಅನ್ನೂ ಕಳುಹಿಸುವಂತೆ ತಿಳಿಸಿದೆ.

ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೊಳ್ಳುವ ಪತಂಜಲಿ ಆಯುರ್ವೇದ ಉತ್ಪನ್ನಗಳ ಜಾಹೀರಾತಿನಲ್ಲಿ ಮಾಡಿದ ಪ್ರತಿಯೊಂದು ಸುಳ್ಳು ಪ್ರತಿಪಾದನೆಗಳಿಗೆ ತಲಾ ₹ 1 ಕೋಟಿ ದಂಡ ವಿಧಿಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ಎಚ್ಚರಿಕೆ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...