ತಮಿಳುನಾಡು | ರೈಲಿನಲ್ಲಿ ಭೀಕರ ಬೆಂಕಿ ಅವಘಡ : ತೀರ್ಥಯಾತ್ರೆಯಲ್ಲಿದ್ದ 9 ಮಂದಿ ಸಜೀವ ದಹನ

Date:

  • ಲಕ್ನೋದಿಂದ ರಾಮೇಶ್ವರಂಗೆ ತೆರಳುತ್ತಿದ್ದ ‘ಭಾರತ್ ಗೌರವ್ ಟೂರಿಸ್ಟ್’ ರೈಲು
  • ರೈಲಿನ ಒಳಗೆ 9 ಮೃತದೇಹ ದೊರೆತಿದೆ ಎಂದ ಮಧುರೈ ಜಿಲ್ಲಾಧಿಕಾರಿ ಎಂ.ಎಸ್.ಸಂಗೀತಾ

ಉತ್ತರ ಪ್ರದೇಶದ ಲಕ್ನೋದಿಂದ ತಮಿಳುನಾಡಿನ ರಾಮೇಶ್ವರಂಗೆ ತೆರಳುತ್ತಿದ್ದ ‘ಭಾರತ್ ಗೌರವ್ ಟೂರಿಸ್ಟ್’ ರೈಲಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಬೆಂಕಿ ಕಾಣಿಸಿಕೊಂಡು, 9 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಧುರೈಯಲ್ಲಿ ಸಂಭವಿಸಿದೆ.

ಮಧುರೈ ರೈಲು ನಿಲ್ದಾಣದಿಂದ ಸುಮಾರು 1 ಕಿಮೀ ದೂರದಲ್ಲಿ ರೈಲು ನಿಂತಿದ್ದು, ತೀರ್ಥಯಾತ್ರೆ ಕೈಗೊಂಡಿದ್ದ ರೈಲಿನಲ್ಲಿದ್ದ ಭಕ್ತರು ಗ್ಯಾಸ್ ಸಿಲಿಂಡರ್ ಅನ್ನು ಬಳಸಿ ಕಾಫಿ ಮಾಡಲು ಹೋದಾಗ ಬೆಂಕಿ ಕಾಣಿಸಿಕೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಒಂದು ಬೋಗಿಯಲ್ಲಿ ಕಾಣಿಸಿಕೊಂಡ ಬೆಂಕಿಯ ಜ್ವಾಲೆಯು ಪಕ್ಕದ ಬೋಗಿಗಳಿಗೆ ಕ್ಷಣ ಮಾತ್ರದಲ್ಲಿ ಹರಡಿದ ಪರಿಣಾಮ 9 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ ಎಂದು ವರದಿಯಾಗಿದೆ. ಏಕಾಏಕಿ ಉಂಟಾದ ಬೆಂಕಿಯಿಂದ ಬೋಗಿಯಲ್ಲಿದ್ದ ಪ್ರಯಾಣಿಕರು ಭಯಭೀತಗೊಂಡು ಎಲ್ಲೆಂದರಲ್ಲಿ ಓಡಿದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಹಲವು ಮಂದಿಯ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಪ್ರವಾಸದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಕೋಚ್ ಲಕ್ನೋದಿಂದ ಮಧುರೈಗೆ ಬೆಳಿಗ್ಗೆ 5.15 ರ ಸುಮಾರಿಗೆ ಆಗಮಿಸಿತ್ತು. ಮುಂಜಾನೆ 5:30 ರ ಸುಮಾರಿಗೆ ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

‘ರೈಲು ಬೋಗಿಯಲ್ಲಿ ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಿದಾಗ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸದ್ಯಕ್ಕೆ ಒಂಭತ್ತು ಮೃತದೇಹಗಳನ್ನು ಹೊರತೆಗೆದಿದ್ದೇವೆ’ ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್.ಸಂಗೀತಾ ತಿಳಿಸಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮ್ಮವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರೈ ಜಿಲ್ಲಾಧಿಕಾರಿ ಎಂ.ಎಸ್.ಸಂಗೀತಾ ಕುಟುಂಬಸ್ಥರನ್ನು ಸಂತೈಸಲು ಶ್ರಮಿಸುತ್ತಿರುವ ದೃಶ್ಯವು ಕಂಡು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...