ತಮಿಳುನಾಡಿನಲ್ಲಿ ಅಮಾನವೀಯ ಘಟನೆ: ದಲಿತ ಯುವಕರ ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜಿಸಿ ದೌರ್ಜನ್ಯ

Date:

ಇಬ್ಬರು ದಲಿತ ಯುವಕರ ಮೇಲೆ ಹಲ್ಲೆಗೈದು, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಅ. 30ರಂದು ತಿರುನೆಲ್ವೇಲಿಯ ಬಳಿ ಈ ಘಟನೆ ನಡೆದಿದ್ದು, ಪರಿಶಿಷ್ಟ ಜಾತಿಯ ಮನೋಜ್ ಕುಮಾರ್ ಮತ್ತು ಅವರ ಸ್ನೇಹಿತ ಮಣಿಮೂರ್ತೇಶ್ವರಂ ಮೂಲದ ಮರಿಯಪ್ಪನ್ ಎಂಬ ಇಬ್ಬರು ಯುವಕರ ಮೇಲೆ ಈ ದೌರ್ಜನ್ಯ ಎಸಗಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಸಂತ್ರಸ್ತರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ತಚ್ಚನಲ್ಲೂರು ಪೊಲೀಸರು, ಪ್ರಕರಣದ ಸಂಬಂಧ ಆರು ಜನರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತರನ್ನು ಪಾಳಯಂಕೊಟ್ಟೈ ಸಮೀಪದ ತಿರುಮಲೈಕೊಝುಂತುಪುರಂ ನಿವಾಸಿಗಳಾದ ಪೊನ್ನುಮಣಿ (25), ನಲ್ಲಮುತ್ತು (21), ಆಯಿರಾಮ್ (19), ರಾಮರ್ (22), ಶಿವ (22), ಮತ್ತು ಲಕ್ಷ್ಮಣನ್ (22) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಕಳಮಶ್ಶೇರಿ ಸ್ಫೋಟ ಪ್ರಕರಣ | ‘ನಾನೇ ವಾದಿಸುತ್ತೇನೆ, ವಕೀಲರು ಬೇಡ’ ಎಂದ ಆರೋಪಿ ಡೊಮಿನಿಕ್ ಮಾರ್ಟಿನ್

ದಲಿತ ಯುವಕರಾದ ಮನೋಜ್ ಕುಮಾರ್ ಮತ್ತು ಮರಿಯಪ್ಪನ್ ನದಿಯಲ್ಲಿ ಸ್ನಾನ ಮಾಡಿ ಹಿಂದಿರುಗುತ್ತಿದ್ದಾಗ, ನದಿಯ ಬಳಿ ಮದ್ಯ ಸೇವಿಸುತ್ತಿದ್ದ ಆರೋಪಿಗಳು ಇಬ್ಬರನ್ನು ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ನಿಮ್ಮ ಜಾತಿ ಯಾವುದು ಎಂದು ಪ್ರಶ್ನಿಸಿದಾಗ, ತಾವು ದಲಿತರ ಕುಗ್ರಾಮದಿಂದ ಬಂದವರು ಎಂದು ಬಹಿರಂಗಪಡಿಸಿದ್ದಾರೆ. ಆ ಬಳಿಕ ಗುಂಪು ಹಲ್ಲೆ ನಡೆಸಿ, ದೌರ್ಜನ್ಯವೆಸಗಿದೆ ಎಂದು ವರದಿಯಾಗಿದೆ.

‘ಗುಂಪು ನಮಗೆ ಇಬ್ಬರಿಗೂ ಹಲ್ಲೆ ನಡೆಸಿದ್ದಲ್ಲದೇ, ವಿವಸ್ತ್ರಗೊಳಿಸಿದ್ದಾರೆ. ಆ ಬಳಿಕ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗಳು ತಮ್ಮ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

”ಅವರು ನಮ್ಮನ್ನು ಸ್ಥಳದಿಂದ ಓಡಿಸುವ ಮೊದಲು ನಮ್ಮ ಬಳಿಯಲ್ಲಿದ್ದ ಐದು ಸಾವಿರ ನಗದು, ಎರಡು ಮೊಬೈಲ್ ಫೋನ್‌ ಮತ್ತು ಎಟಿಎಂ ಕಾರ್ಡ್‌ಗಳನ್ನು ಕಸಿದುಕೊಂಡರು. ಹತ್ತಿರದ ಸಂಬಂಧಿಕರ ಮನೆಗೆ ಹೋಗಿ, ನಡೆದ ಘಟನೆಯನ್ನು ಮನೆಯವರಿಗೆ ತಿಳಿಸಿದೆವು. ಅವರು ನಮ್ಮನ್ನು ತಿರುನಲ್ವೇಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ” ಎಂದು ಸಂತ್ರಸ್ತರು ಪೊಲೀಸರಿಗೆ ತಿಳಿಸಿದ್ದಾರೆ.

ಘಟನೆ ಸಂಬಂಧ ಅಟ್ರಾಸಿಟಿ ಪ್ರಕರಣ ದಾಖಲಿಸಿ, ಆರು ಮಂದಿಯನ್ನು ಬಂಧಿಸಿದ್ದೇವೆ. ಅಮಾನುಷವಾಗಿ ಹಲ್ಲೆಗೊಳಗಾಗಿರುವ ಮನೋಜ್ ಮತ್ತು ಮರಿಯಪ್ಪನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಿರುನಲ್ವೇಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...