ಆಘಾತಕಾರಿ ಘಟನೆ | ಮುಸ್ಲಿಂ ವಿದ್ಯಾರ್ಥಿಯ ಕೆನ್ನೆಗೆ ಹೊಡೆಯುವಂತೆ ಹಿಂದೂ ವಿದ್ಯಾರ್ಥಿಗಳಿಗೆ ಸೂಚಿಸಿದ ಶಿಕ್ಷಕಿ!

Date:

  • ಉತ್ತರ ಪ್ರದೇಶದ ಮುಝಾಫರ್‌ ನಗರದಲ್ಲಿ ನಡೆದಿರುವ ಘಟನೆ; ವಿಡಿಯೋ ವೈರಲ್
  • ಪೊಲೀಸರಿಗೆ ದೂರು ನೀಡಲು ಬಯಸದ ಮುಸ್ಲಿಂ ವಿದ್ಯಾರ್ಥಿಯ ಪೋಷಕರು

ಆಘಾತಕಾರಿ ಘಟನೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಯೋರ್ವನಿಗೆ ಕಪಾಳಕ್ಕೆ ಬಾರಿಸುವಂತೆ ಹಿಂದು ವಿದ್ಯಾರ್ಥಿಗಳಿಗೆ ಶಿಕ್ಷಕಿಯೊಬ್ಬರು ಸೂಚಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಉತ್ತರ ಪ್ರದೇಶದ ಮುಝಾಫರ್‌ ನಗರದಲ್ಲಿರುವ ನೇಹಾ ಪಬ್ಲಿಕ್ ಶಾಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಶಿಕ್ಷಕಿಯ ಆದೇಶದಂತೆ ಇತರೆ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವ ದೃಶ್ಯವನ್ನು ವಿದ್ಯಾರ್ಥಿಯ ಸಂಬಂಧಿಯೋರ್ವ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಬೇರೆ ಕೆಲಸದ ನಿಮಿತ್ತ ವಿದ್ಯಾರ್ಥಿಯ ಸಂಬಂಧಿ ಶಾಲೆಗೆ ಹೋಗಿದ್ದ ವೇಳೆ ಈ ಬೆಳವಣಿಗೆ ನಡೆದಿದ್ದು, ಅದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
https://twitter.com/Delhiite_/status/1695075079607202263?s=20

ಬಳಿಕ ಈ ವಿಡಿಯೋವನ್ನು ವಿದ್ಯಾರ್ಥಿಯ ಪೋಷಕರಿಗೆ ತೋರಿಸಿದ್ದು, ಶಾಲೆಯಲ್ಲಿ ಈ ರೀತಿ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಆ ಬಳಿಕ ಶಾಲೆಗೆ ಪೊಲೀಸರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಹೊಡೆಯಲು ಸೂಚಿಸಿದ ಶಿಕ್ಷಕಿಯನ್ನು ತೃಪ್ತ ತ್ಯಾಗಿ ಎಂದು ತಿಳಿದುಬಂದಿದೆ. ವಿಡಿಯೋದಲ್ಲಿ ಒಬ್ಬೊಬ್ಬರಾಗಿ ಬಂದು ಇತರೆ ವಿದ್ಯಾರ್ಥಿಗಳು ಕೆನ್ನೆಗೆ ಹಾಗೂ ಬೆನ್ನಿಗೆ ಬಾರಿಸುತ್ತಿರುವುದು ದಾಖಲಾಗಿದೆ. ಮಕ್ಕಳು ಹೊಡೆದ ಬಳಿಕ ಮುಂದಿನ ಸರದಿ ಯಾರದ್ದು ಎಂದು ಶಿಕ್ಷಕಿ ತೃಪ್ತ ತ್ಯಾಗಿ ಕೇಳುತ್ತಿರುವುದು ದಾಖಲಾಗಿದೆ. ಇದೇ ವೇಳೆ ಮುಸ್ಲಿಂ ವಿದ್ಯಾರ್ಥಿ, ಕಣ್ಣೀರಿಡುತ್ತಾ ನಿಂತಿರುವುದು ಕಾಣಿಸಿದೆ.

https://twitter.com/zoo_bear/status/1695060906709795185?s=20

ಈ ಘಟನೆಯ ಬಗ್ಗೆ ಟ್ವೀಟ್ ಮಾಹಿತಿ ಹಂಚಿಕೊಂಡಿರುವ ಆಲ್ಟ್‌ ನ್ಯೂಸ್‌ನ ಪತ್ರಕರ್ತ ಮುಹಮ್ಮದ್ ಝುಬೇರ್, ‘ಬಾಲಕನ ತಂದೆ ಜೊತೆ ಮಾತನಾಡಿದೆ. ತನ್ನ ಮಗನನ್ನು ಶಾಲೆಗೆ ಕಳುಹಿಸದಿರಲು ನಿರ್ಧರಿಸಿದ್ದೇನೆ. ಪೊಲೀಸರ ಮುಂದೆ ಶಿಕ್ಷಕಿ ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಶಿಕ್ಷಕಿಯ ಅವರ ವಿರುದ್ಧ ದೂರು ನೀಡಲು ಬಯಸುವುದಿಲ್ಲ ಎಂದು ಮುಝಫ್ಫರ್‌ ನಗರ ಪೊಲೀಸರಿಗೆ ಲಿಖಿತವಾಗಿ ಬರೆದು ಕೊಟ್ಟಿದ್ದೇನೆ ಎಂದು ನನಗೆ ತಿಳಿಸಿದರು’ ಎಂದು ತಿಳಿಸಿದ್ದಾರೆ.

ಶಿಕ್ಷಕಿ ತೃಪ್ತ ತ್ಯಾಗಿ ಮತ್ತು ಆಕೆಯ ಪತಿ ಇಬ್ಬರು ವಿಕಲ ಚೇತನರಾಗಿದ್ದು, ಈ ಶಾಲೆಯನ್ನು ತಮ್ಮ ಮನೆಯ ಆವರಣದಲ್ಲೇ ನಡೆಸುತ್ತಿದ್ದರು ಎಂದು ವರದಿಯಾಗಿದೆ. ಈ ಶಾಲೆಯಲ್ಲಿ ಸುಮಾರು 50ರಷ್ಟು ಮಕ್ಕಳು ಕಲಿಯುತ್ತಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಗೆ ಪ್ರತಿಕ್ರಿಯಿಸಿರುವ ಹಲವರು, ‘ದೇಶದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ದ್ವೇಷಕ್ಕೆ ಗೋದಿ ಮಾಧ್ಯಮಗಳು ಹಾಗೂ ಈಗಿನ ರಾಜಕೀಯ ಬೆಳವಣಿಗೆಯೇ ಕಾರಣ. ಶಿಕ್ಷಕಿ ಕ್ಷಮೆ ಕೇಳಿದರೆ ಸಾಕೇ? ಆಕೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...