ಬ್ರೇಕಿಂಗ್ ನ್ಯೂಸ್ | ಕ್ರಾಂತಿಕಾರಿ ಗಾಯಕ ‘ಗದ್ದರ್’ ಇನ್ನಿಲ್ಲ

Date:

ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, ‘ಗದ್ದರ್’ ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ.

ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಮೊನ್ನೆಯಷ್ಟೇ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಅದರಿಂದ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾಗಲೇ ಇತರೆ ಕಾಯಿಲೆಗಳು ಉಲ್ಭಣಗೊಂಡಿವೆ. ತಮ್ಮ ಹಾಡುಗಳ ಮೂಲಕ ಲಕ್ಷಾಂತರ ಜನರ ಹೃದಯ ಗೆದ್ದಿದ್ದ ಗದ್ದರ್ ಕೊನೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಗದ್ದರ್ ಅವರ ನಿಜವಾದ ಹೆಸರು ಗುಮ್ಮಡಿ ವಿಠ್ಠಲ್ ರಾವ್. ಪಂಜಾಬ್‌ನಲ್ಲಿ ಬ್ರಿಟೀಷ್ ಅಧಿಪತ್ಯವನ್ನು ವಿರೋಧಿಸಿದ್ದ ಗದಾರ್ ಪಕ್ಷದ ಹಿನ್ನೆಲೆಯಲ್ಲಿ ತಮ್ಮ ಹೆಸರನ್ನು ಗದ್ದರ್ ಎಂದು ಮರುನಾಮಕರಣ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1949ರಲ್ಲಿ ತೆಲಂಗಾಣದ ತೂಪ್ರಾನ್‌ನಲ್ಲಿ ಹುಟ್ಟಿದ್ದ ಗದ್ದರ್, ನಿಜಾಮಾಬಾದ್‌, ಹೈದರಾಬಾದ್‌ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು. 1975ರಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ, ಶೋಷಣೆ, ಅನ್ಯಾಯಗಳ ವಿರುದ್ಧ ಸಿಡಿದೆದ್ದು, ನಕ್ಸಲ್‌ ಚಳವಳಿಯತ್ತ ಆಕರ್ಷಿತರಾದರು. ಜನನಾಟ್ಯ ಮಂಡಳಿಯ ಮೂಲಕ ಅವಿಭಜಿತ ಆಂಧ್ರಪ್ರದೇಶದಲ್ಲಿ ಊರೂರು ತಿರುಗುತ್ತ ಜನರನ್ನು ಸಂಘಟಿಸತೊಡಗಿದರು. ಸ್ಥಳದಲ್ಲೇ ಹಾಡು ಕಟ್ಟಿ ಹಾಡುತ್ತಿದ್ದ ಗದ್ದರ್ ಅವರ ಹಾಡುಗಳು ತೆಲುಗು ಜನ ಸಮುದಾಯದ ನಡುವೆ ತುಂಬಾ ಜನಪ್ರಿಯವಾಗಿದ್ದವು.

ಗದ್ದರ್ ಹಾಡಲು ಶುರುವಿಟ್ಟರೆ ನೆರೆದವರಲ್ಲಿ ಶೋಷಣೆಯ ವಿರುದ್ಧ ಸಿಟ್ಟು ಸ್ಫೋಟಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಗದ್ದರ್ ಪೊಲೀಸರ ಟಾರ್ಗೆಟ್ ಆದರು. ಹಲವು ಬಾರಿ ಪೊಲೀಸರ ದಾಳಿಯಿಂದ ಗದ್ದರ್ ಸ್ವಲ್ಪದರಲ್ಲಿ ಪಾರಾಗಿದ್ದರು. ಪೊಲೀಸರು ಹಾರಿಸಿದ ಗುಂಡೊಂದು ಅವರ ದೇಹದಲ್ಲಿ ಹಾಗೆಯೇ ಉಳಿದುಬಿಟ್ಟಿತ್ತು. ನಂತರ ಗದ್ದರ್, ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದಲ್ಲಿ ತಮ್ಮನ್ನು ಗುರುತಿಸಿಕೊಂಡರು. ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ಘೋಷಣೆಯಾದಾಗ ವಿಪರೀತ ಖುಷಿ ಪಟ್ಟರು.

ಗದ್ದರ್ ಹಾಡುಗಳಿಗೆ ತೆಲಂಗಾಣ, ಆಂಧ್ರಪ್ರದೇಶಗಳ ಆಚೆಗೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕರ್ನಾಟಕದ ಹಲವು ಚಳವಳಿ, ಆಂದೋಲನಗಳಲ್ಲಿ ಗದ್ದರ್ ಭಾಗವಹಿಸಿದ್ದರು. ಎಲ್ಲೇ ಶೋಷಣೆ ನಡೆದರೂ ಅಲ್ಲಿ ಹಾಜರಿರುತ್ತಿದ್ದ ಗದ್ದರ್, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ಹಾಡು ಹಾಡಿದ್ದಾರೆ.

ಗದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ಸಿಕಂದರಾಬಾದ್‌ನ ಭೂದೇವಿನಗರದ ಅವರ ಮನೆ ಮುಂದೆ ದೊಡ್ಡ ಪ್ರಮಾಣದ ಅಭಿಮಾನಿಗಳು ನೆರೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...