ಕನ್ನಡಿಗರ ಹಿತರಕ್ಷಣೆಗೆ ಪೂರಕವಾದ ಅಂಶ ಚುನಾವಣಾ ಪ್ರಣಾಳಿಕೆಯಲ್ಲಿರಲಿ : ಕನ್ನಡಪರ ಸಂಘಟನೆ ಒತ್ತಾಯ

Date:

  • ಯಾವ ಪಕ್ಷವೂ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ನೀಡುವ ವಿಷಯ ಪ್ರಸ್ತಾಪಿಸುತ್ತಿಲ್ಲ
  • ಉದ್ಯೋಗದಲ್ಲಿ ಆದ್ಯತೆ ನೀಡುವ ನೀಡುವ ಮಹಿಷಿ ವರದಿಯ ಅನುಷ್ಠಾನವಾಗಲಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನ್ನಡ, ಕನ್ನಡಿಗರ ಹಿತರಕ್ಷಣೆ, ಅಭಿವೃದ್ಧಿಗೆ ಪೂರಕವಾದ ಅಂಶಗಳು ಚುನಾವಣೆ ಪ್ರಣಾಳಿಕೆಯಲ್ಲಿ ಅಡಕವಾಗಿರಲಿ ಎಂದು ಕನ್ನಡಪರ ಸಂಘಟನೆ ಒತ್ತಾಯಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸರ್ಕಾರ, ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ, ಜಾತಿಗೊಂದು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಲ್ಲಿ ನಿರತವಾಗಿದೆ ಎಂದು ದೂರಿದ್ದಾರೆ.

ಎಲ್ಲ ರಾಜಕೀಯ ಪಕ್ಷಗಳು ಹಲವು ಭಾಗ್ಯಗಳನ್ನು, ಉಚಿತ ಕೊಡುಗೆಗಳನ್ನು, ಸಾಲಮನ್ನಾ ಹೀಗೆ ಭರಪೂರ ಭರವಸೆಗಳನ್ನು ನೀಡುತ್ತಿವೆ. ಅವುಗಳ ಅನುಷ್ಠಾನದ ಬಗ್ಗೆ ಗ್ಯಾರಂಟಿ ಪತ್ರಗಳನ್ನೂ ವಿತರಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯಾಗಲೀ, ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಯಾವ ವಿಚಾರವನ್ನೂ ಪ್ರಮುಖ ಮೂರೂ ರಾಜಕಿಯ ಪಕ್ಷಗಳು ಪ್ರಸ್ತಾಪ ಮಾಡುತ್ತಿಲ್ಲ. ಕನ್ನಡಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ಮಹಿಷಿ ವರದಿಯ ಅನುಷ್ಠಾನದ ಬಗ್ಗೆ ಮಾತನಾಡುತ್ತಿಲ್ಲ. ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಘೋಷಿಸಿ 16 ವರ್ಷಗಳಾದರೂ ಸಿಗಬೇಕಾದ ಸವಲತ್ತು ದೊರೆತಿಲ್ಲ ಎಂದು ಬೇಸರಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಉಳಿಸುವ ವಿಚಾರವಾಗಲಿ ಅಥವಾ ಇತರೆ ವಿಷಯವಾಗಲಿ ಯಾವ ಪಕ್ಷವೂ ಕನ್ನಡ ಸಮಸ್ಯಗಳಿಗೆ ಪರಿಹಾರ ನೀಡುವ ವಿಷಯ ಪ್ರಸ್ತಾಪಿಸುತ್ತಿಲ್ಲ. ಕನ್ನಡದ ಭವಿಷ್ಯದ ದೃಷ್ಟಿಯಿಂದ ಇದು ಆತಂಕದ ಆಘಾತಕಾರಿ ಬೆಳವಣಿಗೆ ಎಂದು ಚಂದ್ರಶೇಖರ ದೂರಿದ್ದಾರೆ.

ರಾಜಕೀಯ ಪಕ್ಷಗಳು ಕನ್ನಡದ ವಿಚಾರವು ಮತ ಗಳಿಸಿಕೊಡುವುದಿಲ್ಲ ಎಂದು ನಂಬಿರುವಂತಿದೆ. ರಾಜಕೀಯ ಪಕ್ಷಗಳು ಕನ್ನಡದ ಹಿತವನ್ನು ಕಡೆಗಣಿಸುತ್ತಿರುವದನ್ನು ಕನ್ನಡ ಗೆಳೆಯರ ಬಳಗ ಖಂಡಿಸಿದೆ.

ರಾಜಕೀಯ ಪಕ್ಷಗಳು ಕರ್ನಾಟಕದ ಜನಸಾಮಾನ್ಯರ ಆಶೋತ್ತರಗಳನ್ನು ಬಿಂಬಿಸುವ ಪ್ರಣಾಳಿಕೆಗೆ ಬದಲು ಪಕ್ಷವನ್ನು ಅಧಿಕಾರಕ್ಕೆ ತರಲು ಜನರನ್ನು ದಾರಿ ತಪ್ಪಿಸುವ ಹುಸಿ ಭರವಸೆಗಳನ್ನು ನೀಡುತ್ತಿದೆ. ಕನ್ನಡ ಸಂವರ್ಧನೆ ಕುರಿತು ಮೌನತಾಳಿರುವುದು ಸರಿಯಲ್ಲ ಎಂದು ಹೇಳಿದೆ.

ಕನ್ನಡನಾಡಿನ ಸರ್ವಾಂಗೀಣ ಪ್ರಗತಿಗೆ ಪೂರಕವಾದ, ಸಮಾಜದ ಎಲ್ಲರೂ ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸುವ, 18 ವರ್ಷದವರೆಗಿನ ಎಲ್ಲ ಮಕ್ಕಳಿಗೆ ತಾರತಮ್ಯ ಇಲ್ಲದ ಉಚಿತ ಏಕರೂಪದ ಮಾತೃಭಾಷಾ ಮಾಧ್ಯಮದಲ್ಲಿ ಶಿಕ್ಷಣ, ಕನ್ನಡಿಗರಿಗೆ ಉದ್ಯೋಗಾವಕಾಶದಲ್ಲಿ ಮೀಸಲಾತಿ ಒದಗಿಸುವ ಮಹಿಷಿ ವರದಿಯ ಅನುಷ್ಠಾನ, ಕನ್ನಡ ಶಾಸ್ತ್ರೀಯ ಭಾಷೆಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸುವುದು, ಕನ್ನಡದ ಸರ್ವಾಂಗೀಣ ಬೆಳವಣಿಗೆಗೆ ಪೂರಕ ಯೋಜನೆಗಳು, ಒಟ್ಟಾರೆಯಾಗಿ ಕನ್ನಡ ಭಾಷೆ, ಸಮಸ್ತ ಕನ್ನಡಿಗರ ಹಿತಕ್ಕೆ ಒತ್ತು ನೀಡುವ ಅಂಶಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳುವಂತೆ ಕನ್ನಡ ಗೆಳೆಯರ ಬಳಗವು ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...