ʻಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

Date:

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಕಥೆ ಆಧಾರಿತ ಸಿನಿಮಾ ‘ಡೇರ್ ಡೆವಿಲ್ ಮುಸ್ತಾಫಾ’ ಚಿತ್ರಕ್ಕೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ʻಡೇರ್ ಡೆವಿಲ್ ಮುಸ್ತಾಫಾ’ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ಪ್ರೇಮಿಗಳು ಮಾತ್ರವಲ್ಲದೆ ವಿಮರ್ಶಕರಿಂದಲೂ ಮೆಚ್ಚುಗೆ ಪಡೆದು ಯಶಸ್ವಿಯಾಗಿ 50ನೇ ದಿನದತ್ತ ದಾಪುಗಾಲಿಟ್ಟಿದೆ. ಶಶಾಂಕ್​ ಸೋಗಾಲ್​ ಅವರು ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಚಿತ್ರತಂಡ, ಸಿನಿಮಾ ವೀಕ್ಷಿಸಲು ಮುಖ್ಯಮಂತ್ರಿಗಳನ್ನು ಆಹ್ವಾನಿಸಿತ್ತು. ಧರ್ಮ ಸಹಿಷ್ಣುತೆ, ಸಹಬಾಳ್ವೆ, ಕೋಮು ಸಾಮರಸ್ಯ ಸಾರುವ, ಸಮಭಾವದ ಪಾಠ ಹೇಳುವ ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾವನ್ನು ಜನ ಸಾಮಾನ್ಯರು, ವಿದ್ಯಾರ್ಥಿಗಳು ವೀಕ್ಷಿಸಲು ಅನುಕೂಲವಾಗುವಂತೆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಿತು. ಲೇಖಕ ಅನಂತ್, ನಿರ್ದೇಶಕ ಶಶಾಂಕ್ ಹಾಗೂ ಚಿಂತಕ ಪ್ರೊ.ನಟರಾಜ್ ಹುಳಿಯಾರ್ ಸಿಎಂ ಭೇಟಿ ವೇಳೆ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 06 15 at 11.30.56 AM

ಇದಲ್ಲದೆ ಕೆಲವು ದಿನಗಳ ಹಿಂದಷ್ಟೆ ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾ ತಂಡ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯಲು ಸಿನಿಮಾದ ಟಿಕೆಟ್‌ ದರವನ್ನು ಕಡಿಮೆಗೊಳಿಸಿದೆ. ಚಿತ್ರಮಂದಿರಗಳಲ್ಲಿ ಸಿನಿಮಾದ ಸಾಮಾನ್ಯ ಟಿಕೆಟ್‌ ದರ 50 ರೂಪಾಯಿ ಮತ್ತು ಬಾಲ್ಕನಿ ಟಿಕೆಟ್‌ ದರ 70 ರೂಪಾಯಿ ನಿಗದಿಪಡಿಸಲಾಗಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್‌ ದರವನ್ನು 99 ರೂಪಾಯಿಗೆ ಕಡಿಮೆಗೊಳಿಸಲಾಗಿದೆ. ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್‌ ನೀಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...