ತುಮಕೂರು ದಸರಾ | ಮಹಿಳಾ ಬೈಕ್ ರೈಡ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ

Date:

 ತುಮಕೂರು ದಸರಾ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ಬೈಕ್ ರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಶನಿವಾರ ನಗರದ ಬಟವಾಡಿ ಬಳಿ ಚಾಲನೆ ನೀಡಿದರು. 

     ಬೈಕ್ ರೈಡಿನ ಮುಂದಿನ ಸಾಲಿನಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಕಣ್ಣಿಗೆ ಗಾಗಲ್, ತಲೆಗೆ ಹೆಲ್ಮೆಟ್ ಧರಿಸಿ ರಾಯಲ್ ಎನ್‌ಫೀಲ್ಡ್ ಭಾರಿ ಬೈಕನ್ನು ಚಲಾಯಿಸಿದ್ದು ನೋಡುಗರಿಗೆ ಅಚ್ಚರಿ ಮೂಡಿಸಿತು.  ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಅವರೂ ಸಹ ರಾಯಲ್ ಎನ್‌ಫೀಲ್ಡ್ ಚಾಲನೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಸಾತ್ ನೀಡಿದರು. ಸುಮಾರು 300 ದ್ವಿಚಕ್ರ ವಾಹನಗಳ ಮಹಿಳಾ ಸವಾರರು ಈ ರೈಡ್‌ನಲ್ಲಿ ಭಾಗವಹಿಸಿದ್ದರು. 

1002114937

     ಮಹಿಳೆಯರು ಮನೆಯಲ್ಲಿ “ಸೌಟು ಹಿಡಿದು ಅಡುಗೆ ಮಾಡಲು ಸೈ-ಹ್ಯಾಂಡಲ್ ಹಿಡಿದು ಬೈಕ್ ಓಡಿಸಲು ಸೈ” ಎಂದು ಹೊಂಡಾ ಆಕ್ಟಿವಾ, ಜುಪಿಟರ್, ಡಿಯೋ, ಆ್ಯಕ್ಸೆಸ್, ಫ್ಯಾಸಿನೋ ಬೈಕ್ ಸವಾರಿ ಮಾಡುತ್ತಾ ಬಟವಾಡಿ ವೃತ್ತದಿಂದ ಎಸ್‌ಐಟಿ ಬ್ಯಾಕ್ ಗೇಟ್-ಶೆಟ್ಟಿಹಳ್ಳಿ ಅಂಡರ್ ಪಾಸ್-ಉಪ್ಪಾರಹಳ್ಳಿ ಅಂಡರ್ ಪಾಸ್-ಭದ್ರಮ್ಮ ವೃತ್ತ-ಬಿ.ಜಿ.ಎಸ್. ವೃತ್ತ-ಕಾಲ್ಟೆಕ್ಸ್ ವೃತ್ತ-ಕುಣಿಗಲ್ ವೃತ್ತ-ಡಾ: ಗಂಗಾಧರಯ್ಯ ವೃತ್ತ-ಗುಬ್ಬಿಗೇಟ್-ಕಾಲ್ಟೆಕ್ಸ್ ವೃತ್ತ-ಮಂಡಿಪೇಟೆ ವೃತ್ತ, -ಬಿ.ಜಿ.ಎಸ್.ವೃತ್ತ-ಎಂ.ಜಿ.ರಸ್ತೆ-ಗುಂಚಿವೃತ್ತ-ಡೀಸಿ ಕಚೇರಿ ವೃತ್ತ-ಕೋತಿತೋಪು ವೃತ್ತ-ತಮ್ಮಯ್ಯ ಆಸ್ಪತ್ರೆ ವೃತ್ತ-ಎಸ್.ಎಸ್.ವೃತ್ತ-ಭದ್ರಮ್ಮ ವೃತ್ತ ಮರ‍್ಗದಲ್ಲಿ ರ‍್ಕಾರಿ ಪದವಿ ಪರ‍್ವ ಕಾಲೇಜು ಮೈದಾನದವರೆಗೂ ಸಾಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002114949 1

    ವಿಕಲಚೇತನ ಮಹಿಳೆಯರಾದ ಲಲಿತಾ, ನಾಗರತ್ನ, ಪವಿತ್ರ, ವೀಣಾ, ನಿವೇದಿತಾ, ಉಮತ್ ಖಾನಂ ಬೈಕ್ ರೈಡ್‌ನಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. 

ಸಚಿವರಿಂದ ಗಜಪಡೆಗೆ ಪೂಜೆ :

     ವಿಜಯದಶಮಿಯಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಶ್ರೀರಾಮ, ನೊಣವಿನಕೆರೆಯ ಲಕ್ಷ್ಮೀ ಹಾಗೂ ಕರಿಬಸವೇಶ್ವರ ಮಠದ ಲಕ್ಷ್ಮೀ ಸೇರಿದಂತೆ 3 ಆನೆಗಳಿಗೆ ನಗರದ ಬಿ.ಜಿ.ಎಸ್. ವೃತ್ತದ ಬಳಿ ಸಚಿವರು ಪೂಜೆ ಸಲ್ಲಿಸಿದರು.

1002114988

     ನಂತರ ಗಜಪಡೆಯು ಬಿ.ಜಿ.ಎಸ್. ವೃತ್ತದಿಂದ ರ‍್ಚ್ ರ‍್ಕಲ್ ಮರ‍್ಗವಾಗಿ ಮತ್ತೆ ಬಿ.ಜಿ.ಎಸ್. ವೃತ್ತದವರೆಗೂ ಮೆರವಣಿಗೆಯ ತಾಲೀಮು ನಡೆಸಿತು.

    ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಸಚಿವರ ವಿಶೇಷ ಕರ‍್ತವ್ಯಾಧಿಕಾರಿ ನಾಗಣ್ಣ, ಮತ್ತಿತರ ಅಧಿಕಾರಿ, ಸರ‍್ವಜನಿಕರು ಭಾಗವಹಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...