ತುಮಕೂರು | ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸುವಂತೆ ಸ್ಲಂ ಸಮಿತಿ ಒತ್ತಾಯ

Date:

ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರಿಗೆ ಸ್ಲಂ ಸಮಿತಿ ಸಂಚಾಲಕ ಎ ನರಸಿಂಹಮೂರ್ತಿಯವರು ಮನವಿ ಸಲ್ಲಿಸಿ ಚರ್ಚೆ ನಡೆಸಿದರು.

“2017ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆದಿರುವ ಸಮೀಕ್ಷೆ ಸಂದರ್ಭದಲ್ಲಿ ಮೂಲ ನಿವಾಸಿಗಳನ್ನು ಕೈಬಿಡಲಾಗಿದೆ. ಈ ಬಗ್ಗೆ ನಾವು ಹಲವಾರು ಬಾರಿ ನಗರಪಾಲಿಕೆಗೆ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಕ್ರಮವಾಗಿರಲಿಲ್ಲ. ಆದರೆ ಜಿಲ್ಲಾಧಿಕಾರಿಯವರು ಇತ್ತೀಚೆಗೆ ಇಲ್ಲಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದ್ದು‌, ಈಗಾಲೇ ದಾಖಲೆ ಸಂಗ್ರಹಣೆ ಮಾಡಲಾಗಿರುತ್ತದೆ” ಎಂದು ಸ್ಲಂ ಸಮಿತಿ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು 7 ವರ್ಷದ ಹಿಂದಿನ ಸಮೀಕ್ಷೆ ಆಗಿರುವುದರಿಂದ ನೈಜವಾಗಿ ವಾಸಿಸುವವರನ್ನು ಪಟ್ಟಿಯಿಂದ ಕೈಬಿಟ್ಟು ಬೆಂಗಳೂರಿನಲ್ಲಿರುವ ಅಲೆಮಾರಿಗಳನ್ನು ಈ ಸಮೀಕ್ಷಾ ಪಟ್ಟಿಯಲ್ಲಿ ಸೇರಿಸಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಹಾಗಾಗಿ ಹೊಸ ಸಮೀಕ್ಷೆ ಮಾಡಿ ಏಕಕಾಲದಲ್ಲಿ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು” ಎಂದು ಕೆಂದು ಜಿಲ್ಲಾಧಿಕಾರಿಗಳಿಗೆ ಅಪಾರ

“ತುಮಕೂರು ನಗರದ 18ನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಬನಶಂಕರಿ ಇಸ್ಮಾಯಿಲ್ ನಗರ ಸ್ಲಂನಲ್ಲಿ ಸುಮಾರು 40 ವರ್ಷಗಳಿಂದ ಅರೆ ಅಲೆಮಾರಿ ಹಂದಿಜೋಗಿ/ಲಂಬಾಣಿ ಸಮುದಾಯದ ಕುಟುಂಬಗಳು ನೆಲೆಸಿದ್ದು, ಇತ್ತೀಚೆಗೆ ತುಮಕೂರು ಸ್ಲಂ ಸಮಿತಿಯು 2023ರ ಜುಲೈ 25ರಂದು ಗೃಹಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅವರಿಗೆ ಪುನರ್ವಸತಿ ಕಲ್ಪಿಸಲು ಮನವಿ ಸಲ್ಲಿಸಲಾಗಿತ್ತು. ಅದರಂತೆ ನಗರ ಮಿತಿಯಲ್ಲಿ 4 ಎಕರೆ ಭೂಮಿಯನ್ನು ಗುರುತಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಮುಂದುವರೆದು ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಈಗಾಗಲೇ ಅಣ್ಣೇನಹಳ್ಳಿ ಸರ್ವೇ ನಂ.74ರಲ್ಲಿ 4 ಎಕರೆ 44 ಕುಂಟೆ ಜಮೀನನ್ನು ಗುರುತಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿದೆ” ಎಂದು ತುಮಕೂರು ಸ್ಲಂ ಸಮಿತಿಯಿಂದ ಅಭಿನಂದನೆ ಸಲ್ಲಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಮನವಿ ಸ್ವೀಕರಿಸಿ ಮಾತನಾಡಿ, “ಕೈಬಿಟ್ಟಿರುವ ಅಲೆಮಾರಿ ಕುಟುಂಬಗಳನ್ನು ಸಮೀಕ್ಷೆ ಮಾಡಿ ಗುರುತಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ತುಮಕೂರು ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗುವುದು. ಇಲ್ಲಿನ ನಿವಾಸಿಗಳನ್ನು ಹೊರತುಪಡಿಸಿ ಅನಧಿಕೃತವಾಗಿ ವಾಸಿಸುವವರ ಬಗ್ಗೆ ಪರೀಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗ್ರಾಮಾಂತರ ಭಾಗದ ಹಳ್ಳಿಗಳು ಮೂಲ ಸೌಕರ್ಯದಿಂದ ವಂಚಿತ

ಈ ಸಂದರ್ಭದಲ್ಲಿ ತುಮಕೂರು ಸ್ಲಂ ಸಮಿತಿಯ ಅರುಣ್, ಇಸ್ಮಾಯಿಲ್ ನಗರ ಸ್ಲಂ ಶಾಖೆಯ ಪದಾಧಿಕಾರಿಗಳಾದ ಚಿಕ್ಕಗಂಗಮ್ಮ, ಮಂಜಮ್ಮ, ರಾಮಕ್ಕ, ವೆಂಕಟೇಶ್, ಗೋಪಾಲಯ್ಯ, ಗಂಗಮ್ಮ, ವೆಂಕಟೇಶ್, ಯುವ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...