ತುಮಕೂರು ವಿವಿ 18ನೇ ಘಟಿಕೋತ್ಸವ : 11,349 ಮಂದಿಗೆ ಪದವಿ ಪ್ರದಾನ

Date:

 “ಶಿಕ್ಷಣವು ವ್ಯಕ್ತಿತ್ವ ವಿಕಸನದ ಜೊತೆಗೆ ಸಮಾಜ ಮತ್ತು ರಾಷ್ಟ್ರದ  ಪ್ರಗತಿಗೆ ಆಧಾರವಾಗಿರುವುದರಿಂದ ಶಿಕ್ಷಣವನ್ನು ಅತ್ಯುತ್ತಮ ಮತ್ತು ಸುರಕ್ಷಿತ ಸಂಪತ್ತು ಎಂದು ಕರೆಯಲಾಗಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು. 

ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಜರುಗಿದ 18ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಿಕ್ಷಣವನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಹಣ, ಆಸ್ತಿ ಕಾಲಾನಂತರದಲ್ಲಿ ಅಂತ್ಯವಾಗಬಹುದು. ಆದರೆ ಶಿಕ್ಷಣವು ಜೀವಿತಾವಧಿಯವರೆಗೆ ಇರುತ್ತದೆಯಲ್ಲದೆ, ವ್ಯಕ್ತಿಯನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಹಾಗೂ ಯೋಚಿಸುವ ಶಕ್ತಿಯನ್ನು ನೀಡುತ್ತದೆ ಎಂದರು. 

ಇಂದಿನ ಜಗತ್ತಿನಲ್ಲಿ ಹೊಸ ಆವಿಷ್ಕಾರಗಳು, ಹೊಸ ತಂತ್ರಜ್ಞಾನಗಳು ಪ್ರತೀ ದಿನ ಹೊರಹೊಮ್ಮುತ್ತಿವೆ. ಇದರಿಂದ ಯುವಪೀಳಿಗೆಯು ಜೀವನಪರ್ಯಂತ ವಿದ್ಯಾರ್ಥಿಯಾಗಿ ಕೆಲಸ ಮಾಡುವ ಅನಿವಾರ್ಯತೆಯಿದೆ. ಇಂದು ಹೊಸದಾಗಿರುವ ತಂತ್ರಜ್ಞಾನವು ನಾಳೆ ಹಳೆಯದಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಡಿಜಿಟಲ್ ಸಾಕ್ಷರತೆ, ನವೀನ ಚಿಂತನೆ, ಜಾಗತಿಕ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಜಗತ್ತು ಪರಿಸರ ಅಸಮತೋಲನ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ವಿಕೋಪಗಳೊಂದಿಗೆ ಹೋರಾಡುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾವಂತ ಯುವಕರು ಪರಿಸರದ ಬಗ್ಗೆ ಜಾಗೃತರಾಗಿರಬೇಕು. ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು. ತಾಂತ್ರಿಕ, ಕೈಗಾರಿಕಾ ಸಾಮಾಜಿಕ ಅಥವಾ ಯಾವುದೇ ಕ್ಷೇತ್ರವಿರಲಿ, ನಿಮ್ಮ ಪ್ರತಿಯೊಂದು ನಿರ್ಧಾರ ಹಾಗೂ ಪ್ರಯತ್ನಗಳು ಸುಸ್ಥಿರ ಅಭಿವೃದ್ಧಿಯ ಕಲ್ಪನೆಯನ್ನು ಹೊಂದಿರಬೇಕು. ನೀವು ಯಾವುದೇ ಕ್ಷೇತ್ರಕ್ಕೆ ಹೋದರೂ, ಹಸಿರು ಭಾರತ, ಸ್ವಚ್ಛ ಭಾರತ ಮತ್ತು ಬಲಿಷ್ಠ ಭಾರತವನ್ನು ನಿರ್ಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

1001700993

ನಮ್ಮ ದೇಶವು ಸಾವಿರಾರು ವರ್ಷಗಳಿಂದ ಜ್ಞಾನದ ದೀಪವನ್ನು ಬೆಳಗಿಸುತ್ತಿದೆ. ವೇದ, ಉಪನಿಷತ್ತು, ಆಯುರ್ವೇದ, ಯೋಗ, ವಾಸ್ತು, ತತ್ವಶಾಸ್ತç, ನ್ಯಾಯಶಾಸ್ತçಗಳು ನಮ್ಮ ಅಮೂಲ್ಯ ಪರಂಪರೆ. ಹೊಸ ಶಿಕ್ಷಣ ನೀತಿಯು ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತೆ ವೇದೋಪನಿಷತ್ತುಗಳಿಗೆ ಸ್ಥಾನ ನೀಡಿದೆ ಎಂದರಲ್ಲದೆ, ವಿಶ್ವವಿದ್ಯಾನಿಲಯದಿಂದ ಪಡೆದ ಜ್ಞಾನ ಮತ್ತು ಕೌಶಲ್ಯವು ಬದುಕಿನಲ್ಲಿ ಎದುರಾಗುವ ಹೊಸ ಸವಾಲುಗಳನ್ನು ಹಿಮ್ಮೆಟ್ಟಿಸಲು ಮತ್ತು ಹೊಸ ಅವಕಾಶಗಳನ್ನು ಬಳಸಿಕೊಳ್ಳಲು ಸಾಧ್ಯವಾಗಲಿದೆ. ಸ್ವಾಮಿ ವಿವೇಕಾನಂದರ “ಎದ್ದೇಳಿ, ಎಚ್ಚರಗೊಳ್ಳಿ ಮತ್ತು ಗುರಿ ಸಾಧಿಸುವವರೆಗೆ ನಿಲ್ಲಬೇಡಿ” ಎಂಬ ಸ್ಪೂರ್ತಿದಾಯಕ ಮಾತುಗಳಿಂದ ನಮ್ಮ ರಾಷ್ಟ್ರವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಬೇಕು. ತಾವು ಪಡೆದ ಶಿಕ್ಷಣದಿಂದ ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 

ಪ್ರಸ್ತುತ ನಮ್ಮ ದೇಶವು 100ಕ್ಕೂ ಹೆಚ್ಚು ಯುನಿಕಾರ್ನ್ ಸ್ಟಾರ್ಟ್ಅಪ್‌ಗಳನ್ನು ಹೊಂದಿದೆ. ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯು ವಿಶ್ವದ ಅತ್ಯಂತ ಶಕ್ತಿಶಾಲಿ ವ್ಯವಸ್ಥೆಯಾಗಿದೆ. ಚಂದ್ರಯಾನದಿಂದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಪ್ರಮುಖ ಪಾತ್ರ ವಹಿಸುತ್ತಿದ್ದೇವೆ. ಇಂದಿನ ಯುವಕರು ನಾವೀನ್ಯತೆ, ಕಠಿಣ ಪರಿಶ್ರಮ ಮತ್ತು ದೇಶಭಕ್ತಿಯನ್ನು ತಮ್ಮ ಮೂಲ ಮಂತ್ರವನ್ನಾಗಿ ಮಾಡಿಕೊಂಡಿರುವುದರಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಹೇಳಿದರು. 

ಉದ್ಯೋಗ ಪಡೆಯುವುದರ ಜೊತೆಗೆ, ಜೀವನವನ್ನು ಅರ್ಥಪೂರ್ಣಗೊಳಿಸುವುದು, ರಾಷ್ಟ್ರವನ್ನು ಸಮೃದ್ಧಗೊಳಿಸುವುದು ವಿದ್ಯಾರ್ಥಿಗಳ ಗುರಿಯಾಗಬೇಕು. ನಿಮ್ಮಲ್ಲಿ ಕೆಲವರು ಉನ್ನತ ಶಿಕ್ಷಣಕ್ಕೆ ಹೋಗುತ್ತೀರಿ, ಕೆಲವರು ಉದ್ಯೋಗವನ್ನು ಪಡೆದುಕೊಳ್ಳುತ್ತೀರಿ, ಕೆಲವರು ಉದ್ಯಮಿಗಳಾಗುತ್ತೀರಿ, ಕೆಲವರು ಸಂಶೋಧನೆ ಅಥವಾ ಆಡಳಿತಕ್ಕೆ ಕೊಡುಗೆ ನೀಡುತ್ತೀರಿ. ನೀವು ಆರಿಸಿಕೊಳ್ಳುವ ಯಾವುದೇ ಕ್ಷೇತ್ರದಲ್ಲಿ ನೈತಿಕತೆ ಮತ್ತು ಸಾಮಾಜಿಕ ದೃಷ್ಟಿಕೋನವನ್ನು ಕಾಪಾಡಿಕೊಳ್ಳಬೇಕು ಎಂದು ಮಾರ್ಗದರ್ಶನದ ಮಾತು ಹೇಳಿದರು.

1001701054

ಘಟಿಕೋತ್ಸವದಲ್ಲಿ ಶಿಕ್ಷಣ, ಸಾಹಿತ್ಯ, ಆರೋಗ್ಯ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಎಸ್.ನಾಗಣ್ಣ, ಹಂಪ ನಾಗರಾಜಯ್ಯ ಹಾಗೂ ದಿಲೀಪ್ ಸುರಾನಾ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ ಅವರು, ಡಾಕ್ಟರೇಟ್ ಗೌರವ ಪಡೆದವರು ತಮ್ಮ ಸಾಮಾಜಿಕ ಸೇವೆಗಳನ್ನು ಇದೇ ರೀತಿ ಮುಂದುವರೆಸಬೇಕು ಎಂದು ಮನವಿ ಮಾಡಿದರು. 

ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಪ್ರೊ. ಟಿ.ಜಿ.ಸೀತಾರಾಮ್  ತಮ್ಮ ಘಟಿಕೋತ್ಸವ ಭಾಷಣದಲ್ಲಿ ವಿಶ್ವವಿದ್ಯಾನಿಲಯದಿಂದ ಈ ದಿನ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮಾತನಾಡುತ್ತಾ, ಹಲವು ವರ್ಷಗಳ ಕಠಿಣ ಪರಿಶ್ರಮ, ಶಿಸ್ತು, ಜಾಗರಣೆ, ಕ್ಯಾಂಪಸ್ ಕಲಿಕೆಯು ಜೀವನದುದ್ದಕ್ಕೂ ನಿಮ್ಮೊಂದಿಗಿರುವ ಅಧ್ಯಯನದ ಸಾಧನೆಯ ಫಲಿತಾಂಶ. ನಿಮ್ಮ ಪೋಷಕರು ಮತ್ತು ಕುಟುಂಬದ ತ್ಯಾಗ, ಪ್ರೋತ್ಸಾಹ, ನಂಬಿಕೆಯೇ ಈ ಯಶಸ್ಸಿಗೆ ಕಾರಣವಾಗಿದೆ. ಔಪಚಾರಿಕವಾಗಿ ಪದವಿ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವ ಈ ದಿನ ನಿಮಗೆ ಮಹತ್ತರವಾದ ಪ್ರಾರಂಭದ ದಿನವಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರಲ್ಲದೆ, ತಾವು ಅಧ್ಯಕ್ಷರಾಗಿರುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಪರಿಚಯ ಹಾಗೂ ಅದರಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ವಿವರಿಸಿದರು. 

ಇದೇ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರಭಾರ ಕುಲಸಚಿವ ಪ್ರೊ. ಕೊಟ್ರೇಶ್ ಎಂ., ಕುಲಸಚಿವ(ಪರೀಕ್ಷಾಂಗ) ಪ್ರೊ. ಸತೀಶ್ ಗೌಡ ಎನ್., ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ವಿವಿಧ ಇಲಾಖಾಧಿಕಾರಿಗಳು, ವಿಶ್ವವಿದ್ಯಾನಿಲಯದ ವಿದ್ಯಾವಿಷಯಕ ಪರಿಷತ್ ಮತ್ತು ಸಿಂಡಿಕೇಟ್‌ನ ಸದಸ್ಯರು, ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

76 ವಿದ್ಯಾರ್ಥಿಗಳಿಗೆ ಚಿನ್ನದ ಪದಕ :

ಘಟಿಕೋತ್ಸವದಲ್ಲಿಂದು ವಿವಿಧ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿ ಪದವಿ ಪಡೆದಿರುವ 76 ವಿದ್ಯಾರ್ಥಿಗಳಿಗೆ 106 ಚಿನ್ನದ ಪದಕ ಹಾಗೂ 4 ವಿದ್ಯಾರ್ಥಿಗಳಿಗೆ 6 ನಗದು ಬಹುಮಾನವನ್ನು ಪ್ರದಾನ ಮಾಡಲಾಯಿತು. ಅಲ್ಲದೆ ಇಬ್ಬರಿಗೆ ಡಿ.ಲಿಟ್, 59 ಮಂದಿಗೆ ಪಿಹೆಚ್.ಡಿ, 1911 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ, 9438 ವಿದ್ಯಾರ್ಥಿಗಳಿಗೆ ಪದವಿ ಸೇರಿದಂತೆ 11,349 ಮಂದಿಗೆ ಪದವಿ ಪ್ರದಾನ ಮಾಡಲಾಯಿತು. 

1001700990

ರಾಜ್ಯಪಾಲರಿಂದ ವಿದ್ಯಾರ್ಥಿಗಳಿಗೆ ಭೋಜನ ವಿತರಣೆ : ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿ ವತಿಯಿಂದ ವಿತರಿಸುತ್ತಿರುವ ಬಿಸಿಯೂಟ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿದ ರಾಜ್ಯಪಾಲರು ವಿದ್ಯಾರ್ಥಿಗಳಿಗೆ ತಾವೇ ಊಟ ಬಡಿಸುವ ಮೂಲಕ ಯೋಜನೆಯ ಬಗ್ಗೆ ಮೆಚ್ಚುಗೆ ಸೂಚಿಸಿದರು.

1001700991

ಪಾವಗಡ ರಾಮಕೃಷ್ಣ ಸೇವಾಶ್ರಮ ಹಾಗೂ ಆದರ್ಶನಗರದ ಶಿರಡಿ ಸಾಯಿಮಂದಿರದ ಸಹಯೋಗದಲ್ಲಿ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ಮಾಡುತ್ತಿರುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ಲಾಘಿಸಿದ ರಾಜ್ಯಪಾಲರು, ರಾಜ್ಯದ ಬೇರೆ ಯಾವ ವಿವಿಯಲ್ಲೂ ಇಂತಹ ಯೋಜನೆ ಕಂಡಿಲ್ಲ. ತುಮಕೂರು ವಿವಿಯಲ್ಲಿ ಕೇವಲ 5 ರೂಪಾಯಿಗೆ ಮಕ್ಕಳಿಗೆ ಊಟ ಕೊಡುತ್ತಿರುವುದು ಮಾದರಿಯಾಗಿದೆ ಎಂದು ಪ್ರಶಂಸಿಸಿದರು.

ಈ ವೇಳೆ ಯೋಜನೆ ಕುರಿತು ರಾಜ್ಯಪಾಲರಿಗೆ ವಿವರಿಸಿದ ಪಾವಗಡ ರಾಮಕೃಷ್ಣ ಸೇವಾಶ್ರಮದ ಮುಖ್ಯಸ್ಥರಾದ ಸ್ವಾಮಿ ಜಪಾನಂದಜೀ ಹಾಗೂ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅವರು ಕಳೆದ ಮೂರು ವರ್ಷಗಳಿಂದ ದಾನಿಗಳ ಸಹಕಾರ, ಸಮಿತಿ ಸದಸ್ಯರ ನಿಸ್ಪೃಹ ಕಾರ್ಯ ಬದ್ಧತೆಯಿಂದಾಗಿ ಯೋಜನೆ ಅನೂಚಾನವಾಗಿ ನಡೆದು ಬಂದಿದ್ದು, ಪ್ರಸಕ್ತ ಊಟದ ಯೋಜನೆ ಪ್ರಯೋಜನ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 4000ಕ್ಕೆ ವಿಸ್ತರಣೆಯಾಗಿದೆ. ವಿವಿಯ ನೂತನ ಜ್ಞಾನಸಿರಿ ಕ್ಯಾಂಪಸ್‌ನ ವಿದ್ಯಾರ್ಥಿಗಳಿಗೂ ಊಟ ವಿತರಿಸುತ್ತಿದ್ದು, ದೂರದ ಊರುಗಳಿಂದ ಬೆಳಿಗ್ಗೆ ಹಸಿದು ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟ ಅನುಕೂಲವಾಗಿದೆ ಎಂದರು.

 ಅನ್ನಪೂರ್ಣೆಶ್ವರಿ ಆಹಾರ ಸಮಿತಿ ಸದಸ್ಯರಾದ ಡಾ. ಎಸ್.ನಾಗಣ್ಣ, ಡಾ. ಎಚ್.ಜಿ. ಚಂದ್ರಶೇಖರ್, ಡಾ.ರಮೇಶ್‌ಬಾಬು, ನಟರಾಜಶೆಟ್ಟಿ, ಕುಲಸಚಿವರು, ಕಾಲೇಜಿನ ಪ್ರಾಂಶುಪಾಲೆ ಪ್ರೊ. ದ್ರಾಕ್ಷಾಯಿಣಿ, ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...