ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ : ವಿಡಿಯೋ ಪ್ರಸಾರ ಮಾಡದಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರ ನಿರ್ದೇಶನ

Date:

  • ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್
  • ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ ಹರಿದಾಡುತ್ತಿರುವ ವಿಡಿಯೋವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಟ್ವಿಟರ್ ಸಹಿತ ಇತರೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಸರ್ಕಾರದ ಮೂಲವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸುದ್ದಿ ಸಂಸ್ಥೆ ಎಎನ್‌ಐ, ಮಣಿಪುರದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿರುವ ವಿಡಿಯೋವನ್ನು ಶೇರ್ ಮಾಡದಂತೆ ಸರ್ಕಾರವು ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಗೆ ಆದೇಶಿಸಿದೆ. ಈ ವಿಷಯವು ಪ್ರಸ್ತುತ ತನಿಖೆಯಲ್ಲಿರುವುದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ದೇಶದ ಕಾನೂನುಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಪ್ರಸಾರ ಮಾಡದಂತೆ ಸೂಚಿಸಿದೆ ಎಂದು ತಿಳಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರ | ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದ ದುಷ್ಟರ ಗುಂಪು; ದೇಶಾದ್ಯಂತ ಆಕ್ರೋಶ

ಈ ಘಟನೆಯ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ.ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ

ವಿಕೃತ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಮೆರವಣೆಗೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಳೆದ ಮೇ ತಿಂಗಳಲ್ಲಿ ನಡೆದಿತ್ತು.

ಮಣಿಪುರ

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯ ಬಿ ಫೈನೋಮ್ ಎಂಬ ಹಳ್ಳಿಯ ಬಳಿ ಮೇತೀ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ ​ಈ ಘಟನೆ ನಡೆದಿತ್ತು.

ಸಂತ್ರಸ್ತ ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರಾಗಿದ್ದು, ವಿಕೃತ ಮನಸ್ಸಿನ ಪುರುಷರ ಗುಂಪು ಅವರ ಮೇಲೆ ದೌರ್ಜನ್ಯ ಎಸಗಿ, ವಿಡಿಯೋವನ್ನು ಹರಿಬಿಟ್ಟಿದೆ. ವಿಡಿಯೋದಲ್ಲಿ ಮಹಿಳೆಯರು ಅಸಹಾಯತೆಯಿಂದ ಅಂಗಲಾಚುತ್ತಿದ್ದರೂ, ಅವರನ್ನು ಆ ದುರುಳರು ಎಳೆದೊಯ್ಯುತ್ತಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...