ಅಪಘಾತದ ವೇಳೆ ಬಿಚ್ಚಿಕೊಳ್ಳದ ‘ಏರ್ ಬ್ಯಾಗ್’: ಆನಂದ್ ಮಹೀಂದ್ರಾ ಸೇರಿ 12 ಜನರ ವಿರುದ್ಧ ಎಫ್ಐಆರ್

Date:

  • ಮೃತ ಯುವಕನ ತಂದೆಯಿಂದ ದೂರು: ಉತ್ತರ ಪ್ರದೇಶದ ಕಾನ್ಪುರದಲ್ಲಿ ದಾಖಲಾದ ಎಫ್‌ಐಆರ್
  • 2022ರ ಜನವರಿಯಲ್ಲಿ ಮಹೀಂದ್ರಾ ಸ್ಕಾರ್ಪಿಯೋ ಅಪಘಾತದಲ್ಲಿ ಮೃತಪಟ್ಟಿದ್ದ ಯುವಕ ಅಪೂರ್ವ್ ಮಿಶ್ರಾ

ತನ್ನ ಮಗ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಅಪಘಾತ ಸಂಭವಿಸಿದಾಗ ‘ಏರ್ ಬ್ಯಾಗ್’ ಬಿಚ್ಚಿಕೊಳ್ಳದ ಪರಿಣಾಮ ಆತನ ಸಾವಿಗೆ ಮಹೀಂದ್ರಾ ಕಂಪೆನಿಯು ಎಸ್‌ಯುವಿ ವಾಹನದ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿದ್ದೇ ಕಾರಣ ಎಂದು ಯುವಕನ ತಂದೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ದೇಶದ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಸೇರಿ 12 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎಸ್‌ಯುವಿ ವಾಹನ ಸುರಕ್ಷತೆಯ ಬಗ್ಗೆ ಸುಳ್ಳು ಭರವಸೆ ನೀಡಿದ್ದು, ರಸ್ತೆ ಅಪಘಾತದ ವೇಳೆ ತನ್ನ ಮಗನ ಸಾವು ಸಂಭವಿಸಿದೆ ಎಂದು ಆರೋಪಿಸಿ ರಾಜೇಶ್ ಮಿಶ್ರಾ ಎಂಬವರು ನೀಡಿರುವ ದೂರಿನ ಆಧಾರದ ಮೇಲೆ ಕಾನ್ಪುರದಲ್ಲಿ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತು ಇತರ 12 ಜನರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

2022ರ ಜನವರಿ 14ರಂದು ಅಪಘಾತದಲ್ಲಿ ತನ್ನ ಮಗ ಡಾ. ಅಪೂರ್ವ್ ಮಿಶ್ರಾ ಅವರನ್ನು ಕಳೆದುಕೊಂಡಿದ್ದ ರಾಜೇಶ್ ಮಿಶ್ರಾ, ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಕಾನ್ಪುರದ ರಾಯ್‌ಪುರವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದವರಲ್ಲಿ ಡೀಲರ್‌ಶಿಪ್ ಮ್ಯಾನೇಜರ್ ಆನಂದ್ ಗೋಪಾಲ್ ಮಹೀಂದ್ರ ಕೂಡ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜೇಶ್ ಮಿಶ್ರಾ ಅವರು ನೀಡಿರುವ ದೂರಿನಲ್ಲಿ, “ಡಿಸೆಂಬರ್ 2, 2020ರಂದು 17.39 ಲಕ್ಷ ರೂಪಾಯಿ ಕೊಟ್ಟು ನಾನು ಕಪ್ಪು ಬಣ್ಣದ ಮಹೀಂದ್ರ ಸ್ಕಾರ್ಪಿಯೋ ಎಸ್‌ಯುವಿ ಖರೀದಿಸಿದ್ದೆ. ಖರೀದಿಸುವ ಮೊದಲು ಆನಂದ್ ಮಹೀಂದ್ರಾ ಅವರು ಈ ವಾಹನದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಜಾಹೀರಾತು ಮತ್ತು ಪೋಸ್ಟ್‌ಗಳನ್ನು ನೋಡಿದ್ದೆ. ಅದರಲ್ಲಿ ವಾಹನದ ಸುರಕ್ಷತೆಯ ಅಂಶವನ್ನು ಉಲ್ಲೇಖಿಸಿದ್ದರು” ಎಂದು ತಿಳಿಸಿದ್ದಾರೆ.

“ತನ್ನ ಮಗ ಡಾ. ಅಪೂರ್ವ್ ಮಿಶ್ರಾ ಅವರಿಗೆ ಎಸ್‌ಯುವಿಯನ್ನು ಉಡುಗೊರೆಯಾಗಿ ನೀಡಿದ್ದು, ಜನವರಿ 14, 2022 ರಂದು, ನನ್ನ ಮಗ ಡಾ ಅಪೂರ್ವ್ ಅದೇ ವಾಹನದಲ್ಲಿ ಲಕ್ನೋದಿಂದ ಕಾನ್ಪುರಕ್ಕೆ ಹಿಂದಿರುಗುತ್ತಿದ್ದನು. ಅಪೂರ್ವ್ ಜೊತೆಗೆ, ಅವರ ಸ್ನೇಹಿತರು ಕೂಡ ಸಹ ಕಾರಿನಲ್ಲಿದ್ದರು. ಅವರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರು. ಮಂಜಿನಿಂದಾಗಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ನನ್ನ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸಿದ್ದರೂ, ಕಾರಿನಲ್ಲಿರುವ ಏರ್‌ಬ್ಯಾಗ್‌ಗಳು ತೆರೆಯಲಿಲ್ಲ, ಇದರಿಂದಾಗಿ ಮಗನ ಸಾವಿಗೆ ಕಾರಣವಾಯಿತು. ಅಲ್ಲದೇ, ಆ ಬಳಿಕ ತಾನು ಅಪಘಾತಕ್ಕೀಡಾದ ವಾಹನವನ್ನು ಪರಿಶೀಲಿಸಿದಾಗ ವಾಹನದಲ್ಲಿ ಏರ್‌ಬ್ಯಾಗ್ ಅಳವಡಿಸಿಲ್ಲ” ಎಂದು ರಾಜೇಶ್ ಮಿಶ್ರಾ ದೂರಿನಲ್ಲಿ ಆರೋಪಿಸಿದ್ದಾರೆ.

ಹೀಗಾಗಿ ಕಂಪನಿ ಸುಳ್ಳು ಆಶ್ವಾಸನೆ ನೀಡಿ ವಂಚಿಸಿದೆ. ಸುರಕ್ಷತೆಯ ಭರವಸೆಯನ್ನು ನೀಡದಿದ್ದರೆ ತಾನು ಎಸ್‌ಯುವಿಯನ್ನು ಎಂದಿಗೂ ಖರೀದಿಸುತ್ತಿರಲಿಲ್ಲ ಎಂದು ದೂರುದಾರರು ಹೇಳಿದ್ದಾರೆ.

suv

ಈ ವಿಚಾರವಾಗಿ ಮೊದಲು ಶೋರೂಂ ಉದ್ಯೋಗಿಗೆ ದೂರು ನೀಡಿದಾಗ ಮೊದಲು ಜಗಳ ಆರಂಭಿಸಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ರಾಜೇಶ್ ಮಿಶ್ರಾ, ಎಫ್‌ಐಆರ್ ದಾಖಲಿಸಲು ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆ ಬಳಿಕ, ನ್ಯಾಯಾಲಯದ ಸೂಚನೆಯ ಮೇರೆಗೆ ಮಹೀಂದ್ರಾ ಅಧ್ಯಕ್ಷ ಆನಂದ್ ಗೋಪಾಲ್ ಮಹೀಂದ್ರಾ ಮತ್ತು ಇತರ 12 ಮಂದಿ ವಿರುದ್ಧ ರಾಯ್ಪುರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಏರ್‌ಬ್ಯಾಗ್‌ಗಳು ಇರಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾನ್ಪುರದ ಶ್ರೀ ತಿರುಪತಿ ಮೋಟಾರ್ಸ್‌ನ ಹಿರಿಯ ಸಿಬ್ಬಂದಿಯೋರ್ವರು, ಏರ್‌ಬ್ಯಾಗ್‌ಗಳು ತೆರೆಯದ ನಿರ್ದಿಷ್ಟ ಜಾಗದಲ್ಲಿ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಏರ್‌ಬ್ಯಾಗ್ ಇರಲಿಲ್ಲ ಎಂಬ ದೂರುದಾರರ ಹೇಳಿಕೆಯನ್ನು ಅವರು ತಳ್ಳಿ ಹಾಕಿದ್ದಾರೆ.

ರಾಯ್ಪುರ ಪೊಲೀಸರು ಭಾರತೀಯ ದಂಡ ಸಂಹಿತೆ 420 (ವಂಚನೆ), 287 (ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

506 (ಕ್ರಿಮಿನಲ್ ಬೆದರಿಕೆ), ಮತ್ತು 102-ಬಿ (ಅಪರಾಧ ಬೆದರಿಕೆ). ಪ್ರಕರಣದ ತನಿಖೆ ಮುಂದುವರಿದಿದೆ ಎಂದು ರಾಯ್ಪುರದ ಪೊಲೀಸ್ ಅಧಿಕಾರಿ ಅಮನ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಿಂದ್ರಾ ಕಂಪನಿ, “ಪ್ರಕರಣವು 18 ತಿಂಗಳುಗಳಿಗಿಂತ ಹಳೆಯದಾಗಿದ್ದು, 2022ರ ಜನವರಿಯಲ್ಲಿ ನಡೆದಿದೆ. ಆ ವಾಹನದಲ್ಲಿ ಏರ್‌ಬ್ಯಾಗ್ ಇರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದರೆ, ಅಪಘಾತಕ್ಕೆ ಒಳಗಾಗಿದ್ದ ಸ್ಕಾರ್‌ಪಿಯೋ ಎಸ್‌9 ವಾಹನವು 2020ರಲ್ಲಿ ರೂಪಾಂತರಗೊಂಡಿದ್ದು, ಆ ವಾಹನ ಏನ್‌ಬ್ಯಾಗ್‌ಗಳನ್ನು ಹೊಂದಿದೆ. ನಾವು ಆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದೇವೆ. ಘಟನೆವೇಳೆ ಏರ್‌ಬ್ಯಾಗ್‌ಗಳ ಅಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ. ಆ ಘಟನೆ ರೋಲ್‌ಓವರ್ ಪ್ರಕರಣವಾದ್ದರಿಂದ ಮುಂಭಾಗದ ಏರ್‌ಬ್ಯಾಗ್‌ಗಳು ಬಿಚ್ಚಿಕೊಂಡಿಲ್ಲ” ಎಂದು ವಿವರಿಸಿದೆ.

“ಪ್ರಕರಣವು ಪ್ರಸ್ತುತ ನ್ಯಾಯಾಂಗದಲ್ಲಿದೆ. ಅಗತ್ಯವಿರುವ ಯಾವುದೇ ಹೆಚ್ಚಿನ ತನಿಖೆಗಾಗಿ ನಾವು ಅಧಿಕಾರಿಗಳೊಂದಿಗೆ ಸಹಕರಿಸಲು ಬದ್ಧರಾಗಿದ್ದೇವೆ” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...