ಉತ್ತರ ಕನ್ನಡ | ಜಿಲ್ಲೆಯಲ್ಲಿ ಸಮೀಕ್ಷೆ ಚುರುಕು: ರಾಜ್ಯದಲ್ಲಿ 6ನೇ ಸ್ಥಾನ ಪಡೆದ ಜಿಲ್ಲೆ

Date:

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕು ಪಡೆದುಕೊಂಡಿದೆ. ಜಿಲ್ಲೆ ಪ್ರಸ್ತುತ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ.

ಸೆಪ್ಟೆಂಬರ್ 22 ರಂದು ಸಮೀಕ್ಷೆಗೆ ಚಾಲನೆ ದೊರೆತಿದ್ದರೂ ಮೊದಲ ದಿನದಲ್ಲಿ ಕೇವಲ 134 ಮನೆಗಳ ಸಮೀಕ್ಷೆ ನಡೆದಿತ್ತು. ಮೊದಲ ಮೂರು ದಿನ ಶಿಕ್ಷಕರ ಪ್ರತಿಭಟನೆ, ತಾಂತ್ರಿಕ ಅಡಚಣೆ ಮತ್ತು ನಿಯೋಜನೆ ಸಂಬಂಧಿತ ಗೊಂದಲಗಳಿಂದ ಕಾರ್ಯ ನಿರೀಕ್ಷಿತ ಪ್ರಗತಿ ಕಾಣಲಿಲ್ಲ.

ಆದರೆ ಕಳೆದ ಕೆಲವು ದಿನಗಳಿಂದ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಇವತ್ತಿನವರೆಗೆ ಜಿಲ್ಲೆಯಲ್ಲಿ 1,68,046 ಮನೆಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ 12 ರಿಂದ 15 ಸಾವಿರ ಮನೆಗಳ ಸಮೀಕ್ಷೆ ನಡೆಯುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟು 3,26,860 ಮನೆಗಳ ಸಮೀಕ್ಷೆಯ ಗುರಿ ಹೊಂದಲಾಗಿದ್ದು, ಇದುವರೆಗೆ 51 ಪ್ರತಿಶತ ಕಾರ್ಯ ಮುಗಿದಿದೆ. ಈ ಕಾರ್ಯಕ್ಕಾಗಿ 2,916 ಬ್ಲಾಕ್‌ಗಳು ರಚಿಸಲ್ಪಟ್ಟಿದ್ದು, 3,923 ಗಣತಿದಾರರು ನಿಯೋಜಿಸಲ್ಪಟ್ಟಿದ್ದಾರೆ. ಸಮೀಕ್ಷೆ ಪ್ರಕ್ರಿಯೆಗೆ ಆರಂಭದಲ್ಲಿ ಅನೇಕ ಅಡಚಣೆಗಳಿದ್ದರೂ, ಅವು ಬಹುತೇಕ ಬಗೆಹರಿದು ಕಾರ್ಯಸುಗಮವಾಗಿದೆ. ಆದರೆ ಸಮೀಕ್ಷೆ ವೇಳೆ ಮನೆ ಮಾಲೀಕರು ಅಗತ್ಯ ದಾಖಲೆಗಳನ್ನು ಹುಡುಕುವಲ್ಲಿ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ.

ಇದರ ಪರಿಣಾಮವಾಗಿ, ಒಂದೇ ಮನೆಗೆ ಸಮೀಕ್ಷೆ ಪೂರ್ಣಗೊಳಿಸಲು ಗಂಟೆಗಳ ಕಾಲ ಬೇಕಾಗುತ್ತಿದೆ. ಸರ್ಕಾರ ಸಮೀಕ್ಷಾ ಅವಧಿಗೆ ವಿಸ್ತರಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ, ಶಿಕ್ಷಕರು ತಮ್ಮ ರಜೆ ಮುಗಿಯುವ ಮೊದಲು ಸಮೀಕ್ಷೆ ಮುಗಿಸಲು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಸಮೀಕ್ಷೆಗೆ ನಿಯೋಜನಾ ಆದೇಶ ಪಡೆದಿರುವ ಶಿಕ್ಷಕರು ಮತ್ತು ಇತರ ಇಲಾಖೆಯ ಗಣತಿದಾರರು ಕಾರ್ಯದಲ್ಲಿನ ಲೋಪದೋಷಗಳ ಕುರಿತು ಬಹಿರಂಗವಾಗಿ ಹೇಳಿಕೆ ನೀಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶ ಜಾರಿಯಲ್ಲಿದೆ. ಪ್ರತಿಭಟನೆ ನಡೆಸುವುದು ಅಥವಾ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕಾರ್ಯವನ್ನು ಸಹ ಅನುಮತಿಸಿಲ್ಲ ಎಂದು ಸಮೀಕ್ಷೆಗೆ ನಿಯೋಜಿಸಲಾಗಿರುವ ಶಿಕ್ಷಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡದ ಮುಂಗಾರು ವರದಿ: ಕೋಟ್ಯಂತರ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ!

ಗೋವಾ ರಾಜ್ಯದಲ್ಲಿ ಸಮೀಕ್ಷೆ.

ರಾಜ್ಯದ ಕೊನೆಯ ಹಳ್ಳಿಯಾದ ಕಾರವಾರ ತಾಲ್ಲೂಕಿನ ಕಮ್ಮರ್‌ಗಾಂವ್‌ನಲ್ಲಿ ರಸ್ತೆ, ಪಡಿತರ ಹಾಗೂ ಸಮರ್ಪಕ ವಿದ್ಯುತ್‌ ಸೌಲಭ್ಯಗಳ ಕೊರತೆಯಿದ್ದರೂ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸ್ವತಃ ಆಸಕ್ತಿ ತೋರಿದ್ದು, ಅಲ್ಲಿಗೂ ಸಹ ಅಧಿಕಾರಿಗಳು ಭೇಟಿ ನೀಡಿ ನೇಟ್ವರ್ಕ ಸಿಗುವ ಜಾಗಕ್ಕೆ ವಾಹನದ ವ್ಯವಸ್ಥೆ ಮಾಡಿ ಸಮೀಕ್ಷೆ ಕಾರ್ಯವನ್ನು ನೀಡಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಉತ್ತರ ಕನ್ನಡ | ‘ಸ್ವಯಂಚಾಲಿತ ಮ್ಯುಟೇಶನ್’ ಕ್ರಾಂತಿ: 900ಕ್ಕೂ ಅಧಿಕ ಪ್ರಕರಣಗಳು ಹಸ್ತಕ್ಷೇಪವಿಲ್ಲದೆ ವಿಲೇವಾರಿ

ಭೂದಾಖಲೆಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಸಾರ್ವಜನಿಕರ ಅಲೆದಾಟ ತಪ್ಪಿಸಲು ಸರ್ಕಾರ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...