ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ

Date:

  • ‘ದೂರದ ಗುಜರಾತ್‌ನಿಂದ ಆದೇಶ ಬಂದಾಗ ಕೇವಲ 24 ಗಂಟೆಯಲ್ಲಿ ಎಲ್ಲವೂ ಮುಗಿದಿತ್ತು’ ಎಂದ ಎಐಸಿಸಿ ಅಧ್ಯಕ್ಷ
  • ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ : ರಾಹುಲ್ ಗಾಂಧಿ

‘ಗುಜರಾತ್ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದ್ದ ಕೇವಲ 24 ಗಂಟೆಯೊಳಗೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಅನರ್ಹತೆಗೊಳಿಸಲಾಗಿತ್ತು. ಈಗ ಸುಪ್ರೀಂ ಆದೇಶದ ಬಳಿಕ ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ’ ಎಂದು ಕಾದು ನೋಡಬೇಕಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾರ್ಮಿಕವಾಗಿ ಹೇಳಿದರು.

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ಗುಜರಾತ್ ಹೈಕೋರ್ಟ್‌ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶದಲ್ಲಿ ತಡೆ ನೀಡಿದ ಬಳಿಕ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ಮುಖಂಡರೊಂದಿಗೆ ಸುದ್ದಿಗೋಷ್ಠಿ ವೇಳೆ ಅವರು ಮಾತನಾಡಿದರು.

‘ಗುಜರಾತ್ ದೆಹಲಿಯಿಂದ ಸುಮಾರು 500-600 ಕಿಮೀ ದೂರದಲ್ಲಿದೆ. ಅಲ್ಲಿಯ ಆದೇಶ ಬಂದ ಬಳಿಕ, ಕೇವಲ 24 ಗಂಟೆಯೊಳಗೆ ಅನರ್ಹತೆ, ಲೋಕಸಭೆಯಿಂದ ಹೊರಹಾಕುವುದು ಎಲ್ಲವೂ ನಡೆಯಿತು. ಈಗ ಸುಪ್ರೀಂ ಕೋರ್ಟು ಮತ್ತು ನಮ್ಮ ಲೋಕಸಭೆಗೆ ಕೆಲವೇ ಕಿ ಮೀ ಅಂತರವಿದೆ. ಹಾಗಾಗಿ, ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ. ಇಷ್ಟರವರೆಗೆ ಕಾದು ನೋಡಿದ ನಮಗೆ, ಇದು ಕೂಡ ಏನೂ ದೊಡ್ಡದಲ್ಲ. ಇವತ್ತು ರಾತ್ರಿಯೇ ಅನರ್ಹತೆ ಹಿಂಪಡೆಯಲಿ ಎಂಬುದು ನಮ್ಮ ಬಯಕೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇಂದು ಬಹಳ ಸಂತೋಷದ ದಿನ. ಪ್ರಜಾಪ್ರಭುತ್ವ ಗೆದ್ದಿದೆ, ಸಂವಿಧಾನ ಗೆದ್ದಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4 ಸಾವಿರ ಕಿಲೋ ಮೀಟರ್ ಪಾದಯಾತ್ರೆ ಮಾಡಿದ್ದರು. ಈ ಜಯ ಎಲ್ಲ ಜನರ ಪ್ರಾರ್ಥನೆಯ ಫಲ. ಆದರೆ ಈ ಆದೇಶ ಬಂದ ಬಳಿಕ ಬಿಜೆಪಿಯವರಿಗೆ ನಿರಾಶೆಯಾಗಿರಬಹುದು’ ಎಂದು ಖರ್ಗೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿದ್ದ ರಾಹುಲ್ ಗಾಂಧಿ ಹೆಚ್ಚು ಮಾತನಾಡದೆ, ‘ಇಂದಲ್ಲ ನಾಳೆ, ಅಥವಾ ನಾಡಿದ್ದು ಜಯ ಸಿಕ್ಕೇ ಸಿಗುತ್ತದೆ. ನನ್ನ ದಾರಿ ಯಾವುದು, ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ. ತುಂಬಾ ಮಂದಿ ಸಹಾಯ ಮಾಡಿದ್ದಾರೆ. ಜನರು ಪ್ರೀತಿ, ಸಹಕಾರ ತೋರಿದ್ದಾರೆ. ಅವರ ಪ್ರೀತಿಗೆ ಧನ್ಯವಾದ ಸಲ್ಲಿಸುತ್ತೇನೆ. ‘ ಎಂದಷ್ಟೇ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...