ಅಖಿಲ ಭಾರತ ಬೆಂಬಲ ದಿನ |ಹೋರಾಟನಿರತ ಮಹಿಳಾ ಕುಸ್ತಿಪಟುಗಳೊಂದಿಗೆ ರಾಜ್ಯದ ವಿದ್ಯಾರ್ಥಿಗಳಿದ್ದೇವೆ: ಶಿಲ್ಪಾ ಬಿ ಕೆ

Date:

ದೆಹಲಿಯಲ್ಲಿ ಮಹಿಳಾ ಕ್ರೀಡಾಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮೇ 3ರಂದು ದೆಹಲಿ ವಿಶ್ವವಿದ್ಯಾಲಯದ ಮುಂಭಾಗ ಎಐಡಿಎಸ್‌ಒ ಕಾರ್ಯಕರ್ತರು ಮತ್ತು ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ, ಹೋರಾಟನಿರತ ಕುಸ್ತಿಪಟುಗಳಿಗೂ ಕಿರುಕುಳ ನೀಡಿದ್ದಾರೆ. ಇದು ದೆಹಲಿ ಸರ್ಕಾರದ ಅಪ್ರಜಾತಾಂತ್ರಿಕ ಹಾಗೂ ಅತ್ಯಂತ ಕ್ರೂರ ದಾಳಿ ಎಂದು ಎಐಡಿಎಸ್‌ಒ ಕಿಡಿಕಾರಿದೆ. ದೇಶಾದ್ಯಂತ ಶುಕ್ರವಾರ ಅಖಿಲ ಭಾರತ ಬೆಂಬಲ ದಿನ ಆಚರಿಸುತ್ತಿದೆ.

ದೇಶದ ಹೆಮ್ಮೆಯ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮಗೆ ಬಿಜೆಪಿ ಸಂಸದ ಹಾಗೂ ಡಬ್ಲ್ಯೂಎಫ್‌ಐನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೋರಾಟಕ್ಕೆ ದೇಶದ ಹಲವು ಗಣ್ಯ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿ-ಯುವಜನರು ಬೆಂಬಲ ನೀಡಿದ್ದಾರೆ.

“ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಗುರುವಾರ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರತಿಭಟನೆಯ ಸ್ಥಳಕ್ಕೆ ಹಾಸಿಗೆಗಳನ್ನು ಸಾಗಿಸುವ ಸಮಯದಲ್ಲಿ, ಒಬ್ಬ ಕುಡುಕ ಪೊಲೀಸ್ ಪೇದೆ ಮಹಿಳಾ ಕುಸ್ತಿಪಟುಗಳನ್ನು ಅಡ್ಡಗಟ್ಟಿ, ಅಸಭ್ಯವಾಗಿ ವರ್ತಿಸಿ, ಅವರನ್ನು ನಿಂದಿಸಿದ್ದಾರೆ. ಈ ನಡತೆಯನ್ನು ಪ್ರತಿರೋಧಿಸಲು ಮುನ್ನುಗ್ಗಿದ ಇತರ ಹೋರಾಟನಿರತ ಕುಸ್ತಿಪಟುಗಳ ಮೇಲೆಯೂ ಪೊಲೀಸ್ ದೌರ್ಜನ್ಯ ನಡೆಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ” ಎಂದು ಎಐಡಿಎಸ್‌ಒ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಎಲ್ಲ ನಡೆಗಳು ಅತ್ಯಂತ ಅಪ್ರಜಾತಾಂತ್ರಿಕ ಮತ್ತು ಹೋರಾಟವನ್ನು ಹತ್ತಿಕ್ಕಲು ನಡೆಸಿರುವ ಕ್ರೂರ ಪ್ರಯತ್ನ. ತಮ್ಮ ಘನತೆ ಹಾಗೂ ಗೌರವಕ್ಕಾಗಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಅತ್ಯಂತ ನ್ಯಾಯಸಮ್ಮತವಾಗಿದೆ. ಅವರ ಮೇಲೆ ದೌರ್ಜನ್ಯ ಎಸಗಿರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕು” ಎಂದು ಸಂಘಟನೆ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

“ಡಬ್ಲ್ಯೂಎಫ್‌ಐನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಫೆಡರೇಶನ್‌ನಿಂದ ಉಚ್ಛಾಟನೆ ಮಾಡಬೇಕು. ಲೈಂಗಿಕ ಕಿರುಕುಳ ಘಟನೆಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೂ ಶಿಕ್ಷೆ ನೀಡಬೇಕು. ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿ ಪಡಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...