ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕುಮಾರಸ್ವಾಮಿಯವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿ, ಮೌಖಿಕವಾಗಿ ಬೆದರಿಸಿದ್ದಾರೆ. ನನ್ನನ್ನು ಕರ್ನಾಟಕ ರಾಜ್ಯ ಕೇಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ. ನಾನು ಲಂಚ ತೆಗೆದುಕೊಂಡಿದ್ದೇನೆ ಎಂದು ಆರೋಪಿಸಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ or ಚಂದ್ರಶೇಖರ್: ತಪ್ಪು ಯಾರದು? ನೀವೇ ಹೇಳಿ
Date:



