ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯ ಅನುವಾದದಲ್ಲಿ ಉಂಟಾದ ಲೋಪದೋಷದಿಂದ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯ ಆಗಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ, ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸುವಂತೆ ಕಳೆದ ಒಂದು ವಾರದಿಂದ ಪರೀಕ್ಷಾ ಆಕಾಂಕ್ಷಿಗಳು ಪ್ರತಿಭಟಿಸುತ್ತಿದ್ದಾರೆ. ಪ್ರಸ್ತುತ ಅಭ್ಯರ್ಥಿಗಳ ಆಗ್ರಹಕ್ಕೆ ಮಣಿದ ಸರ್ಕಾರವು ಮರುಪರೀಕ್ಷೆ ನಡೆಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು ಮರು ಪರೀಕ್ಷೆ ನಡೆಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
Breaking News | KAS ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ! KPSC
Date:



