ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.
ಜಪ್ತಿಯಾದ ₹2 ಕೋಟಿ ಬಿಜೆಪಿಗೆ ವಾಪಸ್; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ
Date:
ಪೋಸ್ಟ್ ಹಂಚಿಕೊಳ್ಳಿ:



