ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಟ, ಸಾಮಾಜಿಕ ಹೋರಾಟಗಾರ ಚೇತನ್ ಹಾಗೂ ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಪ್ರಮುಖ ಮೂರು ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ. ಜೆಡಿಎಸ್ನವರೇ ಇದನ್ನು ಬೆಳಕಿಗೆ ತಂದಿರಲು ಸಾಧ್ಯವಿಲ್ಲ. ಚುನಾವಣೆ ಮೂರು ದಿನ ಇರುವಾಗ ಕಾಂಗ್ರೆಸ್ನವರು ಏನಾದರೂ ಬಯಲು ಮಾಡಿದ್ದರೆ. ಅವರನ್ನೂ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಷಕಾರಿ ಪುರುಷತ್ವ ಕಾಣುತ್ತಿದೆ: ಚೇತನ್
Date:



