ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

Date:

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಭಾರತದ ಹೈ ಕಮಿಷನರ್‌ ವಿಕ್ರಂನ ದೊರೆಸ್ವಾಮಿ ವಿರೋಧಿಸಿದ್ದಾರೆ.

ಅಂತರಾಷ್ಟ್ರೀಯ ನೌಕಾಯಾನ ಸಂಸ್ಥೆ ಯುನಿಟೆಡ್‌ ಕಿಂಗ್‌ಡಮ್‌ನಲ್ಲಿ ನಡೆಸಿದ ಸಭೆಯಲ್ಲಿ ಹಾರ್ಮುಜ್‌ ಜಲಮಾರ್ಗದ ಸಧ್ಯದ ಪರಿಸ್ಥಿತಿಯ ಕುರಿತು ಮಾತನಾಡಿದರು. ಭಾರತೀಯ ನಾಗರಿಕರ ಮೇಲಿನ ದಾಳಿಯ ಕುರಿತು ಅಸಹನೆ ವ್ಯಕ್ತಪಡಿಸಿದ ದೊರೆಸ್ವಾಮಿ ಜೀವ ಕಳೆದುಕೊಂಡ ಭಾರತೀಯರಿಗೆ ಸಾಂತ್ವನ ನುಡಿದರು.

ವಾಣಿಜ್ಯ ಹಡಗುಗಳ ಗುರಿಯಾಗಿಸಿ ದಾಳಿ ನಡೆಸುವುದು ಹಾಗೂ ನೌಕಾ ಸಿಬ್ಬಂದಿಗಳ ಮೇಲೆ ದಾಳಿ ಮಾಡುವುದು ಆಕ್ಷೇಪಣಾರ್ಹ , ನಿಯಮದ ಪ್ರಕಾರ ಹಾರ್ಮುಜ್‌ ಸೇರಿದಂತೆ ಯಾವುದೇ ಮುಕ್ತ ಅಂತರಾಷ್ಟ್ರೀಯ ಜಲಮಾರ್ಗದ ಮೇಲೆ  ನಿರ್ಬಂಧ ವಿಧಿಸುವುದು ನ್ಯಾಯ ಸಮ್ಮತವಲ್ಲ  ಎಂದು ಆಕ್ಷೇಪ ವ್ಯಕ್ತ ಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಗತೀಕ ಸಂಘರ್ಷ ತಾರಕಕ್ಕೇರಿದ ಈ ಸಂದರ್ಭದಲಿ  ಸಮುದ್ರಯಾನಿಗಳ ಸುರಕ್ಷತೆ ಹಾಗೂ ಭೌಗೋಳಿಕ ನೌಕಾಯಾನದ ಶಿಸ್ತಿನ ಕುರಿತು ವಿಶೇಷ ಗಮನ ವಹಿಸಬೇಕು ಎಂದಿದ್ದಾರೆ.

ಜಾಗತೀಕ ಕಡಲ ಸಾರಿಗೆಯಲ್ಲಿ ಭಾರತದ ಪಾತ್ರದ ಕುರಿತು ಮಾತನಾಡುವಾಗ ಭಾರತವು ಅಂತರಾಷ್ಟ್ರೀಯ ಸಮುದ್ರ ವ್ಯಾಪಾರದಲ್ಲಿ ನಹುಮುಖ್ಯ ಪಾತ್ರ ವಹಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಸಮುದ್ರ ಯಾನದಲ್ಲಿ ಕಾರ್ಯ ನಿರ್ವಹಿಸುವರಲ್ಲಿ ಭಾರತೀಯರು 13% ಇದ್ದಾರೆ. ಈಗ ಚಾಲ್ತಿಯಿರುವ ಜಾಗತಿಕ ಬಿಕ್ಕಟ್ಟು ಸುಮಾರು 23,000 ಭಾರತೀಯ ಸಮುದ್ರ ಯಾನಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

Pakistan collapse against USA T20 World Cup 2026 2026 03 16T225945.688 20260317181844 20260317184921

ಹಾರ್ಮುಜ್‌ ಜಲಮಾರ್ಗದ ಮೂಲಕ ನಡೆಯುವ ಅನಿಲ ಹಾಗೂ ತೈಲ ಸಾಗಾಣೆಗೆ ಅಡ್ಡಿಪಡಿಸುವುದು ಭಾರತದ ಆರ್ಥಿಕ, ಭೌಗೋಳಿಕ ಮಾನವೀಯ ಮತ್ತು ಇಂಧನ ಸರಪಣಿಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.

ಭಾರತ ಮೊದಲಿನಿಂದಲೂ ನಾಗರಿಕ ಹಾಗೂ ಇಂಧನ ಸೌಕರ್ಯಗಳ ಮೇಲಿನ ದಾಳಿಗಳನ್ನು ವಿರೋಧಿಸುತ್ತಲೇ ಬಂದಿದೆ. ಇಂತಹ ಕೃತ್ಯಗಳು ಈಗಾಗಲೇ ಉಲ್ಬಣಗೊಂಡಿರುವ ಜಾಗತಿಕ ಬಿಕ್ಕಟ್ಟುಗಳನ್ನು ಇಂಧನ ಪೂರೈಕೆ ಸರಪಳಿಯನ್ನು ಇನ್ನಷ್ಟು ಹದಗೆಡಿಸುವ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....