ದಾವಣಗೆರೆ | ಅಂಬೇಡ್ಕರ್ ದಲಿತ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಕ್ರಮಕ್ಕೆ ಆಗ್ರಹ

Date:

ಭಾರತ ಸಂವಿಧಾನ, ಸಂವಿಧಾನ ಕರ್ತೃ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ, ಅವಹೇಳನಕಾರಿ ಮತ್ತು ಸಮಾಜದಲ್ಲಿ ದ್ವೇಷ ಉಂಟುಮಾಡುವ ದ್ವೇಷಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿಗಳು, ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರು ಹಾಗೂ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ ಒತ್ತಾಯಿಸಿದರು.‌

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, “ಭಾರತದ ಸಂವಿಧಾನ ಶಿಲ್ಪಿಯಾದ ಡಾ. ಬಿ.ಆರ್ ಅಂಬೇಡ್ಕರ್ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ “ಗುಲಾಮರ ಅಪ್ಪ” ಎಂಬ ಹೆಸರಿನ ಖಾತೆಯಲ್ಲಿ ಉದ್ದೇಶಪೂರ್ವಕವಾಗಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ದಲಿತ ನಾಯಕರಿಗೆ ಅಗೌರವ ತೋರುವ ರೀತಿ ನಿರಂತರವಾಗಿ ಅವಹೇಳನ ಮಾಡುತ್ತಾ ಬಂದಿರುತ್ತಾನೆ. ಪ್ರತಿ ನಿತ್ಯ ಇದೆ ಕಾರ್ಯ ನಡೆಸುತ್ತಾ ಬಂದಿರುತ್ತಾನೆ. ಸಾಮಾಜಿಕ ಸ್ವಾಸ್ಥ್ಯ ಕೆಡುವಂತಹ ಧಾರ್ಮಿಕ, ಸಾಮಾಜಿಕ ಭಾವನೆಗಳಿಗೆ ಧಕ್ಕೆ ತಂದು ವರ್ಗಗಳ ನಡುವೆ ದ್ವೇಷ ಹುಟ್ಟುಹಾಕುವ ಕೃತ್ಯದ ಪೋಟೊಗಳನ್ನು ಪೇಸ್ ಬುಕ್‍ನಲ್ಲಿ ಹಂಚಿಕೊಂಡಿರುತ್ತಾನೆ. ಇವನ ಪೋಸ್ಟ್‌ಗಳು ಅಂಬೇಡ್ಕರ್ರವರ ಚಾರಿತ್ರ್ಯಹರಣ ಮಾಡುವುದೇ ಆಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1003410311
Oplus_131072

“ಪೋಟೋ ಪೋಸ್ಟ್ ಮಾಡಿ ದಲಿತರ ಮೇಲಿನ ಅಸಹನೆ ಅಂಬೇಡ್ಕರ್ ಮೇಲಿನ ದ್ವೇಷ ಹೊರಹಾಕುತ್ತಿರುತ್ತಾನೆ.
ದಲಿತ ಹಿನ್ನೆಲೆಯ ನಾಯಕರ ಅವಹೇಳನ ಮಾಡುವುದು. ನೀಲಿ ಮತ್ತು ಕೇಸರಿ ಬಣ್ಣಗಳ ಮಧ್ಯೆ ವೈಷಮ್ಯ ಬಿತ್ತುವುದು ಈ ಖಾತೆಯ ಉದ್ದೇಶವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರರ ಕುಟುಂಬದ ಬಗ್ಗೆ ಅತಿ ಕೆಳಮಟ್ಟದ ಭಾಷೆ ಬಳಸುವುದು, ಅವಹೇಳನ ಮಾಡುವುದು, ಅವರ ಹೋರಾಟಗಳು ಹಾಗೂ ಮಹಾಡ್ ಚಳವಳಿಯನ್ನು ನಿರಂತರವಾಗಿ ಹೀಯಾಳಿಸುವಂತಹ ಕೃತ್ಯಗಳು ನಡೆಯುತ್ತಿವೆ. ಜೊತೆಗೆ ಅಂಬೇಡ್ಕರ್‌ರವರ ಮೂರ್ತಿ ಭಗ್ನ ಮಾಡುವ ಛಾಯಾಚಿತ್ರಗಳನ್ನು ಹಾಗೂ ಸಮುದಾಯಗಳ ನಡುವೆ ದ್ವೇಷ ಬೀಜ ಬಿತ್ತುವ ಉದ್ದೇಶದ ಪೋಸ್ಟ್‌ಗಳನ್ನು ಹಂಚಿಕೊಂಡು ಸಾಮಾಜಿಕ ಶಾಂತಿಯನ್ನು ಕದಡುವ ಪ್ರಯತ್ನ ಮಾಡಲಾಗಿದೆ” ಎಂದು ಕಿಡಿಕಾರಿದರು.

1003410310
Oplus_131072

“ಭಾರತ ಸಂವಿಧಾನ ಹಾಗೂ ಅದರ ರಚನೆಗೆ ಸಂಬಂಧಿಸಿದಂತೆ ಅಪಹಾಸ್ಯ ಮಾಡುವ ಪೋಸ್ಟ್‌ಗಳು, ಸಂವಿಧಾನದಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ಸಿಗಲಿಲ್ಲ ಎನ್ನುವ ಸುಳ್ಳು ಹಾಗೂ ಸ್ವಾಸ್ಥ್ಯ ಕದಡುವ ಚಿತ್ರಗಳು ಹರಡಲಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ‘ಮಹಾನಾಯಕ’ ಧಾರಾವಾಹಿಯಲ್ಲಿ ಅಂಬೇಡ್ಕರ್‌ರವರ ತಂದೆಯವರ ವಿದ್ಯಾಭ್ಯಾಸದ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.‌

“ದಲಿತರ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡುವ ಭೀಮ್ ಆರ್ಮಿಯನ್ನು ದೇಶದ್ರೋಹಿ ಸಂಘಟನೆಯೆಂದು ಬಿಂಬಿಸುವುದು, “ಗುಲಾಮರ ಅಪ್ಪ” ಎಂಬ ಖಾತೆಯಿಂದ ಪ್ರಚೋದನಕಾರಿ ಚಿತ್ರಗಳನ್ನು ಹಂಚುವುದು. ಈ ಎಲ್ಲಾ ಕೃತ್ಯಗಳು ಸಮುದಾಯಗಳ ಮಧ್ಯೆ ದ್ವೇಷ ಮತ್ತು ಹಿಂಸೆಯನ್ನು ಪ್ರಚೋದಿಸುವ ಉದ್ದೇಶ ಹೊಂದಿವೆ. ಇಂತಹ ಮನುವಾದಿ ಹಾಗೂ ಬಲಪಂಥೀಯ ದ್ವೇಷ ಹರಡುವವರ ವಿರುದ್ಧ ಕಾನೂನಿನ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಅವಶ್ಯಕ” ಎಂದು ಅಭಿಪ್ರಾಯಪಟ್ಟರು.

“ಅಂಬೇಡ್ಕರ್ ರವರ ಆಪಾರ ಜ್ಞಾನದಿಂದ ಸಮಾಜದ ಎಲ್ಲಾ ಜನರು ಗೌರವಯುತವಾಗಿ ಜೀವನ ನಡೆಸುವ ಉದ್ದೇಶದಿಂದ ಸಂವಿಧಾನವನ್ನು ರಚಿಸಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ಗೌರವ ರಕ್ಷಿಸುವುದು ಸಂವಿಧಾನಾತ್ಮಕ ಕರ್ತವ್ಯವಾಗಿದೆ. ಹಾಗಾಗಿ ಅವಹೇಳನ ಸಮಾಜದ ಸ್ವಾಸ್ಥ್ಯ ಕದಡುವ ದಲಿತ ಸಂಘಟನೆಗಳ ಬಗ್ಗೆ ಅವಹೇಳನ ಮಾಡುವ ವ್ಯಕ್ತಿಗಳು, ಬಲಪಂಥೀಯ ಕೋಮುವಾದಿಗಳಿಗೆ ಕಾನೂನಿನ ಮೂಲಕ ಅತ್ಯಂತ ಕಠಿಣವಾದ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲದಿದ್ದರೆ ಇಂತಹ ಕೃತ್ಯಗಳು ಹೆಚ್ಚಾಗಿ ಸಮಾಜದಲ್ಲಿ ಕಲಹಗಳು ಹೆಚ್ಚುವ ಸಾಧ್ಯತೆಗಳನ್ನು ಕಾಣಬಹುದಾಗಿದೆ. ಹಾಗೂ ಇಂತಹ ವಿಕೃತ ಮನಸ್ಥಿತಿಯ ಜನರು ಹಾಗೂ ಬಲಪಂಥೀಯ ಕೋಮುವಾದಿಗಳಿಗೆ ಶಿಕ್ಷೆ ಕೊಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶೂದ್ರರಿಗೆ ಗೌರವ ಸ್ಥಾನಮಾನ ಸಿಗಲು ಅಂಬೇಡ್ಕರ್ ಕಾರಣ:ಐಜಿಪಿ ಡಾ.ಬಿಆರ್ ರವಿಕಾಂತೇಗೌಡ

ದಲಿತ ಸಂಘಟನೆಗಳ ಮುಖಂಡರಾದ ಕುಂದುವಾಡ ಮಂಜುನಾಥ, ಹೆಚ್ ಮಲ್ಲೇಶಪ್ಪ ಹರಿಹರ, ಲಿಂಗರಾಜು ಎಮ್. ಗಾಂಧೀನಗರ, ನಾಗೇಶ್, ಮಾರುತಿ, ವಕೀಲರಾದ ಅರುಣ, ಅಜಯ್, ಜೀವನ್, ವಸಂತ್ ಸೇರಿದಂತೆ ಇತರರು ಹಾಜರಿದ್ದರು.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...