ಗಾಜಾದಲ್ಲಿ ಪ್ರತಿ 10 ಮಕ್ಕಳಲ್ಲಿ 1 ಮಗುವಿಗೆ ಅಪೌಷ್ಟಿಕತೆ: ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ

Date:

ಗಾಜಾದಲ್ಲಿ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಆರ್‌ಡಬ್ಲ್ಯುಎ) ನಡೆಸುತ್ತಿರುವ ಕ್ಲಿನಿಕ್‌ಗಳಲ್ಲಿ ತಪಾಸಣೆಗೊಳಗಾಗಿರುವ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತಿದೆ ಎಂದು ಸಂಸ್ಥೆಯು ಮಂಗಳವಾರ ತಿಳಿಸಿದೆ.

‘‘ನಾಲ್ಕು ತಿಂಗಳ ಹಿಂದೆ ಗಾಝಾದ ಮೇಲಿನ ಮುತ್ತಿಗೆಯನ್ನು ಇಸ್ರೇಲ್ ಸೈನಿಕರು ಬಿಗಿಗೊಳಿಸಿದ ಬಳಿಕ, ಗಾಜಾದಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚುತ್ತಿರುವುದನ್ನು ನಮ್ಮ ಆರೋಗ್ಯ ತಂಡಗಳು ಪತ್ತೆಹಚ್ಚಿವೆ’’ ಎಂದು ಯುಎನ್‌ಆರ್‌ಡಬ್ಲ್ಯುಎಯ ಸಾರ್ವಜನಿಕ ಸಂಪರ್ಕಗಳ ನಿರ್ದೇಶಕಿ ಜೂಲಿಯಟ್ ಟೌಮ ಹೇಳಿದರು.

ಅವರು ಜೋರ್ಡಾನ್‌ನ ಅಮ್ಮಾನ್‌ನಿಂದ ವಿಡಿಯೋ ಲಿಂಕ್ ಮೂಲಕ ಪತ್ರಕರ್ತರೊಂದಿಗೆ ಮಾತನಾಡುತ್ತಾ ಈ ಮಾಹಿತಿಯನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

2024ರ ಜನವರಿಯ ಬಳಿಕ, ಗಾಜಾದಲ್ಲಿರುವ ತನ್ನ ಐದು ಕ್ಲಿನಿಕ್‌ ಗಳಲ್ಲಿ, ಐದು ವರ್ಷಕ್ಕಿಂತ ಕೆಳಗಿನ 2,40,000ಕ್ಕೂ ಅಧಿಕ ಗಂಡು ಮತ್ತು ಹೆಣ್ಣು ಮಕ್ಕಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜೂಲಿಯಟ್ ತಿಳಿಸಿದರು. ಯುದ್ಧಕ್ಕಿಂತ ಮೊದಲು, ಗಾಜಾಪಟ್ಟಿಯಲ್ಲಿ ತೀವ್ರ ಅಪೌಷ್ಟಿಕತೆ ಅಪರೂಪವಾಗಿತ್ತು ಎಂದು ಅವರು ಹೇಳಿದರು.

‘‘ಹಿಂದೆ, ಇಂಥ ಅಪೌಷ್ಟಿಕತೆಯ ಪ್ರಕರಣಗಳನ್ನು ತಾನು ಪಠ್ಯಪುಸ್ತಕಗಳು ಮತ್ತು ಸಾಕ್ಷ್ಯಚಿತ್ರಗಳಲ್ಲಿ ಮಾತ್ರ ನೋಡಿರುವುದಾಗಿ ನಾವು ಮಾತನಾಡಿದ ಓರ್ವ ನರ್ಸ್ ಹೇಳಿದ್ದಾರೆ. ಔಷಧ, ಪೌಷ್ಟಿಕ ಆಹರ, ಸ್ವಚ್ಛತಾ ಸಲಕರಣೆಗಳು, ಇಂಧನ ಎಲ್ಲವೂ ಕ್ಷಿಪ್ರವಾಗಿ ಮುಗಿಯುತ್ತಿದೆ’’ ಎಂದು ಅವರು ತಿಳಿಸಿದರು.

ಗಾಜಾದ ಮೇಲಿನ 11 ವಾರಗಳ ದಿಗ್ಬಂಧನವನ್ನು ಇಸ್ರೇಲ್‌ ಮೇ 19ರಂದು ತೆರವುಗೊಳಿಸಿದೆ. ಆ ಮೂಲಕ, ವಿಶ್ವಸಂಸ್ಥೆಯಿಂದ ಸೀಮಿತ ಪ್ರಮಾಣದ ಸರಬರಾಜುಗಳಿಗೆ ಅವಕಾಶ ನೀಡಿದೆ. ಆದರೆ, ಯುಎನ್‌ಆರ್‌ಡಬ್ಲ್ಯುಎ ಗಾಜಾಕ್ಕೆ ನೆರವು ತರುವುದನ್ನು ನಿಷೇಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...