ಪಾಕಿಸ್ತಾನ | ಪೊಲೀಸ್ ಠಾಣೆಯ ಮೇಲೆಯೇ ಉಗ್ರರಿಂದ ದಾಳಿ; 10 ಸಿಬ್ಬಂದಿ ಮೃತ್ಯು

Date:

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿ ಇದೆ. ಈ ನಡುವೆಯೇ ದೇಶದಲ್ಲಿ ವ್ಯಾಪಕ ಹಿಂಸಾಚಾರ ಘಟನೆಗಳು ನಡೆಯುತ್ತಿರುವುದಾಗಿ ವರದಿಯಾಗುತ್ತಿದೆ. ಈ ನಡುವೆಯೇ ವಾಯುವ್ಯ ಪಾಕಿಸ್ತಾನದಲ್ಲಿನ ಪೊಲೀಸ್‌ ಠಾಣೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದಾಗಿ ಪಾಕ್ ಮಾಧ್ಯಮಗಳು ವರದಿ ಮಾಡಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಪಾಕ್ ಪೊಲೀಸರು, “ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಗೆ ಉಗ್ರರು ಪೊಲೀಸ್ ಠಾಣೆಯ ಮೇಲೆ ಸ್ಟೈಪರ್ ದಾಳಿ ನಡೆಸಿ , ಈ ಕೃತ್ಯ ಎಸಗಿದ್ದಾರೆ. ಬಳಿಕ ಠಾಣೆಯೊಳಗೆ ಪ್ರವೇಶಿಸಿ ಹ್ಯಾಂಡ್‌ ಗ್ರೆನೇಡ್‌ಗಳನ್ನು ಸಿಡಿಸಿದ್ದಾರೆ. ಇದರಿಂದಾಗಿ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಖೈಬರ್-ಪಸ್ತುಂಕ್ವಾ ಪ್ರಾಂತ್ಯದ ದ್ರಾಬಾನ್ ಪ್ರದೇಶದ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟ ಸಿಬ್ಬಂದಿಗಳ ಮೃತದೇಹಗಳನ್ನು ಠಾಣೆಯ ಮುಂಭಾಗದಲ್ಲಿ ಮಂಚವೊಂದರ ಮೇಲೆ ಮಲಗಿಸಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚುತ್ತೇವೆ. ಇದು ಚುನಾವಣೆಗೆ ಸಂಬಂಧಿಸಿದ ದಾಳಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ” ಎಂದು ಪಾಕ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ಫೆ. 8 ರಂದು ಪಾಕಿಸ್ತಾನ ಲೋಕಸಭೆಗೆ ಚುನಾವಣೆ ನಡೆಯಲಿದೆ. ಈ ನಡುವೆಯೇ ಹಿಂಸಾಚಾರ ಪ್ರಕರಣಗಳು ವರದಿಯಾಗುತ್ತಿದೆ.

ಬಲೂಚಿಸ್ತಾನದ ಚುನಾವಣಾ ಆಯೋಗದ ಹೊರಗೆ ಸ್ಫೋಟ
ಬಲೂಚಿಸ್ತಾನದ ನುಷ್ಕಿ ಜಿಲ್ಲೆಯ ಪಾಕಿಸ್ತಾನ ಚುನಾವಣಾ ಆಯೋಗದ (ಇಸಿಪಿ) ಕಚೇರಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ವಾರ ಕರಾಚಿಯಲ್ಲಿರುವ ಚುನಾವಣಾ ಆಯೋಗದ ಕಚೇರಿಯ ಹೊರಗೆ ಸ್ಫೋಟ ಸಂಭವಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...