ಪಾಕಿಸ್ತಾನ | ಅಮೆರಿಕ ರಾಯಭಾರಿ ಕಚೇರಿ ಬಳಿ ಖಮೇನಿ ಬೆಂಬಲಿಗರ ಮೇಲೆ ಗುಂಡಿನ ದಾಳಿ; 12 ಮಂದಿ ಸಾವು

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿ ಭಾನುವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಎದುರು ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ವೇಳೆ ಅಮೆರಿಕದ ಮರೈನ್ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 12 ಮಂದಿ ಪಾಕಿಸ್ತಾನಿ ಪ್ರತಿಭಟನಾಕಾರರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಆರ್ಥಿಕ ರಾಜಧಾನಿ ಕರಾಚಿಯಲ್ಲಿರುವ ರಾಜತಾಂತ್ರಿಕ ವಲಯದ ನಿರ್ಬಂಧಿತ ಪ್ರದೇಶಗಳತ್ತ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದಾಗ ಈ ಗುಂಡಿನ ದಾಳಿ ನಡೆದಿದೆ. ಆದರೆ, ಸಾವು-ನೋವಿನ ನಿಖರ ಸಂಖ್ಯೆಯನ್ನು ಪಾಕಿಸ್ತಾನದ ಅಧಿಕಾರಿಗಳು ಹಾಗೂ ಅಮೆರಿಕದ ಅಧಿಕಾರಿಗಳು ಇದುವರೆಗೂ ಅಧಿಕೃತವಾಗಿ ದೃಢಪಡಿಸಿಲ್ಲ.

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಶಿಯಾ ಸಂಘಟನೆಗಳು ಕರಾಚಿಯ ರಾಯಭಾರಿ ವಲಯದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದವು. ಸುಲ್ತಾನಾಬಾದ್‌ನಿಂದ ಮೈ ಕೊಲಾಚಿ ಕಡೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಾನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲೋ: ಅಫ್ಘಾನ್ ಜೊತೆ ಪಾಕ್ ದೋಸ್ತಿ ಹಳಸಿದ್ದೆಲ್ಲಿ?

ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿ, ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದಾಗ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಂ.ಟಿ. ಖಾನ್ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಮಾರ್ಗಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದು, ಆ ಪ್ರದೇಶಗಳಿಗೆ ತೆರಳದಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಮತ್ತು ಪ್ರತಿಭಟನಾಕಾರರು ಕಚೇರಿಯತ್ತ ಮುನ್ನುಗ್ಗುತ್ತಿದ್ದಂತೆ, ಕಚೇರಿಯೊಳಗಿದ್ದ ಅಮೆರಿಕದ ಮರೈನ್ ಭದ್ರತಾ ಸಿಬ್ಬಂದಿಯನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿತ್ತು. ಪಾಕಿಸ್ತಾನದ ಮಾಧ್ಯಮಗಳ ವರದಿಯ ಪ್ರಕಾರ, ಪ್ರತಿಭಟನಾಕಾರರು ರಾಯಭಾರಿ ಕಚೇರಿಯ ಭದ್ರತಾ ಬೇಲಿಯನ್ನು ಮುರಿಯಲು ಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...