ಪಾಕಿಸ್ತಾನ | ರೈಲು ಹೈಜಾಕ್; 150ಕ್ಕೂ ಹೆಚ್ಚು ಒತ್ತೆಯಾಳುಗಳ ರಕ್ಷಣೆ, 27 ದಂಗೆಕೋರರ ಹತ್ಯೆ

Date:

ಪಾಕಿಸ್ತಾನದ ಲೂಚಿಸ್ತಾನ ಪ್ರದೇಶದಲ್ಲಿ 400ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ದಂಗೆಕೋರರು ಹೈಜಾಕ್ ಮಾಡಿದ್ದು, ಸದ್ಯ ಸುಮಾರು 150ಕ್ಕೂ ಹೆಚ್ಚು ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ. ಹಾಗೆಯೇ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ದಂಗೆಕೋರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಭದ್ರತಾ ಪಡೆಗಳು 155 ಒತ್ತೆಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ಸಮೀಪದ ಪಟ್ಟಣ ಮಾಚ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಾಗಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನ | ಬಂಡುಕೋರರಿಂದ ರೈಲು ‘ಹೈಜಾಕ್’; ಒತ್ತೆಯಾಳಾಗಿ 100 ಮಂದಿ ಸೆರೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಬಂಡುಕೋರರು ಮತ್ತು ಪಾಕಿಸ್ತಾನಿ ಪಡೆಗಳ ನಡುವಿನ ಗುಂಡಿನ ಚಕಮಕಿ ರಾತ್ರಿಯಿಡೀ ಮುಂದುವರೆದಿದೆ. ಸದ್ಯ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಎಷ್ಟು ಒತ್ತೆಯಾಳುಗಳು ಉಳಿದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಪ್ರತ್ಯೇಕತಾವಾದಿ ಗುಂಪು ಬಿಎಲ್‌ಎ ಯಾವುದೇ ಒತ್ತೆಯಾಳುಗಳ ಸಾವುನೋವನ್ನು ನಿರಾಕರಿಸಿದ್ದಾರೆ. ಆದರೆ 30 ಯೋಧರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಆದರೆ ಇದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಬಂಡುಕೋರರ ಗುಂಪೊಂದು ಕೆಲವು ಒತ್ತೆಯಾಳುಗಳನ್ನು ಪರ್ವತಗಳಿಗೆ ಕರೆದೊಯ್ದಿದ್ದು ಸದ್ಯ ಭದ್ರತಾ ಪಡೆಗಳು ಅವರನ್ನು ಬೆನ್ನಟ್ಟುತ್ತಿವೆ ಎಂದು ಹೇಳಲಾಗಿದೆ. ಇನ್ನು ಬಂಡುಕೋರರು ತಪ್ಪಿಸಿಕೊಳ್ಳಲು ಸಣ್ಣ ಗುಂಪುಗಳಾಗಿ ಬೇರ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಸದ್ಯ ಮಿಲಿಟರಿ ಪಡೆಗಳು ಸುರಂಗವನ್ನು ಸುತ್ತುವರೆದಿವೆ.

ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುವ ದಾರಿಯಲ್ಲಿ ಸಾಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಅನ್ನು ಸುರಂಗವೊಂದರಲ್ಲಿ ಸಶಸ್ತ್ರ ದಾಳಿಕೋರರು ತಡೆದಿದ್ದಾರೆ. ರೈಲಿನ ಒಂಬತ್ತು ಬೋಗಿಗಳಲ್ಲಿ ಕನಿಷ್ಠ 400 ಪ್ರಯಾಣಿಕರಿದ್ದರು. ಒಂದು ತಿಂಗಳ ಕಾಲ ಈ ಮಾರ್ಗ ಮುಚ್ಚಲಾಗಿತ್ತು. ಆದರೆ ಇತ್ತೀಚೆಗೆ ಈ ರೈಲು ಮಾರ್ಗ ತೆರೆಯಲಾಗಿದೆ. ಇದೀಗ ಈ ಮಾರ್ಗದಲ್ಲಿಯೇ ರೈಲು ಹೈಜಾಕ್ ಆಗಿದೆ.

ಬಲೂಚಿಸ್ತಾನಕ್ಕೆ ಸ್ವಾತಂತ್ರ್ಯ ನೀಡಬೇಕು ಎಂದು ಆಗ್ರಹಿಸುತ್ತಿರುವ ಪ್ರಬಲ ಪ್ರತ್ಯೇಕತಾವಾದಿ ಗುಂಪು ಬಿಎಲ್‌ಎ ಈ ಅಪಹರಣದ ಬಗ್ಗೆ ತಿಳಿಸಿದೆ. ಮೊದಲು ಹಳಿಗಳನ್ನು ಸ್ಫೋಟಿಸಿದ್ದು ಬಳಿಕ ಲೋಕೋಮೋಟಿವ್ ಚಾಲಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...