ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

Date:

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಾಜಿ ಪ್ರಧಾನಿ, ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಕ್ಷದ ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.

ಅವರಿಗೆ 80 ವರ್ಷ ವಯಸ್ಸಾಗಿತ್ತು. ‌ವಯೋಸಹಜ ಅನಾರೋಗ್ಯದ ಜೊತೆಗೆ ಹೃದಯ ಸಮಸ್ಯೆ ಹೊಂದಿದ್ದ ಖಾಲಿದಾ ಅವರು, ಮಂಗಳವಾರ ಬೆಳಗ್ಗೆ 6ರ ಸುಮಾರಿಗೆ ಕೊನೆಯುಸಿರೆಳೆದಿರುವುದಾಗಿ ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿ(BNP)ಯ ವಕ್ತಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

1991ರಲ್ಲಿ ಖಾಲಿದಾ ಝಿಯಾ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಮುಖ ನಾಯಕಿಯಾಗಿ ಗುರುತಿಸಿದ್ದ ಖಾಲಿದಾ ಅವರು, ಮಾಜಿ ಪ್ರಧಾನಿ, ಸಂಘರ್ಷದ ಬಳಿಕ ಸದ್ಯ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಅವರೊಂದಿಗೆ ಪೈಪೋಟಿಗೆ ಹೆಸರುವಾಸಿಯಾಗಿದ್ದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖಾಲಿದಾ ಝಿಯಾ ಅವರು, ಢಾಕಾದ ಎವರ್‌ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಖಾಲಿದಾ ಝಿಯಾ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ 2018ರಲ್ಲಿ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪ್ರಧಾನಿಯಾಗಿದ್ದ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶದ ಸೇನೆ ದೇಶದ ಅಧಿಕಾರ ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ಈ ನಡುವೆ ಮಾಜಿ ಪ್ರಧಾನಿ ಹಾಗೂ ಪ್ರತಿಪಕ್ಷ ನಾಯಕಿ ಖಾಲಿದಾ ಝಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಆದೇಶಿಸಿದ್ದರಿಂದ ಜೈಲಿನಿಂದ ಬಿಡುಗಡೆ ಹೊಂದಿದ್ದರು.

ಕಳೆದ ವರ್ಷ ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಸಾಮೂಹಿಕ ಪ್ರತಿಭಟನೆಗಳಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಎಂಬಾತನ ಹತ್ಯೆಯ ನಂತರ ಬಾಂಗ್ಲಾದಲ್ಲಿ ಅಶಾಂತಿ ಮತ್ತು ರಾಜಕೀಯ ಅಸ್ಥಿರತೆ ತೀವ್ರಗೊಂಡಿದೆ. ಇದರ ಮಧ್ಯೆಯೇ 17 ವರ್ಷಗಳ ಕಾಲ ಸ್ವಯಂ ಗಡಿಪಾರಿನ ನಂತರ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ)ದ ಹಂಗಾಮಿ ಅಧ್ಯಕ್ಷ, ಖಾಲಿದಾ ಝಿಯಾ ಅವರ ಮಗ ತಾರಿಕ್ ರೆಹಮಾನ್ ಇತ್ತೀಚೆಗಷ್ಟೇ ಸ್ವದೇಶಕ್ಕೆ ಮರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...