ಪೆರು | ಚಿನ್ನದ ಗಣಿಯಲ್ಲಿ ಅಗ್ನಿ ದುರಂತ; 27 ಮಂದಿ ಸಾವು

Date:

  • ಪೆರು ದೇಶದ ಎಸ್ಪೆರಾಂಜಾ ಚಿನ್ನದ ಗಣಿಯಲ್ಲಿ ಬೆಂಕಿ ಅನಾಹುತ
  • 2000ದಿಂದೀಚೆಗೆ ಅತ್ಯಂತ ಭೀಕರ ಗಣಿ ದುರಂತ ಎಂದು ವರದಿ

ಪೆರು ದೇಶದ ದಕ್ಷಿಣ ಭಾಗದ ಚಿನ್ನದ ಗಣಿಯಲ್ಲಿ ಭಾನುವಾರ (ಮೇ 7) ಭಾರೀ ಅಗ್ನಿ ದುರಂತ ಸಂಭವಿಸಿದೆ. ಪರಿಣಾಮ 27 ಕಾರ್ಮಿಕರು ಮೃತಪಟ್ಟಿದ್ದಾರೆ

ಯಾನಾಕ್ವಿಹುವಾ ಜಿಲ್ಲೆಯ ಕಾಂಡೆಸುಯೋಸ್ ಪ್ರಾಂತ್ಯದ ಚಿನ್ನದ ಗಣಿಯಲ್ಲಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಘಟನೆಯು ದಕ್ಷಿಣ ಅಮೆರಿಕ ದೇಶದಲ್ಲಿ 2000 ಇಸವಿಯ ನಂತರ ನಡೆದ ಅತ್ಯಂತ ಭೀಕರ ಗಣಿ ಅಪಘಾತ ಎಂದು ಪೆರು ದೇಶದ ಇಂಧನ ಮತ್ತು ಗಣಿ ಸಚಿವಾಲಯದ ಅಂಕಿ ಅಂಶಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರೆಕ್ವಿಪಾ ಪ್ರದೇಶದ ಲಾ ಎಸ್ಪೆರಾಂಜಾ ಗಣಿಯಲ್ಲಿರುವ ಸುರಂಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಯಾಂಕ್ವಿಹುವಾ ಕಂಪನಿ ಈ ಚಿನ್ನದ ಗಣಿ ನಿರ್ವಹಿಸುತ್ತಿದೆ. ಸದ್ಯ ಈ ಘಟನೆಗೆ ಸಂಬಂಧಿಸಿ ಕಂಪನಿಯು ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ಜಿಯೋವಾನಿ ಮ್ಯಾಟೋಸ್ ಸ್ಥಳೀಯ ಸುದ್ದಿವಾಹಿನಿಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತರ ಶವಗಳನ್ನು ಹೊರತೆಗೆಯುವ ಮೊದಲು ರಕ್ಷಣಾ ತಂಡಗಳು ಗಣಿ ಭದ್ರತೆಗೆ ಪ್ರಯತ್ನಿಸುತ್ತಿವೆ. ಘಟನೆಯಲ್ಲಿ ಮೃತಪಟ್ಟವರನ್ನು ಗುರುತಿಸುವ ಪ್ರಯತ್ನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ದುರಂತದಲ್ಲಿ ಬದುಕುಳಿದವರ ಬಗ್ಗೆ ಮಾಹಿತಿ ಇನ್ನೂ ದೊರೆತಿಲ್ಲ. ಗಣಿಯಲ್ಲಿ ಬೆಂಕಿ ದುರಂತ ಸಂಭವಿಸಿದಾಗ ಎಷ್ಟು ಮಂದಿ ಕಾರ್ಮಿಕರಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೆಚ್ಚಿನ ಗಣಿ ಕಾರ್ಮಿಕರು ಉಸಿರುಗಟ್ಟುವಿಕೆ ಮತ್ತು ಸುಟ್ಟಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಯಾನಾಕ್ವಿಹುವಾ ಮೇಯರ್ ಜೇಮ್ಸ್ ಕ್ಯಾಸ್ಕ್ವಿನೊ ಆಂಡಿನಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಬುಧಾಬಿ | ಗಂಟೆಗೆ 120 ಕಿಲೋಮೀಟರ್ ಕಡಿಮೆ ವೇಗದಲ್ಲಿ ಸಂಚರಿಸಿದರೆ ಭಾರಿ ದಂಡ!

ಪೆರು ವಿಶ್ವದ ಅಗ್ರ ಹಾಗೂ ಎರಡನೇ ಅತಿದೊಡ್ಡ ತಾಮ್ರ ಉತ್ಪಾದಿಸುವ ದೇಶ, ಪ್ರಕಾರ, ಇಲ್ಲಿ ಗಣಿಗಾರಿಕೆಗೆ ಸಂಬಂಧಿಸಿದ ಅಪಘಾತಗಳು ನಡೆಯುತ್ತಲೇ ಇರುತ್ತವೆ.

ಕಳೆದ ವರ್ಷ ದೇಶಾದ್ಯಂತ ಸುಮಾರು 38 ಮಂದಿ ಸಾವನ್ನಪ್ಪಿದ್ದರು. 2002ರಲ್ಲಿ, ಪೆರುವಿನಲ್ಲಿ ವಿವಿಧ ಗಣಿಗಾರಿಕೆ ಅಪಘಾತಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...