ಸುಡಾನ್ ಸಂಘರ್ಷ | ಘರ್ಷಣೆಯಲ್ಲಿ ಸಿಲುಕಿರುವ 31 ಕನ್ನಡಿಗರು; ನೆರವಿಗಾಗಿ ಮನವಿ

Date:

  • ಸುಡಾನ್ ಸಂಘರ್ಷ ಪರಿಣಾಮ 200 ಮಂದಿ ಸಾವು
  • ಏಪ್ರಿಲ್ 15ರಿಂದ ದೇಶದಲ್ಲಿ ಆರಂಭವಾಗಿರುವ ಘರ್ಷಣೆ

ಸುಡಾನ್ ಸಂಘರ್ಷ ಆರಂಭವಾದ ಮೂರು ದಿನದಲ್ಲೇ ಅಪಾರ ಪ್ರಮಾಣದಲ್ಲಿ ಜೀವ ಹಾನಿಯಾಗಿದೆ. ಈ ಸಂಘರ್ಷಪೀಡಿತ ನಗರದಲ್ಲಿ 31 ಮಂದಿ ಬುಡಕಟ್ಟು ಸಮುದಾಯದ ಕನ್ನಡಿಗರು ಸಿಲುಕಿರುವುದು ವರದಿಯಾಗಿದೆ.

ಸುಡಾನ್ ದೇಶದ ಎಲ್ ಫಾಷರ್ ನಗರದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ನಡುವೆ ಶನಿವಾರದಿಂದ (ಏಪ್ರಿಲ್ 15) ಸಂಘರ್ಷ ಉಂಟಾಗಿದೆ. ಇದು ಈಗ ತೀವ್ರ ಸ್ವರೂಪ ಪಡೆದಿದೆ.

ಸುಡಾನ್ ಸಂಘರ್ಷ ನಡೆಯುತ್ತಿರುವ ಸ್ಥಳದಲ್ಲಿ ಮಹಿಳೆಯರೂ ಸೇರಿ 31 ಮಂದಿ ಕನ್ನಡಿಗರು ಸಿಲುಕಿದ್ದಾರೆ. ನೀರು, ಆಹಾರ ಸಿಗದೆ ಕಂಗಾಲಾಗಿದ್ದಾರೆ. ಸಂತ್ರಸ್ತರು ನೆರವಿಗಾಗಿ ಭಾರತದ ಮತ್ತು ಕರ್ನಾಟಕ ಮಾಧ್ಯಮಗಳಿಗೆ ರಕ್ಷಣೆಗಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಮಾಧ್ಯಮಗಳು ಸೋಮವಾರ (ಏಪ್ರಿಲ್ 17) ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡಿಗರು ಮಾಧ್ಯಮಗಳಿಗೆ ವಿಡಿಯೋಗಳನ್ನು ಕಳುಹಿಸುತ್ತಿದ್ದು, ಸುಡಾನ್ ಸಂಘರ್ಷ ಪರಿಣಾಮದ ಬಗ್ಗೆ ವಿವರಿಸಿದ್ದಾರೆ. “ನಾವು ಸುಡಾನ್‌ನಲ್ಲಿ ಬಾಡಿಗೆ ಮನೆಯಲ್ಲಿ ಸಿಲುಕಿದ್ದೇವೆ. ಶಿವಮೊಗ್ಗದ 7 ಮಂದಿ, ಮೈಸೂರು ಹಾಗೂ ಇತರ ಕಡೆಗಳ 19 ಮಂದಿ ಸಿಲುಕಿದ್ದೇವೆ. ನಗರದ ನಾನಾ ಕಡೆಗಳಲ್ಲಿ ಹಲವಾರು ಮಂದಿ ಕನ್ನಡಿಗರು ಸಿಲುಕಿದ್ದೇವೆ. ರಸ್ತೆಗಳಲ್ಲಿ ಮೃತದೇಹಗಳು ಕಾಣಿಸುತ್ತಿವೆ. ಇದರಿಂದ ಭಯಭೀತರಾಗಿದ್ದೇವೆ” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಎಸ್ ಪ್ರಭು ಎಂಬವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

ಸುಡಾನ್‌ನಲ್ಲಿ ಸೇನೆಯ ನಡುವೆ ಸಂಘರ್ಷದಿಂದ ಪ್ರಭು ಅವರು ವಿಡಿಯೋ ಮಾಡುವಾಗಲೂ ಹಿನ್ನೆಲೆಯಲ್ಲಿ ಗುಂಡಿನ ದಾಳಿ, ಶೆಲ್ ದಾಳಿಯ ಸದ್ದು ಕೇಳಿ ಬರುತ್ತಿತ್ತು. “ತಕ್ಷಣವೇ ಈ ಪ್ರದೇಶ ತೆರವು ಮಾಡಿ, ರಾಕೆಟ್ ದಾಳಿ ನಡೆಯುವ ಸಾಧ್ಯತೆಯೂ ಇದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸಲಹೆ ನೀಡಿದ್ದಾರೆ. ಇಲ್ಲಿ ಆಹಾರ, ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಮೂರು ದಿನಗಳ ನಂತರ, ಇಲ್ಲಿ ಒಂದು ಅಂಗಡಿ ತೆರೆದಿದೆ, ನಾವು ಪಡಿತರ ಪಡೆದಿದ್ದೇವೆ. ಇಲ್ಲಿನ ಪರಿಸ್ಥಿತಿ ಬಹಳ ಅಪಾಯಕಾರಿಯಾಗಿ ಬದಲಾಗಿದೆ” ಎಂದು ಪ್ರಭು ಅಳಲು ತೋಡಿಕೊಂಡಿದ್ದಾರೆ.

ಗುಂಡಿನ ದಾಳಿಯಿಂದಾಗಿ ಕಟ್ಟಡಗಳಿಗೆ ಹಾನಿಯಾಗಿರುವ ಚಿತ್ರಗಳನ್ನೂ ಪ್ರಭು ಕಳುಹಿಸಿದ್ದಾರೆ.

ಸುಡಾನ್‌ ಸಂಘರ್ಷ ನಡೆಯುತ್ತಿರುವ ಎಲ್ ಫಾಷರ್‌ನಲ್ಲಿ ಕರ್ನಾಟಕದ ಅನೇಕರು ಸಿಲುಕಿದ್ದಾರೆ. ಈ ಪೈಕಿ ಹೆಚ್ಚಿನವರು ಅಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಇವರು ಕಳೆದ ಕೆಲವು ವರ್ಷಗಳಲ್ಲಿ ಕೆಲಸ ಅರಸಿ ಸುಡಾನ್‌ಗೆ ವಲಸೆ ಹೋಗಿದ್ದರು.

“ಸುಡಾನ್‌ ಸಂಘರ್ಷ ಎರಡು ದಿನಗಳಾದರೂ ಕಡಿಮೆಯಾಗಿಲ್ಲ. ನಾವು ಎಲ್ಲ ಭಾರತೀಯರನ್ನು ಅವರು ಇರುವಲ್ಲಿಯೇ ಮತ್ತು ಹೊರಗೆ ಹೋಗದಂತೆ ವಿನಂತಿಸುತ್ತೇವೆ. ಅಗತ್ಯ ವಸ್ತುಗಳಾದ ಔಷಧಿ, ನೀರು, ಹಣ, ಪಾಸ್‌ಪೋರ್ಟ್, ಒಸಿಐ ಕಾರ್ಡ್ ಜತೆಗೆ ಇಟ್ಟುಕೊಳ್ಳಿ. ಯಾವುದೇ ಕ್ಷಣ ಸಂಚಾರಕ್ಕೆ ಅನುವಾಗುವಂತೆ ಆಹಾರ ಸಿದ್ಧಪಡಿಸಿಟ್ಟುಕೊಳ್ಳಿ” ಎಂದು ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮೂಲಕ ಹೇಳಿದೆ.

ಸುಡಾನ್‌ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಿನ ಘರ್ಷಣೆಯು ರಾಜಧಾನಿ ಖಾರ್ಟೂಮ್‌ನಲ್ಲಿ ಪ್ರಾರಂಭವಾಗಿದ್ದು ಮತ್ತು ಎಲ್ ಫಾಷರ್ ಸೇರಿದಂತೆ ನೆರೆಯ ನಗರಗಳಿಗೆ ಹರಡಿದೆ.

ಸುಡಾನ್ ಸಂಘರ್ಷ ಪರಿಣಾಮ ಈವರೆಗೆ ಖಾರ್ಟೂಮ್ ಸೇರಿದಂತೆ ನಾನಾ ಕಡೆ ಕನಿಷ್ಠ 200 ಮಂದಿ ಮೃತಪಟ್ಟಿದ್ದು, 1800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಬೆಳವಣಿಗೆಯಿಂದ ದೇಶಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್ ನಗರ, ದಕ್ಷಿಣ ಡಾರ್ಫರ್, ನ್ಯಾಲಾ, ರಾಜಧಾನಿ ಖಾರ್ಟೂಮ್ ಸೇರಿ ನಾನಾ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್) ಶಸ್ತ್ರಸಜ್ಜಿತ ವಾಹನಗಳು, ಮಷಿನ್‌ಗನ್ ಜೋಡಿಸಲಾದ ಟ್ರಕ್‌ಗಳು ಆವರಿಸಿವೆ.

ಈ ಸುದ್ದಿ ಓದಿದ್ದಿರಾ? ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಪೀಠ

ಏಪ್ರಿಲ್ 15ರಂದು ಸುಡಾನ್‌ನ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಘರ್ಷಣೆ ಆರಂಭವಾಗಿತ್ತು. ಸೇನೆಯು ಅಬ್ದೆಲ್ ಫತ್ತಾಹ್ ಅಲ್-ಬುರ್ಹಾನ್ ನೇತೃತ್ವದಲ್ಲಿದ್ದರೆ, ಆತನ ನಂತರದ ಸ್ಥಾನದಲ್ಲಿರುವ ಮೊಹಮ್ಮದ್ ಹಮ್ದಾನ್ ಡಗ್ಲೊ ನೇತೃತ್ವದಲ್ಲಿ ಅರೆಸೇನಾ ಪಡೆ ಕಾರ್ಯನಿರ್ವಹಿಸುತ್ತಿದೆ.

ಈ ಇಬ್ಬರೂ 2021ರಲ್ಲಿ ದಂಗೆಯೆದ್ದು ದೇಶದ ಆಡಳಿತವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. 2019ರಲ್ಲಷ್ಟೇ ಸುಡಾನ್‌ನಲ್ಲಿ ಒಮರ್ ಅಲ್ ಬಶೀರ್ ನೇತೃತ್ವದ ನಾಗರಿಕ ಆಡಳಿತ ಅಸ್ತಿತ್ವಕ್ಕೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...