ಹಾಂಗ್‌ಕಾಂಗ್ | ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿ: 44 ಮಂದಿ ಸಾವು, ನೂರಾರು ಮಂದಿ ನಾಪತ್ತೆ

Date:

ಹಾಂಗ್‌ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಂಕಿ ಇನ್ನೂ ಹೊಗೆಯಾಡುತ್ತಿದೆ.

ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಅಗ್ನ ಅವಘಡ ಸಂಭವಿಸಿದೆ. ವಿಶ್ವದ ಅತ್ಯಂತ ಜನನಿಬಿಡ ಮತ್ತು ಅತಿ ಎತ್ತರದ ವಸತಿ ಬ್ಲಾಕ್‌ಗಳನ್ನು ಹೊಂದಿರುವ ಪ್ರದೇಶ ಇದಾಗಿದೆ. ಗುರುವಾರ ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅಗ್ನಿಶಾಮಕ ಇಲಾಖೆಯು ಸಾವಿನ ಸಂಖ್ಯೆ 36 ರಿಂದ 44 ಕ್ಕೆ ಏರಿದೆ ಎಂದಿದೆ.

ಇದನ್ನು ಓದಿದ್ದೀರಾ? ಹಾಂಗ್‌ಕಾಂಗ್‌ ಸಾಂಸ್ಕೃತಿಕ ಉತ್ಸವದಲ್ಲಿ ತುಮಕೂರಿನ ʼಸ್ವರವಿ ಕಲಾ ಕೇಂದ್ರʼದಿಂದ ಭರತನಾಟ್ಯ ಪ್ರದರ್ಶನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ಯಾವ ರೀತಿಯಲ್ಲಿ ಈ ಅವಘಡಕ್ಕೆ ಕಾರಣರಾಗಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ನೀಡಿಲ್ಲ.

ಇನ್ನು ಈ ಬಗ್ಗೆ ಎಎಫ್‌ಪಿಗೆ ಮಾಹಿತಿ ನೀಡಿರುವ ನೆರೆಹೊರೆಯ ಕಟ್ಟಡದಲ್ಲಿ ವಾಸಿಸುವ ಯುಯೆನ್, “ನಿರ್ವಹಣೆಯ ಕಾರಣದಿಂದಾಗಿ ಕಿಟಕಿಗಳನ್ನು ಮುಚ್ಚಲಾಗಿತ್ತು. ಕೆಲವರಿಗೆ ಬೆಂಕಿ ಅನಾಹುತ ನಡೆದಿದೆ ಎಂಬುದೂ ತಿಳಿದಿರಲಿಲ್ಲ. ನೆರೆಹೊರೆಯವರು ಫೋನ್ ಕರೆಗಳ ಮೂಲಕ ಕಟ್ಟಡಕ್ಕೆ ಬೆಂಕಿ ಹತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನೂ ಕೆಲವು ಮನೆಗಳಲ್ಲಿ ವಯಸ್ಸಾದವರಿದ್ದು, ಅವರು ಸಂಪರ್ಕಕ್ಕೂ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.

ಸದ್ಯ 900ಕ್ಕೂ ಹೆಚ್ಚು ಮಂದಿ ತಾತ್ಕಾಲಿಕ ನೆಲೆಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಸಹಾಯ ಕೋರಿದವರನ್ನು ತಲುಪಲು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸಾಧ್ಯವಾಗುತ್ತಿಲ್ಲ. ಬೆಂಕಿ ಅಷ್ಟೊಂದು ಆವರಿಸಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...