‘8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿತ್ತು’: ಭಾರತ-ಪಾಕ್ ಕದನ ವಿರಾಮ ಕುರಿತು ಮತ್ತೆ ಟ್ರಂಪ್ ಹೇಳಿಕೆ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕಾಗಿ ತಾವೇ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ಉಭಯ ರಾಷ್ಟ್ರಗಳ ಸಂಘರ್ಷದ ಸಮಯದಲ್ಲಿ 8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದಿರುವ ಟ್ರಂಪ್, ತಮ್ಮ ಹಿಂದಿನ ಹೇಳಿಕೆಯ 7 ಜೆಟ್‌ ಎಂಬುದನ್ನು 8 ಎಂದು ಪರಿಷ್ಕರಿಸಿದ್ದಾರೆ. ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳು ಮೇ ತಿಂಗಳಿನಲ್ಲಿ ಸಂಘರ್ಷಕ್ಕಿಳಿದಾಗ, ಅವುಗಳ ಜೊತೆಗಿನ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ನಂತರವೇ, ಕದನ ವಿರಾಮಕ್ಕೆ ಒಪ್ಪಿಸಿಕೊಂಡರು ಎಂದು ಟ್ರಂಪ್‌ ಪುನರುಚ್ಚರಿಸಿದ್ದಾರೆ.

ಮಿಯಾಮಿಯಲ್ಲಿ ನಡೆದ ‘ಅಮೆರಿಕ ಬ್ಯುಸಿನೆಸ್ ಫೋರಂ’ನಲ್ಲಿ ಟ್ರಂಪ್ ಮಾತನಾಡಿದರು. “ನಾನು ಭಾರತ ಮತ್ತು ಪಾಕಿಸ್ತಾನದೊಂದಿಗಿನ ವ್ಯಾಪಾರ ಒಪ್ಪಂದಗಳನ್ನು ನಡೆಸುತ್ತಿದ್ದೆ. ಅದೇ ಸಮಯದಲ್ಲಿ, ಅವರು ಯುದ್ಧಕ್ಕೆ ಹೋಗುತ್ತಿದ್ದಾರೆಂದು ನಾನು ಕೇಳಿದೆ. ಸಂಘರ್ಷದಲ್ಲಿ ಏಳು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಮತ್ತು ಎಂಟನೆಯದು ತೀವ್ರವಾಗಿ ಹಾನಿಯಾಗಿದೆ ಎಂಬುದು ನನಗೆ ತಿಳಿಯಿತು. ಎಂಟು ವಿಮಾನಗಳನ್ನು ಅಕ್ಷರಶಃ ಹೊಡೆದುರುಳಿಸಲಾಗಿದೆ. ಅವೆರಡೂ ಪರಮಾಣು ರಾಷ್ಟ್ರಗಳು. ‘ನೀವು ಶಾಂತಿಗೆ ಒಪ್ಪದ ಹೊರತು ನಾನು ನಿಮ್ಮೊಂದಿಗೆ ಯಾವುದೇ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ’ವೆಂದು ನಾನು ಅವರಿಗೆ ಹೇಳಿದೆ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಸಾಧನೆಗಳೇ ಇಲ್ಲ; ವಿಪಕ್ಷ ನಾಯಕರ ವೈಯಕ್ತಿಕ ಟೀಕೆಗೆ ಜೋತು ಬಿದ್ದ ಬಿಜೆಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡು ರಾಷ್ಟ್ರಗಳು ‘ಇಲ್ಲ. ವ್ಯಾಪಾರ ಒಪ್ಪಂದಕ್ಕೂ ಸಂಘರ್ಷಕ್ಕೂ ಯಾವುದೇ ಸಂಬಂಧವಿಲ್ಲ…’ ಎಂದು ಹೇಳಿದರು. ನಾನು ಹೇಳಿದೆ, ‘ಎಲ್ಲ ರೀತಿಯ ಸಂಬಂಧವೂ ಇದೆ. ನೀವು ಪರಮಾಣು ಶಕ್ತಿಗಳು. ನೀವು ಪರಸ್ಪರ ಯುದ್ಧದಲ್ಲಿದ್ದರೆ ನಾವು ನಿಮ್ಮೊಂದಿಗೆ ಯಾವುದೇ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದೆ. ಮರುದಿನ ಎರಡು ದೇಶಗಳು ಶಾಂತಿ ಒಪ್ಪಂದ ಮಾಡಿಕೊಂಡಿವೆ ಎಂದು ನನಗೆ ಕರೆ ಬಂದಿತು. ನಾನು ‘ಧನ್ಯವಾದಗಳು. ವ್ಯಾಪಾರ ಮಾಡೋಣ’ ಎಂದು ಹೇಳಿದೆ. ಅದು ಉತ್ತಮವಲ್ಲವೇ?” ಎಂದು ಟ್ರಂಪ್ ಹೇಳಿದ್ದಾರೆ.

ಮೇ 10ರಂದು ಕದನ ವಿರಾಮ ಘೋಷಣೆಯಾದ ಬಳಿಕ, ಈವರೆಗೆ ಟ್ರಂಪ್‌ ಅವರು ಸುಮಾರು 60 ಬಾರಿ ತಮ್ಮಿಂದಲೇ ಕದನ ವಿರಾಮ ಘೋಷಣೆಯಾಯಿತು ಎಂದು ಹೇಳಿಕೊಂಡಿದ್ದಾರೆ. ಅಂದು ಕೂಡ ಕದನ ವಿರಾಮದ ಕುರಿತು ಟ್ರಂಪ್ ಅವರೇ ಮೊದಲು ಪೋಸ್ಟ್‌ ಹಂಚಿಕೊಂಡಿದ್ದರು. ಟ್ರಂಪ್‌ ಅವರು ಹೇಳಿಕೆಯನ್ನು ಭಾರತವು ನಿರಾಕರಿಸಿದೆ. ಆದರೆ, ಪ್ರಧಾನಿ ಮೋದಿ ಅವರು ಟ್ರಂಪ್ ಹೇಳಿಕೆಗಳಿಗೆ ಈವರೆಗೆ ಪ್ರತಿಕ್ರಿಯಿಸಿಲ್ಲ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರು 26 ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದಿದ್ದರು. ಪ್ರತೀಕಾರವಾಗಿ ಮೇ 7 ರಂದು ಆಪರೇಷನ್ ಸಿಂಧೂರ್‌ ಹೆಸರಿನಲ್ಲಿ ಭಾರತವು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತು. ನಾಲ್ಕು ದಿನಗಳ ಸಂಘರ್ಷದ ಬಳಿಕ, ಮೇ 10ರಂದು ಕದನ ವಿರಾಮ ಘೋಷಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...