ಸಿಂಗಾಪುರ | ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರ ರಹಸ್ಯ ಸಮಾವೇಶ ; ವರದಿ

Date:

  • ಸಿಂಗಾಪುರ ದೇಶದಲ್ಲಿ ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆ ನಂತರ ಸಮಾವೇಶ
  • ರಹಸ್ಯ ಸಮಾವೇಶದ ಬಗ್ಗೆ ಮಾಹಿತಿ ಇಲ್ಲ ಎಂದ ಅಮೆರಿಕ ರಾಯಭಾರ ಕಚೇರಿ

ಸಿಂಗಾಪುರ ದೇಶದಲ್ಲಿ ಭಾನುವಾರ (ಜೂನ್‌ 4) ಶಾಂಗ್ರಿ-ಲಾ ಭದ್ರತಾ ಸಂಸ್ಥೆಗಳ ಸಂವಾದ ಸಭೆಯ ನಂತರ ಪ್ರತ್ಯೇಕ ಸ್ಥಳದಲ್ಲಿ ವಿಶ್ವದ ಪ್ರಮುಖ ಗುಪ್ತಚರ ಸಂಸ್ಥೆಗಳ ಸುಮಾರು 20ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ರಹಸ್ಯ ಸಮಾವೇಶ ನಡೆಸಿದ್ದಾರೆ ಎಂದು ರಾಯಿಟರ್ಸ್‌ ಸುದ್ದಿಸಂಸ್ಥೆ ವರದಿ ಮಾಡಿದೆ.

ಇಂತಹ ರಹಸ್ಯ ಸಭೆಗಳನ್ನು ಸರ್ಕಾರ ಆಯೋಜಿಸಿದೆ. ಹಲವಾರು ವರ್ಷಗಳಿಂದ ಭದ್ರತಾ ಶೃಂಗಸಭೆಯ ಜೊತೆಗೆ ಪ್ರತ್ಯೇಕ ಸ್ಥಳದಲ್ಲಿ ಇಂತಹ ರಹಸ್ಯ ಸಮಾವೇಶ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ಈ ಹಿಂದೆ ರಹಸ್ಯ ಸಭೆಗಳು ವರದಿಯಾಗಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕ ದೇಶದ ಪರವಾಗಿ ಅಲ್ಲಿಯ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಅವ್ರಿಲ್ ಹೈನ್ಸ್ ಸಿಂಗಾಪುರ ದೇಶದಲ್ಲಿನ ಗುಪ್ತಚರ ಮುಖ್ಯಸ್ಥರ ರಹಸ್ಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಉದ್ವಿಗ್ನತೆಯ ಹೊರತಾಗಿಯೂ ಚೀನಾದ ಗುಪ್ತಚರ ನಿರ್ದೇಶಕರು ಉಪಸ್ಥಿತರಿದ್ದರು.

ಸಂಶೋಧನೆ ಮತ್ತು ವಿಶ್ಲೇಷಣಾ ಘಟಕವಾದ ಭಾರತದ ಸಾಗರೋತ್ತರ ಗುಪ್ತಚರ ಸಂಗ್ರಹಣಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಕೂಡ ಭಾಗವಹಿಸಿದ್ದರು ಎಂದು ಭಾರತೀಯ ಮಾಧ್ಯಮಗಳು ವರದಿ ಮಾಡಿವೆ.

ಸಿಂಗಾಪುರ ದೇಶದ ಅಮೆರಿಕ ರಾಯಭಾರ ಕಚೇರಿಯು ಗುಪ್ತಚರ ಅಧಿಕಾರಿಗಳ ರಹಸ್ಯ ಭೇಟಿಯ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಒಡಿಶಾ ಸರ್ಕಾರ

ಈ ಬಗ್ಗೆ ಚೀನಾ ಮತ್ತು ಭಾರತ ಸರ್ಕಾರಗಳು ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಗುಪ್ತಚರ ಸಮಾವೇಶವು ಅಂತಾರಾಷ್ಟ್ರೀಯ ಕಾರ್ಯಸೂಚಿಯ ಒಂದು ಪ್ರಮುಖ ಭಾಗವಾಗಿದೆ” ಎಂದು ಗುಪ್ತಚರ ಸಭೆಯ ಆಯೋಜನೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

“ರಹಸ್ಯ ಸಮಾವೇಶದಲ್ಲಿ ಗುಪ್ತಚರ ಸಂಸ್ಥೆ ಅಧಿಕಾರಿಗಳು ಕೆಲವು ಸಂಕೇತಗಳ ಮೂಲಕ ಚರ್ಚೆ ನಡೆಸಿದರು. ಇದು ಔಪಚಾರಿಕ ಮತ್ತು ಮುಕ್ತ ರಾಜತಾಂತ್ರಿಕತೆ ಕಠಿಣವಾಗುವ ಸಂದರ್ಭದಲ್ಲಿ ಅನುಕೂಲವಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು.

ಯಾವ ವಿಷಯದ ಕುರಿತು ಚರ್ಚೆ ನಡೆಸಲಾಯಿತು ಎಂದು ಬಹಿರಂಗಪಡಿಸಲು ಅಧಿಕಾರಿ ನಿರಾಕರಿಸಿದರು ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...