ಸಿಂಗಾಪುರದ ಬಳಿಕ ಹಾಂಗ್ ಕಾಂಗ್‌ನಲ್ಲಿ ಎಂಡಿಹೆಚ್, ಎವರೆಸ್ಟ್ ಮಸಾಲೆ ಮಾರಾಟ ನಿಷೇಧ

Date:

ಸಿಂಗಾಪುರದ ಬಳಿಕ ಈಗ ಹಾಂಗ್ ಕಾಂಗ್ ಜನಪ್ರಿಯ ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎಂಡಿಹೆಚ್ ಪ್ರೈವೇಟ್‌ನ ಮಸಾಲೆಗಳು ಮತ್ತು ಎವರೆಸ್ಟ್ ಫುಡ್ ಪ್ರಾಡಕ್ಟ್ಸ್ ಪ್ರೈವೇಟ್‌ನ ಎವರೆಸ್ಟ್ ಮಸಾಲೆ ನಿಷೇಧಿಸಿದೆ. ಹಲವಾರು ಮಸಾಲೆ ಮಿಶ್ರಣಗಳಲ್ಲಿ ಕಾರ್ಸಿನೋಜೆನಿಕ್ ಕೀಟನಾಶಕ ಎಥಿಲೀನ್ ಆಕ್ಸೈಡ್ ಕಂಡು ಬಂದಿದೆ ಎಂಬ ಆರೋಪದ ಬಳಿಕ ನಿಷೇಧ ಹೇರಲಾಗಿದೆ.

ಹಾಂಗ್ ಕಾಂಗ್‌ ಸರ್ಕಾರದ ಆಹಾರ ಸುರಕ್ಷತೆ ಕೇಂದ್ರವು ಏಪ್ರಿಲ್ 5ರಂದು ಪರೀಕ್ಷೆ ನಡೆಸಿದಾಗ ಎಚ್‌ಡಿಹೆಚ್ ಗ್ರೂಪ್‌ನ ಮದ್ರಾಸ್ ಕರಿ ಪೌಡರ್, ಸಾಂಬಾರ್ ಮಸಾಲಾ ಪೌಡರ್ ಮತ್ತು ಕರಿ ಪೌಡರ್‌ ಎಂಬ ಮೂರು ಮಸಾಲೆ ಮಿಶ್ರಣಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವುದು ತಿಳಿದು ಬಂದಿದೆ ಎಂದು ಘೋಷಿಸಿದೆ.

“ಸಿಎಫ್‌ಎಸ್‌ ತನ್ನ ದಿನನಿತ್ಯದ ಆಹಾರ ಪರೀಕ್ಷೆ ಕಾರ್ಯಕ್ರಮದ ಅಡಿಯಲ್ಲಿ ತ್ಸಿ ಶಾ ತ್ಸುಯ್‌ನಲ್ಲಿರುವ ಮೂರು ಚಿಲ್ಲರೆ ಮಳಿಗೆಗಳಿಂದ ಈ ಮಸಾಲೆಯನ್ನು ಪರೀಕ್ಷೆಗಾಗಿ ಸಂಗ್ರಹಿಸಿದೆ. ಪರೀಕ್ಷೆಯ ಬಳಿಕ ಈ ಮಸಾಲೆಗಳಲ್ಲಿ ಕೀಟನಾಶಕ, ಎಥಿಲೀನ್ ಆಕ್ಸೈಡ್ ಇರುವುದು ಬಹಿರಂಗವಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಗೋಬಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ಖಾದ್ಯಗಳಲ್ಲಿ ಕೃತಕ ಬಣ್ಣ ನಿಷೇಧ: ಸಚಿವ ಗುಂಡೂರಾವ್

ಇನ್ನು “ಈ ಬಗ್ಗೆ ಸಿಎಫ್‌ಎಸ್ ಸಂಬಂಧಿಸಿದ ಮಾರಾಟಗಾರರಿಗೆ ಮಾಹಿತಿ ನೀಡಿದೆ. ಅಕ್ರಮಗಳು ಮತ್ತು ಮಾರಾಟವನ್ನು ನಿಲ್ಲಿಸಲು, ಈ ಉತ್ಪನ್ನಗಳನ್ನು ನಿಷೇಧಿಸಲು ಸೂಚಿಸಲಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಎವರೆಸ್ಟ್ ಗ್ರೂಪ್‌ನ ಫಿಶ್ ಕರಿ ಮಸಾಲಾದಲ್ಲಿ ಕೀಟನಾಶಕ ಇರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ಇಂಟರ್‌ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್‌ ಗ್ರೂಪ್‌ ನಡೆಸಿದ ಪರೀಕ್ಷೆಯಲ್ಲಿ ಗ್ರೂಪ್ 1 ಕಾರ್ಸಿನೋಜೆನ್ ಎಂದು ವರ್ಗೀಕರಿಸಲಾದ ಎಥಿಲೀನ್ ಆಕ್ಸೈಡ್ ಈ ಮಸಾಲೆಯಲ್ಲಿ ಕಂಡು ಬಂದಿದೆ. ಇದರಿಂದಾಗಿ ಸ್ತನ ಕ್ಯಾನ್ಸರ್‌ನ ಅಪಾಯವಿದೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವಿದೆ ಎಂದು ಪರೀಕ್ಷೆಯಲ್ಲಿ ತಿಳಿದು ಬಂದಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ?  ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಈ ಪರೀಕ್ಷೆ ನಿಟ್ಟಿನಲ್ಲಿ ಹಾಂಗ್ ಕಾಂಗ್ ಮತ್ತು ಸಿಂಗಾಪುರ ಎರಡೂ ಸಾರ್ವಜನಿಕ ಆರೋಗ್ಯವನ್ನು ರಕ್ಷಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಸಿಂಗಾಪುರವೂ ಎವರೆಸ್ಟ್‌ನ ಉತ್ಪನ್ನಗಳನ್ನು ನಿಷೇಧಿಸಿದೆ.

ಇನ್ನು ಭಾರತೀಯ ಮಸಾಲೆ ಬ್ರಾಂಡ್ ವಿದೇಶದಲ್ಲಿ ನಿಷೇಧಕ್ಕೆ ಒಳಗಾಗುತ್ತಿರುವುದು ಇದೇ ಮೊದಲೇನಲ್ಲ. 2023 ರಲ್ಲಿ, ಯುಎಸ್‌ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (ಎಫ್‌ಡಿಎ) ಎವರೆಸ್ಟ್ ಆಹಾರ ಉತ್ಪನ್ನಗಳನ್ನು ನಿ‍ಷೇಧಿಸಿದೆ.Singapore

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...