ಅಮೆರಿಕದಿಂದ ಭಾರತಕ್ಕೆ ನೌಕಾ ರೈಲು ಮಾರ್ಗದ ಚರ್ಚಿಸಿದ ಅಜಿತ್‌ ದೋವಲ್‌

Date:

  • ಅಮೆರಿಕ, ಸೌದಿ ಅರೆಬಿಯ, ಅರಬ್ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಅಜಿತ್‌ ದೋವಲ್‌ ಚರ್ಚೆ
  • ಅಮೆರಿಕದಿಂದ ಪಶ್ಚಿಮ ಏಷ್ಯಾ ಮೂಲಕ ದಕ್ಷಿಣ ಏಷ್ಯಾಗೆ ಜಲ ರೈಲು ಮಾರ್ಗ ಸಂಪರ್ಕ ನಿರ್ಮಾಣ

ಸೌದಿ ಅರೆಬಿಯ ಪ್ರವಾಸದಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಗಿರುವ ಅಜಿತ್‌ ದೋವಲ್‌ ಅವರು ಪ್ರಮುಖ ದೇಶಗಳ ಭದ್ರತಾ ಸಲಹೆಗಾರರೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಈ ವೇಳೆ ದೋವಲ್‌ ಅವರು ಭಾನುವಾರ (ಮೇ 7) ಅಮೆರಿಕ, ಸೌದಿ ಅರೆಬಿಯ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ) ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು. ಅಜಿತ್‌ ದೋವಲ್‌ ಅವರನ್ನು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜ್ಯಾಕ್ ಸುಲ್ಲಿವನ್ ಅವರು ಈ ತಿಂಗಳ ಅಂತ್ಯದಲ್ಲಿ ಆಸ್ಟ್ರೇಲಿಯ ಕ್ವಾಡ್ ಶೃಂಗಸಭೆಯಲ್ಲಿ ಮತ್ತೊಮ್ಮೆ ಭೇಟಿಯಾಗಲಿದ್ದಾರೆ.

ಜನವರಿಯಲ್ಲಿ ಮಹತ್ವಾಕಾಂಕ್ಷೆಯ ಭಾರತ ಅಮೆರಿಕ ಐಸಿಇಟಿ (ಇನಿಶಿಯೇಟಿವ್ ಆನ್ ಕ್ರಿಟಿಕಲ್ ಅಂಡ್ ಎಮರ್ಜಿಂಗ್ ಟೆಕ್ನಾಲಜಿ) ಸಂವಾದವನ್ನು ಪ್ರಾರಂಭಿಸಿದ ನಂತರ ದೋವಲ್ ಮತ್ತು ಸುಲ್ಲಿವಾನ್ ನಡುವಿನ ಮೊದಲ ಸಭೆ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಜಿತ್ ದೋವಲ್‌ ಅವರು ಜ್ಯಾಕ್ ಸುಲ್ಲಿವಾನ್, ಸೌದಿ ಪ್ರಧಾನಿ ರಾಜಕುವರ ಮೊಹಮ್ಮದ್ ಬಿನ್ ಸಲ್ಮಾನ್, ಯುಎಇ ರಾಷ್ಟ್ರೀಯ ಭದ್ರತಾ ಸಲಹೆಗಾರ ಶೇಖ್ ತಹ್ನೂನ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭಾನುವಾರ ಸೌದಿ ಅರೆಬಿಯದಲ್ಲಿ ಭೇಟಿಯಾದರು.

ಈ ವೇಳೆ ಪಶ್ಚಿಮ ಏಷ್ಯಾ ರಾಷ್ಟ್ರಗಳ ಮತ್ತು ದಕ್ಷಿಣ ಏಷ್ಯಾ ರಾಷ್ಟ್ರಗಳ ನಡುವೆ ಸಮುದ್ರ ಮಾರ್ಗಗಳ ಮೂಲಕ ರೈಲು ಸಂಪರ್ಕ ಕಲ್ಪಿಸುವ ಅಮೆರಿಕ ಪ್ರಸ್ತಾಪದ ಕುರಿತು ಚರ್ಚಿಸಲಾಯಿತು ಎಂದು ಶ್ವೇತಭವನ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಅಜಿತ್ ದೋವಲ್‌ ಅವರೊಂದಿಗೆ ಪ್ರಾದೇಶಿಕ ವಿಷಯಗಳ ಕುರಿತು ಚರ್ಚಿಸಲು ಶೇಖ್ ತಹ್ನೂನ್ ಮತ್ತು ಸುಲ್ಲಿವಾನ್ ಪ್ರತ್ಯೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಕ್ರಿಯವಾಗಿರುವ ಚೀನಾ ನೌಕಾಪಡೆ ಮೇಲೆ ನಿಗಾ

ಅಜಿತ್‌ ದೋವಲ್ ಹಾಗೂ ಇತರ ಮೂವರು ನಿಯಮಿತ ಸಮಾಲೋಚನೆಗಳನ್ನು ನಡೆಸಲು ಸಮ್ಮತಿಸಿದ್ದಾರೆ.

ಉಭಯ ದೇಶಗಳು ಪರಸ್ಪರ ಸಹಾಯ ನೀಡಲು ಬದ್ಧರಾಗಿರಬೇಕು. ಯಾವುದೇ ಸಮಸ್ಯೆಗೆ ಸ್ಪಂದಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...