ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

Date:

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗಬಹುದೇ?

ಭಾರತದ ಮೇಲೆ ಟ್ರಂಪ್ ಕೋಪಗೊಂಡಿದ್ದಾರೆ. ಅನಗತ್ಯ ದ್ವೇಷ ಸಾಧಿಸುತ್ತಿದ್ದಾರೆ. ಅಮೆರಿಕದ ನಿಲುವು ಮತ್ತು ಟ್ರಂಪ್ ಸುಂಕ ಹೇರಿಕೆ ಕಂಡ ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್, ‘ಭಾರತದ ಪ್ರಧಾನಿ ಮೋದಿ ಅವರು ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡುವಂತೆ ಶಿಫಾರಸು ಮಾಡಿದರೆ ಎಲ್ಲವೂ ಸರಿಹೋಗುತ್ತದೆ. ಸುಂಕದ ಹೊರೆಯೂ ಇಳಿಯುತ್ತದೆ’ ಎಂದಿರುವುದು ವ್ಯಂಗ್ಯವಾದರೂ, ಕುತೂಹಲ ಕೆರಳಿಸಿದೆ.

”ಭಾರತದ ಮೇಲೆ ಹೇರಲಾಗಿರುವ ಭಾರೀ ಪ್ರಮಾಣದ (50%) ಸುಂಕವು ‘ದ್ವಿಪಕ್ಷೀಯ ಸಂಬಂಧ’ದಲ್ಲಿ ತಪ್ಪು ನಿರ್ಧಾರ. ರಷ್ಯಾದಿಂದ ತೈಲ ಖರೀದಿ ಮಾಡುವ ಕಾರಣಕ್ಕಾಗಿ ಭಾರತಕ್ಕೆ 25% ದಂಡ ವಿಧಿಸಲಾಗಿದೆ. ಇದು ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳಿಗೆ ಹಾನಿಕಾರಕ” ಎಂದಿದ್ದಾರೆ.

“ರಷ್ಯಾದಿಂದ ಚೀನಾ ಕೂಡ ತೈಲ ಖರೀದಿಸುತ್ತಿದೆ. ಆದರೆ, ಚೀನಾ ಮೇಲೆ ಯಾವುದೇ ಹೆಚ್ಚು ಸುಂಕ ಅಥವಾ ದಂಡವನ್ನು ವಿಧಿಸಲಾಗಿಲ್ಲ. ಉಕ್ರೇನ್‌ನಲ್ಲಿ ಕದನ ವಿರಾಮ ಜಾರಿಗೊಳಿಸಲು ಟ್ರಂಪ್ ಮಾಡುತ್ತಿರುವ ಪ್ರಯತ್ನದಿಂದ ಬಳಲುತ್ತಿರುವ ಏಕೈಕ ರಾಷ್ಟ್ರ ಭಾರತ” ಎಂದು ಬೋಲ್ಟನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಂಕ ಹೇರಿಕೆಯಿಂದ ಉಂಟಾದ ಪರಿಣಾಮವನ್ನು ನಿಭಾಯಿಸಲು ಮತ್ತು ಸರಿಪಡಿಸಲು ಹೆಚ್ಚು ಸಮಯ ಬೇಕಾಗುತ್ತದೆ. ಕಳೆದ 30 ದಿನಗಳಲ್ಲಿ ಶ್ವೇತಭವನವು ಭಾರತವನ್ನು ನಡೆಸಿಕೊಂಡ ರೀತಿ ಸರಿಯಲ್ಲ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

“ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ ಘೋಷಿಸಿದೆ. ಅಂತೆಯೇ, ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಮೋದಿ ಅವರು ಶಿಫಾರಸು ಮಾಡಿದರೆ, ಟ್ರಂಪ್ ತೃಪ್ತರಾಗುತ್ತಾರೆ. ಅವರ ದ್ವೇಷವು ಇಳಿಯುತ್ತದೆ. ಸುಂಕ ಹೇರಿಕೆಯೂ ತಗ್ಗುತ್ತದೆ” ಎಂದು ಬೋಲ್ಟನ್ ಹೇಳಿದ್ದಾರೆ.

ಭಾರತದ ಮೇಲೆ ಹೆಚ್ಚು ಸುಂಕ ವಿಧಿಸಿರುವ ತಮ್ಮ ಧೋರಣೆಯನ್ನು ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. “ಉಕ್ರೇನ್ ಮೇಲಿನ ಯುದ್ಧದಲ್ಲಿ ರಷ್ಯಾಗೆ ಭಾರತ ಸಹಾಯ ಮಾಡುತ್ತಿದೆ. ಭಾರತವು ರಷ್ಯಾದಿಂದ ಬೃಹತ್ ಪ್ರಮಾಣದಲ್ಲಿ ತೈಲವನ್ನು ಖರೀದಿಸುತ್ತಿದೆ ಮತ್ತು ಹೆಚ್ಚಿನ ಲಾಭಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ” ಎಂದು ಟ್ರಂಪ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...