ಇನ್ನೂ 30-40 ವರ್ಷ ಬದುಕುವ ಆಶಯ ಹೊಂದಿದ್ದೇನೆ: ದಲೈಲಾಮಾ

Date:

ತನ್ನ ಉತ್ತರಾಧಿಕಾರಿಯ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈಲಾಮಾ, “ಜನರಿಗೆ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಇನ್ನೂ 30 ರಿಂದ 40 ವರ್ಷ ಬದುಕುವ ಆಶಯವನ್ನು ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಭಾನುವಾರ ತಮ್ಮ 90ನೇ ಹುಟ್ಟುಹಬ್ಬಕ್ಕೆ ಮುಂಚಿತವಾಗಿ ಮೆಕ್ಲಿಯೋಡ್ಗಂಜ್‌ನ ಮುಖ್ಯ ದಲೈಲಾಮಾ ದೇವಾಲಯವಾದ ತ್ಸುಗ್ಲಾಗ್‌ಖಾಂಗ್‌ನಲ್ಲಿ ನಡೆದ ದೀರ್ಘಾಯುಷ್ಯ ಪ್ರಾರ್ಥನಾ ಸಮಾರಂಭದಲ್ಲಿ ಮಾತನಾಡಿದ 14ನೇ ದಲೈಲಾಮಾ ಟೆನ್ಜಿನ್ ಗ್ಯಾಟ್ಸೊ, “ಅವಲೋಕಿತೇಶ್ವರನ ಆಶೀರ್ವಾದ ನನ್ನೊಂದಿಗೆ ಇದೆ ಎಂಬ ಸ್ಪಷ್ಟ ಚಿಹ್ನೆಗಳು ಮತ್ತು ಸೂಚನೆಗಳನ್ನು ನಾನು ಪಡೆದಿದ್ದೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಮುಂಡಗೋಡದಲ್ಲಿ ಧರ್ಮಗುರು ದಲೈಲಾಮಾರ 90ನೇ ವರ್ಷದ ಜನ್ಮ ದಿನಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವು ಭವಿಷ್ಯವಾಣಿಗಳನ್ನು ನೋಡುವಾಗ, ಅವಲೋಕಿತೇಶ್ವರರ ಆಶೀರ್ವಾದಗಳು ನನ್ನೊಂದಿಗಿವೆ ಎಂದು ನಾನು ಭಾವಿಸುತ್ತೇನೆ. ನಾನು ಇಲ್ಲಿಯವರೆಗೆ ನನ್ನ ಕೈಲಾದಷ್ಟು ಮಾಡಿದ್ದೇನೆ. ಇನ್ನೂ 30-40 ವರ್ಷ ಬದುಕಬೇಕೆಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರಾರ್ಥನೆಗಳು ಇಲ್ಲಿಯವರೆಗೆ ಫಲ ನೀಡಿವೆ” ಎಂದರು.

“ನಾವು ನಮ್ಮ ದೇಶವನ್ನು ಕಳೆದುಕೊಂಡು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದರೂ, ನಾನು ಇಲ್ಲಿ ಧರ್ಮಶಾಲಾದಲ್ಲಿ ವಾಸಿಸುವವರಿಗೆ ಸಾಕಷ್ಟು ಸಹಾಯ ಮಾಡಲು ಸಾಧ್ಯವಾಯಿತು. ಇನ್ನೂ ಈ ಸೇವೆಯನ್ನು ಮುಂದುವರಿಸುವ ಆಶಯವನ್ನು ಹೊಂದಿದ್ದೇನೆ” ಎಂದು ತಿಳಿಸಿದರು.

ದಲೈಲಾಮಾ ಅವರ ಉತ್ತರಾಧಿಕಾರಿಯ ನೇಮಕದ ಬಗ್ಗೆ ಸ್ಥಾಪಿತ ಸಂಸ್ಥೆ ಮತ್ತು ಟಿಬೆಟಿಯನ್ ಬೌದ್ಧರ ನಾಯಕ ನಿರ್ಧರಿಸುತ್ತಾರೆ. ಮುಂದಿನ ದಲೈಲಾಮಾ ಯಾರಾಗುತ್ತಾರೆ ಎಂಬುದನ್ನು ಅವರೇ ತೀರ್ಮಾನಿಸುತ್ತಾರೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದರು.

ಇದನ್ನು ಓದಿದ್ದೀರಾ? ಕೆಂಗಣ್ಣು ಬಿಟ್ಟು ಚೀನೀಯರನ್ನು ಹೆದರಿಸಬೇಕೆಂದು ಮೂದಲಿಸುತ್ತಿದ್ದ ಮೋದಿ, ಆ ಮಾತನ್ನೇ ಮರೆತರೇಕೆ?! (ಭಾಗ-2)

2015ರಲ್ಲಿ ದಲೈಲಾಮಾ ಅವರೇ ಸ್ಥಾಪಿಸಿದ ಗಾಡೆನ್ ಫೋಡ್ರಾಂಗ್ ಟ್ರಸ್ಟ್‌ನ ಮೂಲಕವೇ ಉತ್ತರಾಧಿಕಾರಿಯ ನೇಮಕವಾಗಲಿದೆ. ತಮ್ಮ ಪುನರ್ಜನ್ಮದ ಮೂಲಕವೇ ಭವಿಷ್ಯದ ದಲೈ ಲಾಮಾ ಅಧಿಕಾರಕ್ಕೆ ಬರಲಿದ್ದು, ಅವರನ್ನು ಗುರುತಿಸುವ ಅಧಿಕಾರ ತನಗೆ ಇರುವುದು ಎಂದು ಈ ಹಿಂದೆಯೇ ದಲೈಲಾಮಾ ಹೇಳಿದ್ದಾರೆ.

ಈ ವಿಚಾರದಲ್ಲಿ ಈಗಾಗಲೇ ಈ ವಿಚಾರದಲ್ಲಿ ಚೀನಾ ಪ್ರತಿಕ್ರಿಯಿಸಿದೆ. ಟಿಬೆಟ್ ವಿಷಯದಲ್ಲಿ ಭಾರತ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ. ಉತ್ತರಾಧಿಕಾರಿಯ ಆಯ್ಕೆಗೆ ತನ್ನ ಸಮ್ಮತಿ ಅಗತ್ಯ ಎಂದು ಚೀನಾ ಪ್ರತಿಪಾದಿಸಿದೆ. ಆದರೆ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಅವರೇ(ಬೌದ್ಧರು)ಹೊಂದಿದ್ದಾರೆ ಎಂದು ಭಾರತ ಸರ್ಕಾರ ಹೇಳಿದೆ. ಈ ವಿಷಯದಲ್ಲಿ ಭಾರತ ಮತ್ತು ಚೀನಾದ ನಡುವೆ ವಾಕ್ಸಮರ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...