ಸರ್ಬಿಯಾ | ಮತ್ತೊಂದು ಗುಂಡಿನ ದಾಳಿಗೆ 8 ಮಂದಿ ಸಾವು

Date:

  • ಸರ್ಬಿಯಾ ದೇಶದಲ್ಲಿ 2013ರ ಗುಂಡಿನ ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದರು
  • ಮೇ 2 ರಂದು ಬೆಲ್‌ಗ್ರೇಡ್‌ನ ಶಾಲೆಯೊಂದರಲ್ಲಿ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ

ಸರ್ಬಿಯಾ ದೇಶದಲ್ಲಿ ಇತ್ತೀಚಿಗೆ ಶಾಲೆಯೊಂದರಲ್ಲಿ ಗುಂಡಿನ ದಾಳಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಭೀಕರ ಗುಂಡಿನ ದಾಳಿ ನಡೆದಿದೆ ಎಂದು ಶುಕ್ರವಾರ (ಮೇ 5) ವರದಿಯಾಗಿದೆ.

ರಾಜಧಾನಿ ಬೆಲ್‌ಗ್ರೇಡ್‌ನಿಂದ 60 ಕಿ.ಮೀ ದೂರ ಇರುವ ಮಾಲೊ ಪ್ರಾಂತ್ಯದ ಮ್ಲಾಡಿನೊವಾಕ್‌ ಎಂಬ ಪಟ್ಟಣದ ಬಳಿ ಅಪರಿಚಿತನೊಬ್ಬ ರಸ್ತೆಯಲ್ಲಿ ತೆರಳುತ್ತಿದ್ದ ವಾಹನಗಳ ಮೇಲೆ ಮನಸೋಯಿಚ್ಛೆ ಗುಂಡಿನ ದಾಳಿ ನಡೆಸಿದ್ದಾನೆ.

ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡ 13 ಮಂದಿಯನ್ನು ಸರ್ಬಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಗುರುವಾರ (ಮೇ 4) ಸಂಜೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಯಂಚಾಲಿತ ಗನ್‌ನೊಂದಿಗೆ ರಸ್ತೆಗೆ ಇಳಿದಿದ್ದ ಆಗಂತುಕ ಚಲಿಸುವ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.

ಸರ್ಬಿಯಾ ದೇಶದ ಈ ಘಟನೆ ಬೆಚ್ಚಿಬೀಳಿಸಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ ಎಂದು ಸುದ್ದಿಸಂಸ್ಥೆಯೊಂದು ಹೇಳಿದೆ.

ಸ್ಥಳದಲ್ಲಿ ಹೆಲಿಕಾಪ್ಟರ್‌ ಜತೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾಳಿ ಮಾಡಿದ ವ್ಯಕ್ತಿ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ದೇಶದಲ್ಲಿ ಮಂಗಳವಾರ (ಮೇ 2) ಬೆಲ್‌ಗ್ರೇಡ್‌ನ ಶಾಲೆಯೊಂದರಲ್ಲಿ ಅಪರಿಚಿತ ಯುವಕನೊಬ್ಬ ಗುಂಡಿನ ದಾಳಿ ನಡೆಸಿದ್ದ. ಪರಿಣಾಮ 8 ಮಕ್ಕಳು ಮತ್ತು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

ಒಬ್ಬ ಶಿಕ್ಷಕ ಮತ್ತು ಆರು ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದರು. ದಾಳಿ ನಡೆಸಿದ ಯುವಕನನ್ನು ಬಂಧಿಸಲಾಗಿತ್ತು.

ಸರ್ಬಿಯಾ ಆಂತರಿಕ ಸಚಿವ ಬ್ರಾಟಿಸ್ಲಾವ್ ಗ್ಯಾಸ್ಸಿಕ್ ಗುಂಡಿನ ದಾಳಿಯನ್ನು ‘ಒಂದು ಭಯೋತ್ಪಾದಕ ಕೃತ್ಯ’ ಎಂದು ಕರೆದಿದ್ದಾರೆ.

ಆಂಬುಲೆನ್ಸ್‌, ವಿಶೇಷ ಪೊಲೀಸ್‌ ಪಡೆ ಹಾಗೂ ಹೆಲಿಕಾಪ್ಟರ್‌ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

2013ರಲ್ಲಿ ಮ್ಲಾಡಿನೊವಾಕ್ ಬಳಿ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದರು. ಇದು ಸರ್ಬಿಯಾದ ಇತ್ತೀಚಿನ ದೊಡ್ಡ ದಾಳಿಯಾಗಿತ್ತು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...