ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,205ಕ್ಕೆ ಏರಿಕೆ

Date:

ಸರಣಿ ಭೂಕಂಪಗಳಿಂದ ನಲುಗಿಹೋಗಿರುವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಾವಿನ ಸಂಖ್ಯೆ 2,205ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ, ಶುಕ್ರವಾರ ಮತ್ತೆ ಎರಡು ಶಕ್ತಿಶಾಲಿ ಮರುಕಂಪನಗಳು ಸಂಭವಿಸಿದೆ.

ಈಗಾಗಲೇ ಸರ್ವಸ್ವವನ್ನೂ ಕಳೆದುಕೊಂಡಿರುವ ಜನರಲ್ಲಿ ಮತ್ತಷ್ಟು ಭೀತಿ ಸೃಷ್ಟಿಯಾಗಿದೆ. ರವಿವಾರದಿಂದ ಈ ಪ್ರಾಂತ್ಯದಲ್ಲಿ ಹಲವಾರು ಭೂಕಂಪ ನಂತರದ ಕಂಪನಗಳು ಸಂಭವಿಸಿದ್ದು, ಗುರುವಾರ ಮತ್ತು ಶುಕ್ರವಾರದ ನಡುವಿನ 12 ಗಂಟೆಗಳ ಅವಧಿಯಲ್ಲಿ ಎರಡು ಪ್ರಬಲ ಭೂಕಂಪ ನಂತರದ ಕಂಪನಗಳು ಸಂಭವಿಸಿವೆ ಎಂದು ಜರ್ಮನ್ ಭೌಗೋಳಿಕ ವಿಜ್ಞಾನ ಸಂಶೋಧನಾ ಕೇಂದ್ರ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮೃತರ ಸಂಖ್ಯೆ 700ರಷ್ಟು ಹೆಚ್ಚಾಗಿದೆ. ರಕ್ಷಣಾ ತಂಡಗಳು ಅವಶೇಷಗಳಡಿ ಮೃತದೇಹಗಳಿಗಾಗಿನ ಶೋಧ ಮುಂದುವರಿಸಿರುವುದರಿಂದ, ಈ ಸಂಖ್ಯೆ ಮತ್ತಷ್ಟು ಅಧಿಕವಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 31ರಂದು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಕುನಾರ್ ಮತ್ತು ನಂಗರ್‌ಹಾರ್ ಪ್ರಾಂತ್ಯಗಳಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತ್ತು. ಇದು ಅಫ್ಘಾನಿಸ್ತಾನದ ಇತ್ತೀಚಿನ ಇತಿಹಾಸದಲ್ಲಿಯೇ ಅತ್ಯಂತ ವಿನಾಶಕಾರಿ ಭೂಕಂಪಗಳಲ್ಲಿ ಒಂದಾಗಿದೆ.

ಈಗಾಗಲೇ ತೀವ್ರ ಬರ, ಆರ್ಥಿಕ ದಿವಾಳಿತನ ಮತ್ತು ನಿರಾಶ್ರಿತರ ಸಮಸ್ಯೆಯಿಂದ ಬಳಲುತ್ತಿರುವ ಅಫ್ಘಾನಿಸ್ತಾನಕ್ಕೆ ಈ ಭೂಕಂಪವು ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿಶ್ವಸಂಸ್ಥೆ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳು ತುರ್ತು ಸಹಾಯಕ್ಕಾಗಿ ಮನವಿ ಮಾಡಿದ್ದು, ಸಂತ್ರಸ್ತರ ಬದುಕು ಅಕ್ಷರಶಃ “ಸಂಕಷ್ಟದೊಳಗಿನ ಸಂಕಷ್ಟ ಎಂಬಂತಾಗಿದೆ.

6,700ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಸಾವಿರಾರು ಕುಟುಂಬಗಳು ಇದೀಗ ಸೂರಿಲ್ಲದೆ, ಆಹಾರ, ನೀರು ಮತ್ತು ವೈದ್ಯಕೀಯ ಸೌಲಭ್ಯಗಳಿಲ್ಲದೆ ಬೀದಿಗೆ ಬಿದ್ದಿವೆ. ರಕ್ಷಣಾ ತಂಡಗಳು ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದರೂ, ದುರ್ಗಮ ಪ್ರದೇಶಗಳು ಮತ್ತು ಭೂಕುಸಿತಗಳಿಂದಾಗಿ ಕಾರ್ಯಾಚರಣೆ ಕಷ್ಟಕರವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...