ಬಾಂಗ್ಲಾದಲ್ಲಿ ಭಾರತ ದ್ವೇಷ: ‘ಧರ್ಮ ನಿಂದನೆ’ ಆರೋಪದಲ್ಲಿ ಯುವಕನ ಹತ್ಯೆ

Date:

ಬಾಂಗ್ಲಾದೇಶದಲ್ಲಿ ಯುವ ನಾಯಕನೊಬ್ಬನ ಹತ್ಯೆಯಾದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಮಾತ್ರವಲ್ಲದೆ, ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡಿರುವ ಭಾರತದ ವಿರೋಧಿ ದ್ವೇಷವೂ ಹೆಚ್ಚಾಗಿದೆ. ಹಿಂಸಾಚಾರ ನಡೆಯುತ್ತಿರುವ ನಡುವೆಯೇ, ಧರ್ಮನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ದೀಪು ಚಂದ್ರದಾಸ್ ಎಂಬ ಯುವಕನನ್ನು ಪ್ರತಿಭಟನಾಕಾರರು ಕ್ರೂರವಾಗಿ ಹತ್ಯೆಗೈದಿದ್ದಾರೆ.

ಬಾಂಗ್ಲಾದ ಮೈಮೆನ್ಸಿಂಗ್ ಜಿಲ್ಲೆಯ ಭಾಲುಕಾದಲ್ಲಿ ದೀಪು ಚಂದ್ರ ದಾಸ್ ಅವರನ್ನು ಹತ್ಯೆಗೈಯ್ಯಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ದೀಪು ಚಂದ್ರದಾಸ್ ಅವರು ಭಾಲುಕಾಪುರದ ಗಾರ್ಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸಿಸವಾಗಿದ್ದರು. ಅವರು ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಹ ಕಾರ್ಮಿಕರು ದೀಪು ವಿರುದ್ಧ ನಿಂದನೆ ಆರೋಪ ಮಾಡಿದ್ದರು. ಈ ಆರೋಪಗಳಿವೆ ಯಾವುದೇ ಪುರಾವೆಗಳು ಇರಲಿಲ್ಲ. ಆರೋಪದ ಕುರಿತು ತನಿಖೆಯನ್ನೂ ನಡೆಸಲಾಗಿಲ್ಲ. ಆದರೆ, ಗುಂಪೊಂದು ಅವರನ್ನು ಸುತ್ತುವರೆದು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿ ಕೊಂದಿದೆ. ಮಾತ್ರವಲ್ಲದೆ, ಅವರ ಮೃತದೇಹವನ್ನು ಮರಕ್ಕೆ ಕಟ್ಟಿ, ಬೆಂಕಿ ಹಚ್ಚಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಸಂಸತ್ತಿನಲ್ಲಿ ಸುಳ್ಳು ಹೇಳಿದ ಶಾ! ಸ್ಥಾನದ ಘನತೆ ಕಳೆದ ಗೃಹಸಚಿವ

ಘಟನೆಯನ್ನು ಪಶ್ಚಿಮ ಬಂಗಾಳದ ಬಿಜೆಪಿ ಖಂಡಿಸಿದೆ. “ಬಾಂಗ್ಲಾದೇಶದಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಹಿಂದು ಯುವಕ ದೀಪು ಚಂದ್ರ ದಾಸ್‌ನನ್ನು ಇಸ್ಲಾಮಿಸ್ಟ್‌ಗಳು ಕ್ರೂರವಾಗಿ ಹೊಡೆದು ಕೊಂದಿದ್ದಾರೆ. ಇಸ್ಲಾಮಿಕ್ ಉಗ್ರವಾದವನ್ನು ನಿಯಂತ್ರಿಸಲಾಗದ ಪರಿಣಾಮ ಇಂತಹ ಭಯಾನಕ ಘಟನೆಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

2025ರ ಡಿಸೆಂಬರ್ 12ರಂದು ಬಾಂಗ್ಲಾದೇಶದ ಯುವ ನಾಯಕ ಮತ್ತು ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕರಾಗಿದ್ದ ಶರೀಫ್ ಓಸ್ಮಾನ್ ಹಾದಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತದ್ದ ಶರೀಫ್ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹಾದಿ ಗುರುವಾರ(ಡಿ.18) ಸಾವನ್ನಪ್ಪಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಾಂಗ್ಲಾದೇಶದಾದ್ಯಂತ ತೀವ್ರ ಹಿಂಸಾಚಾರ, ಪ್ರತಿಭಟನೆಗಳು ಭುಗಿಲೆದ್ದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...