ಮಹಾತ್ಮ ಗಾಂಧೀಜಿ ಹೇಳಿಕೆ ಉಲ್ಲೇಖಿಸಿ ಇಸ್ರೇಲ್‌ಗೆ ತಿರುಗೇಟು ನೀಡಿದ ಲೆಬನಾನ್ ರಾಯಭಾರಿ

Date:

ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಭಾರತದಲ್ಲಿನ ಲೆಬನಾನ್ ರಾಯಭಾರಿ ರಾಬಿ ನಾರ್ಶ್ , ‘ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನಲ್ಲ’ ಎಂದು ಇಸ್ರೇಲ್‌ಗೆ ತಿರುಗೇಟು ನೀಡಿದ್ದಾರೆ.

ನಾನು ಮಹಾತ್ಮ ಗಾಂಧೀಜಿ ಅವರ ಹೇಳಿಕೆಯನ್ನು ನೆನಪಿಸಲು ಬಯಸುತ್ತೇನೆ. ನೀವು ಕ್ರಾಂತಿವಾದಿಯನ್ನು ಕೊಲ್ಲಬಹುದು. ಆದರೆ ಕ್ರಾಂತಿಯನ್ನಲ್ಲ. ನೀವು ಹಿಜ್ಜುಲ್ಲಾ ನಾಯಕರನ್ನು ನಿರ್ಮೂಲನೆ ಮಾಡಬಹುದು. ಆದರೆ ಹಿಜ್ಜುಲ್ಲಾವನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ಹಿಜ್ಜುಲ್ಲಾ ಅಲ್ಲಿ ನೆಲೆನಿಂತಿರುವ ಜನರಾಗಿದ್ದಾರೆ. ಹಿಜ್ಜುಲ್ಲಾ ಜನರಿಂದ ಬೆಂಬಲಿತ ಕಾನೂನುಬದ್ಧ ರಾಜಕೀಯ ಪಕ್ಷವಾಗಿದೆ. ಪ್ಯಾರಾಚೂಟ್‌ನಲ್ಲಿ ಬಂದ ಕಾಲ್ಪನಿಕ ರಚನೆಯಲ್ಲ’ ಎಂದು ಪಿಟಿಐಗೆ ನೀಡಿದ ವಿಡಿಯೊ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಇಸ್ರೇಲ್‌ನಿಂದ ಹಿಬ್ಬುಲ್ಲಾವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅಲ್ಲದೆ ಇಸ್ರೇಲ್‌ನ ಕ್ರೂರತೆಯ ವಿರುದ್ಧ ಹಿಬ್ಬುಲ್ಲಾ ಯಶಸ್ಸು ಗಳಿಸಲಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1985ರಲ್ಲಿ ಲೆಬನಾನಿನಲ್ಲಿ ಇಸ್ರೇಲ್ ಆಕ್ರಮಣದ ವಿರುದ್ಧ ಹಿಜ್ಜುಲ್ಲಾ ಸಂಘಟನೆ ಅಸ್ತಿತ್ವಕ್ಕೆ ಬಂದಿತ್ತು.

‘ಲೆಬನಾನ್‌ನಲ್ಲಿ ಸ್ಥಾಪಿತ ರಾಜಕೀಯ ವ್ಯವಸ್ಥೆಯಡಿಯಲ್ಲಿ ಹಿಜ್ಜುಲ್ಲಾ ಕಾರ್ಯನಿರ್ವಹಿಸುತ್ತದೆ. ಅದೊಂದು ರಾಜಕೀಯ ಪಕ್ಷವಾಗಿದ್ದು, ಕ್ಯಾಬಿನೆಟ್ ಮತ್ತು ಸಂಸತ್ತಿನಲ್ಲೂ ಪ್ರತಿನಿಧಿಸುತ್ತದೆ. ಸಶಸ್ತ್ರ ವಿಭಾಗವನ್ನು ಹಿಬ್ಬುಲ್ಲಾ ಹೊಂದಿದೆ’ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

‘ಇಸ್ರೇಲ್ ನಡೆಸಿದ ದಾಳಿಯಲ್ಲಿ ಲೆಬನಾನಿನಲ್ಲಿ 2.100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 11 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 2.2 ಮಿಲಿಯನ್‌ಗೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ. ಪರಿಣಾಮ ಭೀಕರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾರತದಿಂದ ಔಷಧಗಳನ್ನು ಒಳಗೊಂಡಂತೆ ಲೆಬನಾನಿಗೆ ವೈದ್ಯಕೀಯ ನೆರವನ್ನು ರವಾನಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ನಿರ್ಣಯಗಳನ್ನು ಪಾಲಿಸುವಂತೆ ಇಸ್ರೇಲ್ ಮೇಲೆ ಹೆಚ್ಚಿನ ಒತ್ತಡ ಹೇರುವಂತೆ ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳಿಗೆ ರಾಬಿ ನಾರ್ಶ್ ವಿನಂತಿಸಿದ್ದಾರೆ.

‘ನೆತನ್ಯಾಹು ತಮ್ಮ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ವಿನಾಶದ ಅಮಲಿನಲ್ಲಿದ್ದಾರೆ. ಯಾರಾದರೂ ಅವರನ್ನು ತಡೆಯಬೇಕು’ ಎಂದು ಹೇಳಿದ್ದಾರೆ.

‘ಗಾಜಾದಂತಹ ವಿನಾಶಕಾರಿ ಸ್ಥಿತಿ ಎದುರಾಗುವ ಮುನ್ನ ನಿಮಗೆ ಲೆಬನಾನ್ ಅನ್ನು ಉಳಿಸುವ ಅವಕಾಶವಿದೆ. ಯುದ್ಧವನ್ನು ಕೊನೆಗೊಳಿಸಲು ನಿಮ್ಮ ದೇಶವನ್ನು ಹಿಜ್ಜುಲ್ಲಾದಿಂದ ಮುಕ್ತಗೊಳಿಸಿ ಎಂದು ಲೆಬನಾನಿನ ಜನರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...