ಚಿಲಿ | ಜನನಿಬಿಡ ಪ್ರದೇಶಕ್ಕೆ ಹಬ್ಬಿದ ಕಾಡ್ಗಿಚ್ಚು; 46 ಸಾವು

Date:

ಚಿಲಿ ದೇಶದ ವಾಲ್‌ಪರೈಸೊ ಪ್ರಾಂತ್ಯದ ಅರಣ್ಯದಲ್ಲಿ ಉಂಟಾದ ಕಾಡ್ಗಿಚ್ಚಿನಿಂದ ಕನಿಷ್ಠ 46 ಮಂದಿ ಮೃತಪಟ್ಟು, ಸಾವಿರಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.

ದೇಶದ ಕೇಂದ್ರ ಹಾಗೂ ಮಧ್ಯ ಭಾಗದ ವಾಲ್‌ಪರೈಸೊ ಪ್ರಾಂತ್ಯದ 92 ಅರಣ್ಯಗಳಲ್ಲಿ ಫೆ.03 ರಂದು ಉಂಟಾದ ಕಾಡ್ಗಿಚ್ಚಿನಿಂದ ಈ ಘಟನೆ ಸಂಭವಿಸಿದೆ ಎಂದು ಚಿಲಿಯ ಅಂತರಿಕ ಸಚಿವ ಕರೋಲಿನಾ ತೊಹಾ ತಿಳಿಸಿದ್ದಾರೆ.

ಕಾಡ್ಗಿಚ್ಚು ಜನನಿಬಿಡ ಸಮೀಪ ಆವರಿಸಿದ ಕಾರಣ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ವೇಳೆ ಕಾಡ್ಗಿಚ್ಚಿನ ಸಮೀಪವಿರುವ ಪ್ರದೇಶದಲ್ಲಿ ನೀವು ವಾಸವಿದ್ದರೆ ಮನೆಯನ್ನು ಖಾಲಿ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯಬೇಡಿ. ಬೆಂಕಿಯು ವೇಗವಾಗಿ ಆಗಮಿಸುತ್ತಿದೆ. ಹವಾಮಾನ ಪರಿಸ್ಥಿತಿಯಿಂದಾಗಿ ಬೆಂಕಿಯನ್ನು ನಂದಿಸಲು ಕಷ್ಟವಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಯಾನಕವಾದ ಕಾಡ್ಗಿಚ್ಚು ಎಲ್ಲಡೆ ಆವರಿಸುತ್ತಿರುವ ಕಾರಣ ತಮ್ಮ ಮನೆಗಳನ್ನು ತೊರೆಯುವಂತೆ ಸಾವಿರಾರು ಮಂದಿ ವಾಸವಿರುವ ಪ್ರದೇಶಗಳಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಕಾಡ್ಗಿಚ್ಚಿನ ವಿಕೋಪದ ಬಗ್ಗೆ ರಾಷ್ಟ್ರೀಯ ವಾಹಿನಿಯಲ್ಲಿ ಮಾತನಾಡಿರುವ ಚಿಲಿ ಅಧ್ಯಕ್ಷ ಗಾರ್ಬಿಯಲ್ ಬೋರಿಕ್, ಬೆಂಕಿಯು ಮತ್ತಷ್ಟು ಆವರಿಸುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿಶಾಮಕದಳದವರು ಕೂಡ ಬೆಂಕಿ ಹೊತ್ತಿಕೊಂಡಿರುವ ಪ್ರದೇಶಕ್ಕೆ ಆಗಮಿಸಲು ಕಷ್ಟಪಡುತ್ತಿದ್ದಾರೆ. ರಕ್ಷಣಾ ಕಾರ್ಯಕರ್ತರು ಆಗಮಿಸುವವರೆಗೂ ತಾಳ್ಮೆಯಿಂದ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕಾಡ್ಗಿಚ್ಚು 8 ಸಾವಿರ ಎಕ್ಟೇರ್ ಪ್ರದೇಶವಿರುವ ಕ್ಯೂಲ್‌ಪ್ಯೊ ಮತ್ತು ವಿಲ್ಲಾ ಅಲೆಮನಾ ಅರಣ್ಯಗಳನ್ನು ಭಸ್ಮ ಮಾಡಿದೆ. ಜನ ವಾಸಿಸುವ ಕೆಲವು ಕರಾವಳಿ ಪ್ರದೇಶಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವಾಲ್‌ಪರೈಸೊ ಪ್ರಾಂತ್ಯದಲ್ಲಿ ಬೆಂಕಿಯನ್ನು ನಂದಿಸಿ ಸಾರ್ವಜನಿಕರನ್ನು ರಕ್ಷಿಸಲು 19 ಹೆಲಿಕಾಪ್ಟರ್‌ಗಳು ಹಾಗೂ 450ಕ್ಕೂ ಹೆಚ್ಚು ರಕ್ಷಣಾ ಕಾರ್ಯಕರ್ತರು ಆಗಮಿಸಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಜನವರಿಯಲ್ಲಿ ಕೊಲಂಬಿಯಾದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 42 ಸಾವಿರ ಎಕರೆ ಪ್ರದೇಶದ ಅರಣ್ಯ ಭಸ್ಮಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...