ಅಮೆರಿಕ | ಸ್ಯಾನ್‌ ಫ್ರಾನ್ಸಿಸ್ಕೊದ ಭಾರತ ರಾಯಭಾರ ಕಚೇರಿ ಮೇಲೆ ದಾಳಿ : ಖಲಿಸ್ತಾನಿಗಳ ಕೃತ್ಯ ಶಂಕೆ

Date:

  • ಅಮೆರಿಕ ಸ್ಯಾನ್‌ ಫ್ರಾನ್ಸಿಸ್ಕೊ ರಾಯಭಾರ ಕಚೇರಿಯಲ್ಲಿ ಕಳೆದ ತಿಂಗಳು ಖಲಿಸ್ತಾನಿ ಧ್ವಜ ಹಾರಾಟ
  • ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸಾವಿಗೆ ಪ್ರತೀಕಾರವಾಗಿ ಖಲಿಸ್ತಾನ ಬೆಂಬಲಿಗರ ಕೃತ್ಯ ಶಂಕೆ

ಅಮೆರಿಕ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಗಿದೆ ಎಂದು ಮಂಗಳವಾರ (ಜುಲೈ 4) ಮಾಧ್ಯಮಗಳು ವರದಿ ಮಾಡಿವೆ.

ಈ ವಿಧ್ವಂಸಕ ಕೃತ್ಯದ ಹಿಂದೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಕೈವಾಡವಿದೆ ಎಂದು ಶಂಕಿಸಲಾಗಿದೆ. ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸಿದ್ದು, ಈ ಹಿಂಸಾಚಾರವನ್ನು ‘ಕ್ರಿಮಿನಲ್ ಅಪರಾಧ’ ಎಂದು ಕರೆದಿದೆ.

ಅಮೆರಿಕದ ಸರ್ಕಾರಿ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್‌ ಈ ಕುರಿತು ಟ್ವೀಟ್‌ ಮಾಡಿದ್ದಾರೆ. “ಭಾರತೀಯ ರಾಯಭಾರ ಕಚೇರಿ ಮೇಲಿನ ವಿಧ್ವಂಸಕ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ ಹಾಗೂ ಅಮೆರಿಕದಲ್ಲಿ ವಿದೇಶಿ ರಾಜತಾಂತ್ರಿಕರು ಹಾಗೂ ರಾಯಭಾರದ ವಿರುದ್ಧದ ವಿಧ್ವಂಸಕ ಕೃತ್ಯವು ಕ್ರಿಮಿನಲ್ ಅಪರಾಧವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ತಿಳಿಯುತ್ತಲೇ ಸ್ಯಾನ್‌ ಫ್ರಾನ್ಸಿಸ್ಕೊ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸಿದೆ. ಯಾವುದೇ ದೊಡ್ಡ ಪ್ರಮಾಣದ ಹಾನಿ ಉಂಟಾಗಿಲ್ಲ, ಗಂಭೀರ ಗಾಯಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಸ್ಯಾನ್‌ಫ್ರಾನ್ಸಿಸ್ಕೊದಲ್ಲಿ ಜುಲೈ 2 ರಂದು ಭಾರತದ ರಾಯಭಾರ ಕಚೇರಿಗೆ ಖಲಿಸ್ತಾನ ಭಯೋತ್ಪಾದಕರ ಪರ ಬೆಂಬಲಿಗರು ಬೆಂಕಿ ಹಚ್ಚಲು ಯತ್ನಿಸಿರುವ ವಿಡಿಯೋವೊಂದನ್ನು ದಕ್ಷಿಣ ಏಷ್ಯಾದ ಟಿ.ವಿ ನೆಟ್‌ವರ್ಕ್‌ ದಿಯಾ ಟಿ.ವಿ ಹಂಚಿಕೊಂಡಿದೆ.

“ಹಿಂಸೆ ಹಿಂಸೆಯನ್ನು ಹುಟ್ಟಿಸುತ್ತದೆ” ಎಂದು ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಹೇಳುತ್ತಿರುವುದನ್ನು ವಿಡಿಯೋ ತೋರಿಸಿದೆ. ಅಲ್ಲದೆ ಖಲಿಸ್ತಾನ ಪರ ಸಂಘಟನೆಗಳ ನೇತೃತ್ವ ವಹಿಸಿದ್ದ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಸಾವಿನ ಬಗ್ಗೆ ಪತ್ರಿಕೆಗಳಲ್ಲಿನ ತುಣುಕುಗಳನ್ನು ವಿಡಿಯೋ ತೋರಿಸಿದೆ.

ಈ ಸುದ್ದಿ ಓದಿದ್ದೀರಾ? ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಆರೋಪ ಪಟ್ಟಿಯಲ್ಲಿ ಬಿಹಾರದ ಡಿಸಿಎಂ ತೇಜಸ್ವಿ ಯಾದವ್ ಹೆಸರು

ಭಾರತಕ್ಕೆ ಬೇಕಾಗಿದ್ದ ಕೆನಡಾ ಮೂಲದ ಖಾಲಿಸ್ತಾನ ಟೈಗರ್ ಫೋರ್ಸ್‌ ಮತ್ತು ಸಿಖ್ಸ್‌ ಫಾರ್‌ ಜಸ್ಟೀಸ್‌ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥನಾಗಿದ್ದ ಉಗ್ರ ನಿಜ್ಜರ್ ನನ್ನುಕಳೆದ ತಿಂಗಳು ಕೆನಡಾದ ಗುರುದ್ವಾರದ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಅಮೆರಿಕ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿನ ಭಾರತದ ರಾಯಭಾರಿ ಕಚೇರಿಯಲ್ಲಿ ಕಳೆದ ತಿಂಗಳು ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕಚೇರಿಯ ಆವರಣದಲ್ಲಿ ಭದ್ರತೆಯನ್ನು ಭೇದಿಸಿ ಖಾಲಿಸ್ತಾನ ಚಿಹ್ನೆಯನ್ನು ಹೊಂದಿದ ಎರಡು ಧ್ವಜಗಳನ್ನು ನಿಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...