ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

Date:

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು ಉಲ್ಲೇಖಿಸಿ, ಕೆಲಸದ ವೀಸಾವನ್ನು ವಿಸ್ತರಿಸಲು ಮೋದಿ ಸರ್ಕಾರ ನಿರಾಕರಿಸಿದ ನಂತರ, ನನ್ನನ್ನು ಭಾರತ ತೊರೆಯುವಂತೆ ಬಲವಂತಪಡಿಸಲಾಯಿತು. ಹಾಗಾಗಿ, ನಾನು ಭಾರತ ತೊರೆದಿದ್ದೇನೆ ಎಂದು ಆಸ್ಟ್ರೇಲಿಯಾದ ಪತ್ರಕರ್ತೆಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಗಂಭೀರ ಆರೋಪ ಹೊರಿಸಿದ್ದಾರೆ.

ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ(ABC) ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವನಿ ಡಯಾಸ್, ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಕುರಿತು ವರದಿ ಮಾಡಿದ್ದಕ್ಕೆ ಸರ್ಕಾರ ಆಕ್ಷೇಪಿಸಿದ ನಂತರ ಲೋಕಸಭೆ ಚುನಾವಣೆ ಪ್ರಾರಂಭವಾದ ಏಪ್ರಿಲ್ 19 ರಂದು ಭಾರತ ತೊರೆಯಬೇಕಾಯಿತು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಕಳೆದ ವಾರ, ನಾನು ಹಠಾತ್ತನೆ ಭಾರತ ತೊರೆಯಬೇಕಾಯಿತು. ಮೋದಿ ಸರ್ಕಾರವು ನನ್ನ ವರದಿಯು ನಿಯಮ ಮೀರಿದೆ ಎಂದು ಹೇಳಿ ವೀಸಾ ವಿಸ್ತರಣೆ ನಿರಾಕರಿಸಿತ್ತು. ಹಾಗಾಗಿ, ಅವಧಿ ಮುಗಿದದ್ದಕ್ಕಾಗಿ ಭಾರತ ತೊರೆಯಬೇಕಾಯಿತು” ಎಂದು ಬರೆದುಕೊಂಡಿದ್ದಾರೆ.

“ಭಾರತೀಯ ಸಚಿವಾಲಯದ ನಿರ್ದೇಶನದ ಕಾರಣದಿಂದ ಚುನಾವಣಾ ಮಾನ್ಯತೆ ಬರುವುದಿಲ್ಲ ಎಂದು ತಿಳಿಸಲಾಯಿತು. ಮೋದಿ ಪ್ರಜಾಪ್ರಭುತ್ವ ತಾಯಿ ಎಂದು ಕರೆದಿದ್ದ ಮೊದಲ ಹಂತದ ಮತದಾನದಿಂದು ನಾನು ಭಾರತ ತೊರೆದಿದ್ದೇನೆ” ಎಂದು ಡಯಾಸ್ ಹೇಳಿದ್ದಾರೆ. ಅವನಿ ಡಯಾಸ್, ಎಬಿಸಿ ಸಂಸ್ಥೆಯ ಪರ ಭಾರತದಲ್ಲಿ ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣ ಏಷ್ಯಾ ಬ್ಯೂರೋ ಮುಖ್ಯಸ್ಥೆಯಾಗಿ ಕೆಲಸ ಮಾಡುತ್ತಿದ್ದರು.

ಆಸ್ಟ್ರೇಲಿಯನ್ ಸರ್ಕಾರದ ಮಧ್ಯಪ್ರವೇಶದ ನಂತರ ವೀಸಾವನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಯಿತು. ಇದನ್ನು ನನ್ನ ವಿಮಾನ ಪ್ರಯಾಣಕ್ಕೂ 24 ಗಂಟೆಗಳ ಮುನ್ನ ತಿಳಿಸಲಾಯಿತು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ಈ ನಿರ್ಧಾರವನ್ನು ಡಯಾಸ್‌ಗೆ ತಿಳಿಸಿದ್ದಾರೆ ಎಂದು ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಹೇಳಿದೆ.

ನಿಜ್ಜರ್ ಹತ್ಯೆಯ ಕುರಿತಾದ ತನ್ನ ಸುದ್ದಿ ಸರಣಿಗೆ ಭಾರತದಲ್ಲಿ ಯೂಟ್ಯೂಬ್ ಬ್ಲಾಕ್ ಮಾಡಿದೆ ಎಂದು ಎಬಿಸಿ ಹೇಳಿದೆ.

‘ತಪ್ಪುದಾರಿಗೆಳೆಯುವ ಮಾಹಿತಿ’ ಎಂದ ಕೇಂದ್ರ ಸರ್ಕಾರ!

ಅವನಿ ಡಯಾಸ್ ಅವರ ಹೇಳಿಕೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ಪತ್ರಕರ್ತೆ ಮಾಡಿರುವ ಆರೋಪವು ತಪ್ಪುದಾರಿಗೆಳೆಯುವಂಥದ್ದು ಹಾಗೂ ಚೇಷ್ಟೆಯದ್ದು’ ಎಂದಿದೆ.

ಆಸ್ಟ್ರೇಲಿಯಾದ ಹಿರಿಯ ಪತ್ರಕರ್ತೆಗೆ ವೀಸಾವನ್ನು ವಿಸ್ತರಿಸಲಾಗುವುದು ಎಂದು ಭರವಸೆ ನೀಡಲಾಗಿದೆ, ಅವರು ಲೋಕಸಭಾ ಚುನಾವಣೆಗಳ ಬಗ್ಗೆ ವರದಿ ಮಾಡಬಹುದು ಎಂದು ಅಧಿಕಾರಿಯೋರ್ವರ ಹೇಳಿಕೆ ಉಲ್ಲೇಖಿಸಿ, ಎನ್‌ಡಿಟಿವಿ ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...