ಬಾಂಗ್ಲಾ ಬಿಕ್ಕಟ್ಟು | ಭಾರತವು ಕಾದು ನೋಡುವ ತಂತ್ರ ಅನುಸರಿಸುತ್ತಿದೆ – ಸೇನೆಯು ಜಾಗರೂಕವಾಗಿದೆ; ಸರ್ವಪಕ್ಷ ಸಭೆಯಲ್ಲಿ ಎಸ್ ಜೈಶಂಕರ್ ಮಾಹಿತಿ

Date:

ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಿದ್ದ ಮೀಸಲಾತಿ ವಿರುದ್ದದ ಹೋರಾಟವು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಶೇಕ್ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು, ದೇಶ ತೊರೆದಿದ್ದಾರೆ. ಇದೀಗ, ಸೇನೆಯು ಬಾಂಗ್ಲಾ ಆಡಳಿತದ ಚುಕ್ಕಾಣಿಯನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ. ಈ ನಡುವೆ, ಬಾಂಗ್ಲಾ ಬಿಕ್ಕಟ್ಟಿನ ಬಗ್ಗೆ ಭಾರತದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿದೆ. ‘ಭಾರತವು ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಭಾರತೀಯ ಸೇನೆಯು ಜಾಗರೂಕವಾಗಿದೆ’ ಎಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಬಾಂಗ್ಲಾದೇಶದ ಬೆಳವಣಿಗೆಯಲ್ಲಿ ಯಾವುದೇ ಹೊರಗಿನ ಶಕ್ತಿಗಳ ಪಾತ್ರವಿದೆಯೇ ಎಂಬುದರ ಬಗ್ಗೆ ಸರ್ಕಾರದ ಬಳಿ ಯಾವುದಾದರೂ ಮಾಹಿತಿ ಇದೆಯೇ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಅವರ ಪ್ರಶ್ನೆಗೆ ಉತ್ತರಿಸಿದ ಜೈಶಂಕರ್, “ಪಾಕಿಸ್ತಾನದ ರಾಜತಾಂತ್ರಿಕರು ಬದಲಾಗಿದ್ದು, ಬಾಂಗ್ಲಾ ದಂಗೆಗೆ ಅವರ ಬೆಂಬಲದ ಭಾಗವಾಗಿದೆ ಎಂಬ ಬಗ್ಗೆ ಮಾತ್ರವೇ ಸರ್ಕಾರದ ಬಳಿ ಮಾಹಿತಿ ಇದೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಶೇಖ್ ಹಸೀನಾ ಅವರ ನಡೆಗಳು ಏನಾಗಿರಲಿವೆ ಎಂಬುದರ ಬಗ್ಗೆ ಭಾರತ ಸರ್ಕಾರದ ಗಮನಕ್ಕಿದೆಯೇ ಎಂದು ರಾಹುಲ್ ಪ್ರಶ್ನಿಸಿದ್ದು, “ಅವರೊಂದಿಗೆ ಸರ್ಕಾರವು ಮಾತುಕತೆ ನಡೆಸಿದೆ. ಆದರೆ, ಈ ಕ್ಷಣದಲ್ಲಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಜೈಶಂಕರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತವು ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಭಾರತೀಯ ಸೇನೆ ಕೂಡ ಜಾಗರೂಕವಾಗಿದೆ. ನಮ್ಮ ದೇಶದ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಕೆಲಸ ನಡೆಯುತ್ತಿದೆ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸಿದ್ಧವಾಗಿದೆ” ಎಂದು ಜೈಶಂಕರ್ ಹೇಳಿದ್ದಾರೆ.

ಪ್ರತಿಪಕ್ಷ ನಾಯಕರು ಸರ್ಕಾರದ ಜೊತೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್,ಡಿಎಂಕೆ ಪಕ್ಷದ ಟಿ ಆರ್ ಬಾಲು, ಜೆಡಿಯು ನಾಯಕ ಲಲ್ಲನ್ ಸಿಂಗ್, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಮತ್ತು ಆರ್‌ಜೆಡಿ ಮುಖಂಡ ಡೆರೆಕ್ ಒ’ಬ್ರಿಯಾನ್, ಶಿವಸೇನೆ (ಉದ್ದವ್ ಬಣ)ದ ಅರವಿಂದ್ ಸಾವಂತ್, ಬಿಜು ಜನತಾ ದಳದ ಸಸ್ಮಿತ್ ಪಾತ್ರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎಸ್‌ಪಿ) ಸುಪ್ರಿಯಾ ಸುಳೆ ಮತ್ತು ಟಿಡಿಪಿ ನಾಯಕ ರಾಮ್ ಮೋಹನ್ ನಾಯ್ಡು ಸಭೆಯಲ್ಲಿ ಭಾಗವಹಿಸಿದ್ದರು. ಎಎಪಿ ನಾಯಕರನ್ನು ಸಭೆಗೆ ಆಹ್ವಾನಿಸಿರಲಿಲ್ಲ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...