‘ಇಸ್ಕಾನ್’ ನಿಷೇಧಕ್ಕೆ ಬಾಂಗ್ಲಾ ಹೈಕೋರ್ಟ್‌ ನಕಾರ

Date:

ಬಾಂಗ್ಲಾದೇಶದಲ್ಲಿ ‘ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್’ (ಇಸ್ಕಾನ್)ನ ಚಟುವಟಿಕೆಗಳನ್ನು ನಿಷೇಧಿಸಲು ಬಾಂಗ್ಲಾ ಹೈಕೋರ್ಟ್ ನಿರಾಕರಿಸಿದೆ. ಇಸ್ಕಾನ್‌ನ ಇತ್ತೀಚಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರವು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವಂತೆ ನ್ಯಾಯಾಲಯವು ಅಟಾರ್ನಿ ಜನರಲ್‌ಗೆ ಸೂಚನೆ ನೀಡಿದೆ.

ಇತ್ತೀಚೆಗೆ, ದೇಶದ್ರೋಹದ ಆರೋಪದ ಮೇಲೆ ಹಿಂದು ಸಂಘಟನೆಯ ಮುಖಂಡ ಚಿನ್ಮೋಯ್ ಕೃಷ್ಣ ದಾಸ್ ಎಂಬಾತನನ್ನು ಬಂಧಿಸಲಾಗಿತ್ತು. ಆತನನ್ನು ಈ ಹಿಂದೆ ಇಸ್ಕಾನ್‌ನಿಂದ ಹೊರಹಾಕಲಾಗಿತ್ತು. ಆತನನ್ನು ಬಂಧಿಸಿದ ಕಾರಣಕ್ಕೆ ಆತನ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ನಡೆದು, ವಕೀಲರೊಬ್ಬರು ಸಾವನ್ನಪ್ಪಿದ್ದರು. ಘರ್ಷಣೆ ನಡೆಸಿದ ಸಂಘಟನೆಗೆ ಇಸ್ಕಾನ್‌ ಜೊತೆ ನೇರ ಸಂಬಂಧವಿದ್ದು, ಇಸ್ಕಾನ್‌ಅನ್ನು ದೇಶದಲ್ಲಿ ನಿಷೇಧಿಸಬೇಕೆಂದು ಕೆಲ ವಕೀಲರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ಗುರುವಾರ ಹೈಕೋರ್ಟ್ ಕಲಾಪ ಆರಂಭವಾದಾಗ, ಅಟಾರ್ನಿ ಜನರಲ್ ಕಚೇರಿಯು, “ವಕೀಲ ಸೈಫುಲ್ ಇಸ್ಲಾಂ ಅಲಿಫ್ ಹತ್ಯೆ ಮತ್ತು ಇಸ್ಕಾನ್ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ 33 ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಸ್ಕಾನ್‌ಅನ್ನು ನಿಷೇಧಿಸಲು ಸಾಧ್ಯವಿಲ್ಲ. ನಿಷೇಧದ ಕ್ರಮ ತೆಗೆದುಕೊಳ್ಳಲು ಅಂತಹ ಯಾವುದೇ ಪುರಾವೆಗಳಿಲ್ಲ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಬಾಂಗ್ಲಾದೇಶದ ಜನ ಜೀವನ ಮತ್ತು ಆಸ್ತಿಯನ್ನು ರಕ್ಷಿಸುವ ಬಗ್ಗೆ ಸರ್ಕಾರವು ಜಾಗರೂಕರಾಗಿರಬೇಕು. ಹಿಂದು ಸೇರಿದಂತೆ ಇತರ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಸರ್ಕಾರವು ಖಾತ್ರಿಪಡಿಸಬೇಕು” ಎಂದು ಹೈಕೋರ್ಟ್‌ ಹೇಳಿದೆ.

ಈ ನಡುವೆ, ಸುಪ್ರೀಂ ಕೋರ್ಟ್ ವಕೀಲರ ಸಂಘವು ಬುಧವಾರ ಬಾಂಗ್ಲಾ ಸರ್ಕಾರಕ್ಕೆ ಲೀಗಲ್‌ ನೋಟಿಸ್ ಕಳುಹಿಸಿದೆ. “ಇಸ್ಕಾನ್ಅನ್ನು ‘ತೀವ್ರಗಾಮಿ ಸಂಘಟನೆ’ ಎಂದು ಘೋಷಿಸಿ, ನಿಷೇಧಿಸಬೇಕು” ಎಂದು ಒತ್ತಾಯಿಸಿದೆ.

“ಇಸ್ಕಾನ್ ಬಾಂಗ್ಲಾದೇಶದಲ್ಲಿ ತೀವ್ರಗಾಮಿ ಸಂಘಟನೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೋಮುಗಲಭೆಯನ್ನು ಪ್ರಚೋದಿಸುವ ತಂತ್ರಗಳನ್ನು ಎಣೆಯುವ ಚಟುವಟಿಕೆಗಳಲ್ಲಿ ತೊಡಗಿದೆ. ಪಂಥೀಯ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಸಾಂಪ್ರದಾಯಿಕ ಹಿಂದು ಸಮುದಾಯಗಳ ಮೇಲೆ ತನ್ನ ನಂಬಿಕೆಗಳನ್ನು ಹೇರುವ ಕೆಲಸ ಮಾಡುತ್ತಿದೆ” ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...