ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: 10 ದಿನಗಳ ನಂತರ ಇಂಟರ್ನೆಟ್ ಸೇವೆ ಪುನರಾರಂಭ

Date:

ಮೀಸಲಾತಿ ಸುಧಾರಣೆಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಪಸರಿಸುವುದನ್ನು ತಡೆಯಲು ಬಾಂಗ್ಲಾದೇಶ ದ ಶೇಖ್ ಹಸೀನಾ ಸರ್ಕಾರ ಇಂಟರ್‌ನೆಟ್‌ ಸ್ಥಗಿತಗೊಳಿಸಿತ್ತು. ಈಗ ಪುನಃ 10 ದಿನಗಳ ನಂತರ ಇಂದು(ಜುಲೈ 28) ಇಂಟರ್‌ನೆಟ್‌ಗೆ ವಿಧಿಸಿದ್ದ ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿದ್ದು, ಸೇವೆಗಳನ್ನು ಪುನರಾಂಭಗೊಳಿಸಲಾಗಿದೆ.

ಬಾಂಗ್ಲಾದೇಶದ ಮಾಹಿತಿ ಮತ್ತು ಸಂವಹನ ಸಚಿವ ಜುನೈದ್ ಅಹಮದ್ ಪಾಲಕ್, 5ಜಿ ಇಂಟರ್‌ನೆಟ್‌ಅನ್ನು ಎಲ್ಲ ಬಳಕೆದಾರರಿಗೆ ಮೂರು ದಿನಗಳ ಕಾಲ ಉಚಿತವಾಗಿ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಯ ನಂತರ ಢಾಕಾದಲ್ಲಿ ರೊಬಿ, ಗ್ರಾಮೀಣ್‌ಫೋನ್, ಬಾಂಗ್ಲಾಲಿಂಕ್ ಹಾಗೂ ಇತರ ಸೇವಾ ಪೂರೈಕೆದಾರರು ಇಂಟರ್‌ನೆಟ್ ಸೇವೆಯನ್ನು ಪುನರಾಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಾದ್ಯಂತ ಗಲಭೆ ಹೆಚ್ಚಾದ ನಂತರ ಜುಲೈ 18ರಂದು ಬಾಂಗ್ಲಾದೇಶ ಸರ್ಕಾರ ಮೊಬೈಲ್‌ ಇಂಟರ್‌ನೆಟ್‌ಅನ್ನು ಸ್ಥಗಿತಗೊಳಿಸಿತ್ತು.

“ದೇಶದಲ್ಲಿ ಸಂಘರ್ಷ ಉಂಟಾದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳನ್ನು ತಡೆಯಲು ಇಂಟರ್‌ನೆಟ್‌ಅನ್ನು ಸ್ಥಗಿತಗೊಳಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್ 2024 | ಭಾರತಕ್ಕೆ ಮೊದಲ ಪದಕ; 10 ಮೀಟರ್‌ ಏರ್‌ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್‌

ಜೂಲೈ 18ರಿಂದ 23ರವರೆಗೆ ಉಂಟಾದ ಗಲಭೆಯಲ್ಲಿ ದೇಶಾದ್ಯಂತ ಬ್ಯಾಂಡ್‌ವಿಡ್ತ್ ಪೂರೈಕೆಯಲ್ಲಿ ಶೇ.30 ರಿಂದ 40ರವರೆಗೆ ಹಾನಿಯುಂಟಾಗಿತ್ತು. ಸಂಘರ್ಷ ಉಂಟಾದ ನಂತರ ಒಂದು ಗಂಟೆಯೊಳಗೆ ಬ್ರ್ಯಾಡ್‌ಬ್ಯಾಂಡ್ ಹಾಗೂ ಮೊಬೈಲ್‌ ಇಂಟರ್‌ನೆಟ್‌ಅನ್ನು ಬಂದ್‌ ಮಾಡಲಾಗಿತ್ತು. ಇಂಟರ್‌ನೆಟ್‌ಅನ್ನು ಮರಳಿ ನೀಡಿದರೂ ಮೊಬೈಲ್‌ ಇಂಟರ್‌ನೆಟ್‌ ನಾಳೆಯವರೆಗೂ ಯಥಾಸ್ಥಿತಿ ಮುಂದುವರಿಯಲಿದೆ ಎಂದು ಸಚಿವ ಜುನೈದ್ ಅಹಮದ್ ಪಾಲಕ್ ತಿಳಿಸಿದ್ದಾರೆ.

ದೇಶಾದ್ಯಂತ ಮೀಸಲಾತಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಗಲಭೆಯ ನಂತರ ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ಹಿರಿಯರಿಗಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಿತ್ತು.

ಶೇ. 2 ರಷ್ಟು ಮೀಸಲಾತಿಯನ್ನು ಧಾರ್ಮಿಕ ಅಲ್ಪಸಂಖ್ಯಾತರಿಗೆ, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ಅಂಗವಿಕಲರಿಗೆ ನೀಡಿದರೆ, ಸರ್ಕಾರಿ ಉದ್ಯೋಗದಲ್ಲಿ ಉಳಿದ ಶೇ.93 ಮೀಸಲಾತಿ ಶ್ರೇಣಿಯಾಧಾರದ ಮೇಲೆ ಮುಂದುವರೆಯುವುದಾಗಿ ಕೋರ್ಟ್ ಆದೇಶಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...