ಬಾಂಗ್ಲಾದೇಶ ಹಿಂಸಾಚಾರ | ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 7 ವರ್ಷದ ಮಗು ಸಜೀವ ದಹನ

Date:

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ನಡುವೆ, ಶನಿವಾರ ಲಕ್ಷ್ಮಿಪುರ ಸದರ್ ಉಪಜಿಲ್ಲೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕನ ಮನೆಗೆ ಹೊರಗಿನಿಂದ ಬೀಗ ಹಾಕಿ ಬೆಂಕಿ ಹಚ್ಚಿದ್ದು ಏಳು ವರ್ಷದ ಹೆಣ್ಣು ಮಗು ಸಾವನ್ನಪ್ಪಿದ್ದು, ಮನೆಯಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಭಬಾನಿಗಂಜ್‌ನ ಉದ್ಯಮಿ ಮತ್ತು ಬಿಎನ್‌ಪಿ ಸಂಘಟನಾ ಕಾರ್ಯದರ್ಶಿ ಬೆಲಾಲ್ ಹೊಸೈನ್ ಅವರ ನಿವಾಸದಲ್ಲಿ ಶನಿವಾರ ಮುಂಜಾನೆ ದಾಳಿ ನಡೆದಿದೆ. ಅವರ ಮಗಳು ಆಯೇಷಾ ಅಕ್ತರ್(7) ಮೃತಪಟ್ಟಿರುವುದಾಗಿ ಪೊಲೀಸರು ಧೃಡಪಡಿಸಿದ್ದಾರೆ.

ಬೆಲಾಲ್ ಅವರ ಉಳಿದ ಇಬ್ಬರು ಮಕ್ಕಳಾದ ಸಲ್ಮಾ ಅಕ್ತರ್ ಮತ್ತು ಸಮಿಯಾ ಅಕ್ತರ್ ತೀವ್ರ ಗಾಯಗೊಂಡಿದ್ದಾರೆ. ಬೆಂಕಿಯ ದಾಳಿಗೆ ಅವರ ಮೈಕೈ ಎಲ್ಲಾ ಸುಟ್ಟು ಹೋಗಿದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಢಾಕಾಗೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಜನಸಾಮಾನ್ಯರ ನಾಯಕ ಷರೀಫ್ ಒಸ್ಮಾನ್ ಹಾದಿ ನಿರ್ಗಮನ

ಬೇಲಾಲ್ ಅವರ ತಾಯಿ ಹಜೇರಾ ಬೇಗಂ ಮಾತನಾಡಿ, ದುಷ್ಕರ್ಮಿಗಳು ಎರಡೂ ಬಾಗಿಲುಗಳನ್ನು ಲಾಕ್ ಮಾಡಿ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದರು. “ನಾನು ಊಟದ ನಂತರ ಮಲಗಿದ್ದೆ. ಬೆಳಗಿನ ಜಾವ 1:00 ಗಂಟೆ ಸುಮಾರಿಗೆ, ನಾನು ಎಚ್ಚರಗೊಂಡು ಕಿಟಕಿಯ ಮೂಲಕ ನೋಡಿದಾಗ ನನ್ನ ಮಗನ ಮನೆ ಬೆಂಕಿಯಲ್ಲಿ ಹೊತ್ತಿಕೊಂಡಿರುವುದನ್ನು ನೋಡಿದೆ.

“ನಾನು ಕಿರುಚುತ್ತಾ ಹೊರಗೆ ಓಡಿಹೋದೆ. ಆದರೆ ನಮ್ಮ ಮನೆಯ ಎರಡೂ ಬಾಗಿಲುಗಳು ಹೊರಗಿನಿಂದ ಲಾಕ್ ಆಗಿರುವುದನ್ನು ಕಂಡೆ. ನನಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ. ಕೊನೆಗೆ ನನ್ನ ಮಗ ಬಾಗಿಲು ಮುರಿದು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಅವನ ಹೆಂಡತಿ ನಜ್ಮಾ ಕೂಡ ತಮ್ಮ ನಾಲ್ಕು ತಿಂಗಳ ಮಗು ಅಬೀರ್ ಹೊಸೈನ್ ಮತ್ತು ಆರು ವರ್ಷದ ಮಗ ಹಬೀಬ್ ಜೊತೆ ಹೊರಬರುವಲ್ಲಿ ಯಶಸ್ವಿಯಾದಳು,” ಎಂದು ಅವರು ಹೇಳಿದರು.

“ನನ್ನ ಮೊಮ್ಮಗಳು, ಸಲ್ಮಾ, ಸಾಮಿಯಾ ಮತ್ತು ಆಯೇಷಾ ಒಂದು ಕೋಣೆಯಲ್ಲಿ ಮಲಗಿದ್ದರು. ಅವರಲ್ಲಿ ಇಬ್ಬರು ತೀವ್ರ ಸುಟ್ಟಗಾಯಗಳಿಂದ ರಕ್ಷಿಸಲ್ಪಟ್ಟರು, ಆದರೆ ಕಿರಿಯ ಹುಡುಗಿ (ಆಯೇಷಾ) ಒಳಗೆ ಸುಟ್ಟು ಕರಕಲಾಗಿದ್ದಳು” ಎಂದು ಅವರು ದುಖಃದಿಂದ ಹೇಳಿದರು.

ಲಕ್ಷ್ಮಿಪುರ ಜಿಲ್ಲಾ ಬಿಎನ್‌ಪಿಯ ಸಂಚಾಲಕರಾದ ಹಸಿಬುರ್ ರೆಹಮಾನ್ ಈ ಘಟನೆಯನ್ನು ಖಂಡಿಸಿದರು. ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷೆ ಕೊಡಬೇಕು ಎಂದು ಆಗ್ರಹ ಮಾಡಿದರು.

ಬಾಂಗ್ಲಾದೇಶದ ಯುವನಾಯಕ ಹಾದಿ ಅವರ ಹತ್ಯೆಯ ನಂತರ ಇಡೀ ಬಾಂಗ್ಲಾದೇಶವೇ ಹೊತ್ತಿ ಉರಿಯುತ್ತಿದೆ. ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಡಿಯಲ್ಲಿ ಬಾಂಗ್ಲಾದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಮಧ್ಯೆ ಈ ಘಟನೆ ದುರ್ಘಟನೆ ನಡೆದಿದೆ.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...